ಆರೋಗ್ಯ ನಿರೀಕ್ಷಣಾಧಿಕಾರಿ ಚಿರಂಜೀವಿ ಪ್ರತಿಕ್ರಿಯಿಸಿ, ‘ಇಲಾಖೆಯ ಸೂಚನೆಯಂತೆ ತಪಾಸಣೆ ನಡೆಸಲಾಗುತ್ತಿದೆ. ಸೋಂಕಿನ ಲಕ್ಷಣ ಕಂಡುಬಂದಲ್ಲಿ ಅವರಿಗೆ ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ವತ್ರೆಗೆ ಕಳಿಸಲಾಗುತ್ತದೆ. ಇಲ್ಲಿಯವರೆಗೆ ನಡೆದ ತಪಾಸಣೆಯ ಸಂದರ್ಭ ಯಾರಿಗೂ ಸೋಂಕಿನ ಲಕ್ಷಣ ಕಂಡುಬಂದಿಲ್ಲ’ ಎಂದು ಮಾಹಿತಿ ನೀಡಿದರು.