<p>ಮಡಿಕೇರಿ: ‘ಕೊಡಗಿನ ಎಲ್ಲ ಹೋಂಸ್ಟೇಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಸೂಚಿಸಿದರು.</p>.<p>ಗಡಿ ಭಾಗ ಕುಟ್ಟ ಗ್ರಾಮದ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಪ್ರಕರಣದ ಕುರಿತು ಮಂಗಳವಾರ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಲ್ಲೇಖಿಸಿದ ಸಚಿವರು, ‘ಅಧಿಕಾರಿಗಳು ಈ ವಿಷಯದಲ್ಲಿ ಕಟ್ಟೆಚ್ಚರ ವಹಿಸಬೇಕು’ ಎಂದರು.</p>.<p>ಶಾಸಕ ಡಾ.ಮಂತರ್ಗೌಡ, ‘ಕೆಲವೆಡೆ ನಿಯಮಗಳ ಉಲ್ಲಂಘನೆ ಯಾಗಿದೆ. ಪ್ರವಾಸೋದ್ಯಮ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ವರ್ಷಕ್ಕೊಮ್ಮೆಯಾದರೂ ಹೋಂಸ್ಟೇಗಳಲ್ಲಿ ನಿಯಮಗಳ ಪಾಲನೆ ಕುರಿತು ಪರಿಶೀಲಿಸಬೇಕು’ ಎಂದರು.</p>.<p>‘ಜಿಲ್ಲೆಯಲ್ಲಿ ಶೇ 20ಕ್ಕೂ ಅಧಿಕ ಹೋಂಸ್ಟೇಗಳು ನೋಂದಣಿ ಆಗಿಲ್ಲ. ಈಗ ಅವುಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗುತ್ತಿದೆ’ ಎಂದು ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-51-1375977029</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ‘ಕೊಡಗಿನ ಎಲ್ಲ ಹೋಂಸ್ಟೇಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಸೂಚಿಸಿದರು.</p>.<p>ಗಡಿ ಭಾಗ ಕುಟ್ಟ ಗ್ರಾಮದ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಪ್ರಕರಣದ ಕುರಿತು ಮಂಗಳವಾರ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಲ್ಲೇಖಿಸಿದ ಸಚಿವರು, ‘ಅಧಿಕಾರಿಗಳು ಈ ವಿಷಯದಲ್ಲಿ ಕಟ್ಟೆಚ್ಚರ ವಹಿಸಬೇಕು’ ಎಂದರು.</p>.<p>ಶಾಸಕ ಡಾ.ಮಂತರ್ಗೌಡ, ‘ಕೆಲವೆಡೆ ನಿಯಮಗಳ ಉಲ್ಲಂಘನೆ ಯಾಗಿದೆ. ಪ್ರವಾಸೋದ್ಯಮ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ವರ್ಷಕ್ಕೊಮ್ಮೆಯಾದರೂ ಹೋಂಸ್ಟೇಗಳಲ್ಲಿ ನಿಯಮಗಳ ಪಾಲನೆ ಕುರಿತು ಪರಿಶೀಲಿಸಬೇಕು’ ಎಂದರು.</p>.<p>‘ಜಿಲ್ಲೆಯಲ್ಲಿ ಶೇ 20ಕ್ಕೂ ಅಧಿಕ ಹೋಂಸ್ಟೇಗಳು ನೋಂದಣಿ ಆಗಿಲ್ಲ. ಈಗ ಅವುಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗುತ್ತಿದೆ’ ಎಂದು ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-51-1375977029</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>