<p><strong>ಮಡಿಕೇರಿ</strong>: ‘ನಾನೀಗ ರಾಜ್ಯದ ಎಲ್ಲ ಜಿಲ್ಲೆಗಳ ಪ್ರವಾಸ ಮಾಡಿ, ಎಲ್ಲ ಜಿಲ್ಲೆಗಳ ಕಾರ್ಮಿಕ ಸಂಘಟನೆಗಳೊಂದಿಗೆ ಮಾತನಾಡಿ, ಅವರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ನೀಡಬೇಕಾದ ವೇತನದ ಕುರಿತು ಸಲಹೆ ನೀಡುವೆ’ ಎಂದು ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ಹೇಳಿದರು.</p>.<p>ಈಗಷ್ಟೇ ಸಮಿತಿ ರಚನೆಯಾಗಿದೆ. 26 ಮಂದಿ ಸದಸ್ಯರಿದ್ದಾರೆ. ಇನ್ನು ಮುಂದೆ ಕಾರ್ಮಿಕರ ಪರವಾದ ನಮ್ಮ ಕೆಲಸ ಆರಂಭವಾಗಲಿದೆ ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಇದಕ್ಕೂ ಮುನ್ನ ಅವರು, ‘ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಧೋರಣೆ ಅನುಸರಿಸುತ್ತಿದೆ’ ಎಂದು ವಾಗ್ದಾಳಿ ನಡೆಸಿದರು.</p>.<p>ಬಂಡವಾಳಷಾಹಿಗಳ ಪರವಾಗಿ ಹಾಗೂ ಕಾರ್ಮಿಕರಿಗೆ ತೊಂದರೆಯಾಗುವಂತಹ ಕೋಡ್ಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ. ಇದಕ್ಕೆ ಎಲ್ಲೆಡೆ ತೀವ್ರತರವಾದ ಆಕ್ಷೇಪ ಉಂಟಾದರೂ ಕಿವಿಗೊಡದೇ ಕೇಂದ್ರ ಜಾರಿಗೆ ತರಲು ಮುಂದಾಗಿದೆ ಎಂದು ಆರೋಪಿಸಿದರು.</p>.<p>ಅಮೆರಿಕ– ಇರಾನ್ ಸಂಘರ್ಷದ ವೇಳೆ ಗಲ್ಫ್ನಲ್ಲಿ ಭಾರತದಿಂದ ಹೋಗಿದ್ದ ಸಾಕಷ್ಟು ಕಾರ್ಮಿಕರು ಸಮಸ್ಯೆಗಳಿಗೆ ಸಿಲುಕಿದರು. ಅವರ ಒಂದೂ ಸಮಸ್ಯೆಗಳನ್ನು ಕೇಂದ್ರ ಸರ್ಕಾರ ಆಲಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಭಾವ ಸೃಷ್ಟಿಯಾಗಿದೆ. ಅಡುಗೆ ಅನಿಲ ದೊರೆಯುತ್ತಿಲ್ಲ. ಇಂತಹ ಸಂಕಷ್ಟದ ಸನ್ನಿವೇಶದಲ್ಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿದೇಶದ ಪ್ರವಾಸ ಮಾಡುತ್ತಿದ್ದಾರೆ. ಖಾಸಗಿ ಕಂಪನಿಯೊಂದರ ಚಾಕಲೇಟ್ ನೀಡಿದ್ದನ್ನೇ ದೊಡ್ಡ ಸುದ್ದಿಯನ್ನಾಗಿ ಆ ಕಂಪನಿಗೆ ಪ್ರಚಾರ ಕೊಡುತ್ತಿದ್ದಾರೆ. ಇಲ್ಲಿ ದೇಶದ ಜನರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪ್ರಧಾನಿಯವರು ವಿರೋಧ ಪಕ್ಷದವರೊಂದಿಗೆ ಚರ್ಚೆ ಮಾಡುವುದಿರಲಿ, ಕನಿಷ್ಠ ಪಕ್ಷ ತಮ್ಮ ಸಂಪುಟದಲ್ಲೂ ಚರ್ಚೆ ನಡೆಸದೇ ತಾವೇ ಏಕಾಏಕಿ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಅವರಿಗೆ ದೇಶದ ಕಾರ್ಮಿಕರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದರು.</p>.<p>ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನೀಡಿದ ಗ್ಯಾರಂಟಿಗಳನ್ನು ಬಿಜೆಪಿ ಉತ್ತರದ ರಾಜ್ಯಗಳಲ್ಲಿ ಜಾರಿಗೆ ತರುತ್ತಿದೆ. ಇಲ್ಲಿ ಜಾರಿಗೆ ಮಾಡಲು ಮುಂದಾದಾಗ ಹುಸಿ ಆರೋಪಗಳನ್ನು ಬಿಜೆಪಿ ಮಾಡಿತ್ತು. ಈಗ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡುತ್ತಿದೆ ಎಂದು ಹೇಳಿದರು.