<p><strong>ಕುಶಾಲನಗರ</strong>: ‘12ನೇ ಶತಮಾನದ ವಚನಕಾರರ ಸಾಮಾಜಿಕ ಆಂದೋಲನದಿಂದಾಗಿಯೇ ಸಮಾಜದಲ್ಲಿದ್ದ ತಾರತಮ್ಯ, ಜಾತಿ ಪದ್ಧತಿ, ಮೇಲು ಕೀಳು ಎಂಬ ಭಾವನೆಗಳು ದೂರವಾಗಲು ಕಾರಣವಾಗಿದ್ದು, ವಚನಕಾರರ ಚಳವಳಿ ನಾಡಿಗೆ ನೀಡಿರುವ ಬಹು ದೊಡ್ಡ ಬಳುವಳಿ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ನಿರ್ದೇಶಕ ಮೆ.ನಾ.ವೆಂಕಟನಾಯಕ್ ಹೇಳಿದರು.</p>.<p>ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ಯಿಂದ ಗುರುವಾರ ಹಮ್ಮಿಕೊಂಡಿದ್ದ 12ನೇ ಶತಮಾನದ ವಚನಯೋಗಿ ಶ್ರೀ ಸಿದ್ಧರಾಮೇಶ್ವರರ ಜಯಂತ್ಯುತ್ಸವದಲ್ಲಿ ವಿದ್ಯಾರ್ಥಿಗಳಿಗೆ ‘ಸಿದ್ಧರಾಮೇಶ್ವರರ ಜೀವನ ಹಾಗೂ ಸಾಧನೆ’ ಕುರಿತು ಉಪನ್ಯಾಸ ನೀಡಿದರು.</p>.<p>‘ದೇವರ ದಾಸಿಮಯ್ಯ, ಬಸವಣ್ಣ, ಅಲ್ಲಮಪ್ರಭು, ಸಿದ್ಧರಾಮೇಶ್ವರ, ಅಂಬಿಗರ ಚೌಡಯ್ಯ, ಅಕ್ಕಮಹಾದೇವಿ ಮೊದಲಾದ ವಚನಕಾರರು 12ನೇ ಶತಮಾನವನ್ನು ಪಾವನಗೊಳಿಸಿದ ಶ್ರೇಷ್ಠ ಶರಣರು’ ಎಂದು ಬಣ್ಣಿಸಿದರು.</p>.<p>‘ಅಂದಿನ ಸಮಾಜದಲ್ಲಿ ಮೂಢನಂಬಿಕೆಗಳ ಕಟ್ಟಳೆಗಳಲ್ಲಿ ಜನಸಾಮಾನ್ಯರನ್ನು ಬಂಧಿಯಾಗಿಸಿ ಅವರ ಜೀವನವನ್ನು ನರಕವಾಗಿಸಿದ್ದರು. ಸಿದ್ದರಾಮೇಶ್ವರರಂತಹ ಶರಣರು ವಚನ ಕ್ರಾಂತಿಯ ಮೂಲಕ ಜನಸಾಮಾನ್ಯರ ಬದುಕನ್ನು ಹಸನು ಮಾಡುವ ಮೂಲಕ ಜಗಜ್ಯೋತಿಯಾದರು’ ಎಂದು ಸ್ಮರಿಸಿದರು.</p>.<p>‘ವಚನಕಾರರು ಸಾಮಾಜಿಕ ಆಂದೋಲನ ನಡೆಸದಿದ್ದಲ್ಲಿ ಇಂದು ದೇಶ ಇಷ್ಟೊಂದು ಸುಭಿಕ್ಷವಾಗುತ್ತಿರಲಿಲ್ಲ’ ಎಂದು ವೆಂಕಟನಾಯಕ್ ಹೇಳಿದರು.</p>.<p>ಸಂಪನ್ಮೂಲ ವ್ಯಕ್ತಿ ಎಂ.ನಂಜುಂಡಸ್ವಾಮಿ ಮಾತನಾಡಿ, ‘ಕನ್ನಡ ನಾಡನ್ನು ಸಾಂಸ್ಕೃತಿಕವಾಗಿ ಶ್ರೀಮಂತವಾಗಿಸಿದ ವಚನ ಸಾಹಿತ್ಯ ವಿಶ್ವಕ್ಕೆ ಆದರ್ಶವಾಗಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ವಚನಗಳನ್ನು ಬಾಯಿ ಪಾಠ ಮಾಡುವ ಮೂಲಕ ವಚನಗಳ ಸಾರವನ್ನು ಅರಿತು ಅದರಂತೆ ನಡೆದರೆ ಜೀವನವೇ ಪಾವನವಾಗುತ್ತದೆ’ ಎಂದರು.</p>.<p>ಕುಶಾಲನಗರ ಉಪನೋಂದಣಾಧಿಕಾರಿ ಅನಿತಾ ಮೋಸಿಸ್ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿ ಮಾತನಾಡಿ, ‘ಇಂದಿನ ವಿದ್ಯಾರ್ಥಿಗಳು ಬಾಲ್ಯದ ದಿನಗಳಿಂದಲೇ ಶರಣರ ವಚನಗಳನ್ನು ಕಲಿಯುವ ಜೊತೆಗೆ ಉತ್ತಮವಾದ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಹಾರನಹಳ್ಳಿ ಹೋಬಳಿ ಘಟಕದ ಅಧ್ಯಕ್ಷ ಎ.ಆರ್.ಮಹದೇವಪ್ಪ, ಜಿಲ್ಲಾ ವಚನ ಸಾಹಿತ್ಯ ವೇದಿಕೆ ಅಧ್ಯಕ್ಷ ಕೆ.ಎಸ್.ಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಸಿದ್ದೇಗೌಡ, ಉಪನ್ಯಾಸಕ ಲೋಕೇಶ್, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಎಚ್.ಎಸ್. ಮಧು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ‘12ನೇ ಶತಮಾನದ ವಚನಕಾರರ ಸಾಮಾಜಿಕ ಆಂದೋಲನದಿಂದಾಗಿಯೇ ಸಮಾಜದಲ್ಲಿದ್ದ ತಾರತಮ್ಯ, ಜಾತಿ ಪದ್ಧತಿ, ಮೇಲು ಕೀಳು ಎಂಬ ಭಾವನೆಗಳು ದೂರವಾಗಲು ಕಾರಣವಾಗಿದ್ದು, ವಚನಕಾರರ ಚಳವಳಿ ನಾಡಿಗೆ ನೀಡಿರುವ ಬಹು ದೊಡ್ಡ ಬಳುವಳಿ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ನಿರ್ದೇಶಕ ಮೆ.ನಾ.ವೆಂಕಟನಾಯಕ್ ಹೇಳಿದರು.</p>.<p>ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ಯಿಂದ ಗುರುವಾರ ಹಮ್ಮಿಕೊಂಡಿದ್ದ 12ನೇ ಶತಮಾನದ ವಚನಯೋಗಿ ಶ್ರೀ ಸಿದ್ಧರಾಮೇಶ್ವರರ ಜಯಂತ್ಯುತ್ಸವದಲ್ಲಿ ವಿದ್ಯಾರ್ಥಿಗಳಿಗೆ ‘ಸಿದ್ಧರಾಮೇಶ್ವರರ ಜೀವನ ಹಾಗೂ ಸಾಧನೆ’ ಕುರಿತು ಉಪನ್ಯಾಸ ನೀಡಿದರು.</p>.<p>‘ದೇವರ ದಾಸಿಮಯ್ಯ, ಬಸವಣ್ಣ, ಅಲ್ಲಮಪ್ರಭು, ಸಿದ್ಧರಾಮೇಶ್ವರ, ಅಂಬಿಗರ ಚೌಡಯ್ಯ, ಅಕ್ಕಮಹಾದೇವಿ ಮೊದಲಾದ ವಚನಕಾರರು 12ನೇ ಶತಮಾನವನ್ನು ಪಾವನಗೊಳಿಸಿದ ಶ್ರೇಷ್ಠ ಶರಣರು’ ಎಂದು ಬಣ್ಣಿಸಿದರು.</p>.<p>‘ಅಂದಿನ ಸಮಾಜದಲ್ಲಿ ಮೂಢನಂಬಿಕೆಗಳ ಕಟ್ಟಳೆಗಳಲ್ಲಿ ಜನಸಾಮಾನ್ಯರನ್ನು ಬಂಧಿಯಾಗಿಸಿ ಅವರ ಜೀವನವನ್ನು ನರಕವಾಗಿಸಿದ್ದರು. ಸಿದ್ದರಾಮೇಶ್ವರರಂತಹ ಶರಣರು ವಚನ ಕ್ರಾಂತಿಯ ಮೂಲಕ ಜನಸಾಮಾನ್ಯರ ಬದುಕನ್ನು ಹಸನು ಮಾಡುವ ಮೂಲಕ ಜಗಜ್ಯೋತಿಯಾದರು’ ಎಂದು ಸ್ಮರಿಸಿದರು.</p>.<p>‘ವಚನಕಾರರು ಸಾಮಾಜಿಕ ಆಂದೋಲನ ನಡೆಸದಿದ್ದಲ್ಲಿ ಇಂದು ದೇಶ ಇಷ್ಟೊಂದು ಸುಭಿಕ್ಷವಾಗುತ್ತಿರಲಿಲ್ಲ’ ಎಂದು ವೆಂಕಟನಾಯಕ್ ಹೇಳಿದರು.</p>.<p>ಸಂಪನ್ಮೂಲ ವ್ಯಕ್ತಿ ಎಂ.ನಂಜುಂಡಸ್ವಾಮಿ ಮಾತನಾಡಿ, ‘ಕನ್ನಡ ನಾಡನ್ನು ಸಾಂಸ್ಕೃತಿಕವಾಗಿ ಶ್ರೀಮಂತವಾಗಿಸಿದ ವಚನ ಸಾಹಿತ್ಯ ವಿಶ್ವಕ್ಕೆ ಆದರ್ಶವಾಗಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ವಚನಗಳನ್ನು ಬಾಯಿ ಪಾಠ ಮಾಡುವ ಮೂಲಕ ವಚನಗಳ ಸಾರವನ್ನು ಅರಿತು ಅದರಂತೆ ನಡೆದರೆ ಜೀವನವೇ ಪಾವನವಾಗುತ್ತದೆ’ ಎಂದರು.</p>.<p>ಕುಶಾಲನಗರ ಉಪನೋಂದಣಾಧಿಕಾರಿ ಅನಿತಾ ಮೋಸಿಸ್ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿ ಮಾತನಾಡಿ, ‘ಇಂದಿನ ವಿದ್ಯಾರ್ಥಿಗಳು ಬಾಲ್ಯದ ದಿನಗಳಿಂದಲೇ ಶರಣರ ವಚನಗಳನ್ನು ಕಲಿಯುವ ಜೊತೆಗೆ ಉತ್ತಮವಾದ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಹಾರನಹಳ್ಳಿ ಹೋಬಳಿ ಘಟಕದ ಅಧ್ಯಕ್ಷ ಎ.ಆರ್.ಮಹದೇವಪ್ಪ, ಜಿಲ್ಲಾ ವಚನ ಸಾಹಿತ್ಯ ವೇದಿಕೆ ಅಧ್ಯಕ್ಷ ಕೆ.ಎಸ್.ಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಸಿದ್ದೇಗೌಡ, ಉಪನ್ಯಾಸಕ ಲೋಕೇಶ್, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಎಚ್.ಎಸ್. ಮಧು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>