</p>.<p>ಕಾಂಗ್ರೆಸ್ ಮುಖಂಡರಾದ ತೆನ್ನಿರಾ ಮೈನಾ, ಹಂಸ, ಪ್ರಕಾಶ್ ಆಚಾರ್ಯ, ದಿನೇಶ್ ಶೆಟ್ಟಿ ಹಾಗೂ ಜಗದೀಶ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-51-1360290972</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ‘ನಾನೀಗ ರಾಜ್ಯದ ಎಲ್ಲ ಜಿಲ್ಲೆಗಳ ಪ್ರವಾಸ ಮಾಡಿ, ಎಲ್ಲ ಜಿಲ್ಲೆಗಳ ಕಾರ್ಮಿಕ ಸಂಘಟನೆಗಳೊಂದಿಗೆ ಮಾತನಾಡಿ, ಅವರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ನೀಡಬೇಕಾದ ವೇತನದ ಕುರಿತು ಸಲಹೆ ನೀಡುವೆ’ ಎಂದು ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ಹೇಳಿದರು.</p>.<p>ಈಗಷ್ಟೇ ಸಮಿತಿ ರಚನೆಯಾಗಿದೆ. 26 ಮಂದಿ ಸದಸ್ಯರಿದ್ದಾರೆ. ಇನ್ನು ಮುಂದೆ ಕಾರ್ಮಿಕರ ಪರವಾದ ನಮ್ಮ ಕೆಲಸ ಆರಂಭವಾಗಲಿದೆ ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಇದಕ್ಕೂ ಮುನ್ನ ಅವರು, ‘ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಧೋರಣೆ ಅನುಸರಿಸುತ್ತಿದೆ’ ಎಂದು ವಾಗ್ದಾಳಿ ನಡೆಸಿದರು.</p>.<p>ಬಂಡವಾಳಷಾಹಿಗಳ ಪರವಾಗಿ ಹಾಗೂ ಕಾರ್ಮಿಕರಿಗೆ ತೊಂದರೆಯಾಗುವಂತಹ ಕೋಡ್ಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ. ಇದಕ್ಕೆ ಎಲ್ಲೆಡೆ ತೀವ್ರತರವಾದ ಆಕ್ಷೇಪ ಉಂಟಾದರೂ ಕಿವಿಗೊಡದೇ ಕೇಂದ್ರ ಜಾರಿಗೆ ತರಲು ಮುಂದಾಗಿದೆ ಎಂದು ಆರೋಪಿಸಿದರು.</p>.<p>ಅಮೆರಿಕ– ಇರಾನ್ ಸಂಘರ್ಷದ ವೇಳೆ ಗಲ್ಫ್ನಲ್ಲಿ ಭಾರತದಿಂದ ಹೋಗಿದ್ದ ಸಾಕಷ್ಟು ಕಾರ್ಮಿಕರು ಸಮಸ್ಯೆಗಳಿಗೆ ಸಿಲುಕಿದರು. ಅವರ ಒಂದೂ ಸಮಸ್ಯೆಗಳನ್ನು ಕೇಂದ್ರ ಸರ್ಕಾರ ಆಲಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಭಾವ ಸೃಷ್ಟಿಯಾಗಿದೆ. ಅಡುಗೆ ಅನಿಲ ದೊರೆಯುತ್ತಿಲ್ಲ. ಇಂತಹ ಸಂಕಷ್ಟದ ಸನ್ನಿವೇಶದಲ್ಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿದೇಶದ ಪ್ರವಾಸ ಮಾಡುತ್ತಿದ್ದಾರೆ. ಖಾಸಗಿ ಕಂಪನಿಯೊಂದರ ಚಾಕಲೇಟ್ ನೀಡಿದ್ದನ್ನೇ ದೊಡ್ಡ ಸುದ್ದಿಯನ್ನಾಗಿ ಆ ಕಂಪನಿಗೆ ಪ್ರಚಾರ ಕೊಡುತ್ತಿದ್ದಾರೆ. ಇಲ್ಲಿ ದೇಶದ ಜನರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪ್ರಧಾನಿಯವರು ವಿರೋಧ ಪಕ್ಷದವರೊಂದಿಗೆ ಚರ್ಚೆ ಮಾಡುವುದಿರಲಿ, ಕನಿಷ್ಠ ಪಕ್ಷ ತಮ್ಮ ಸಂಪುಟದಲ್ಲೂ ಚರ್ಚೆ ನಡೆಸದೇ ತಾವೇ ಏಕಾಏಕಿ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಅವರಿಗೆ ದೇಶದ ಕಾರ್ಮಿಕರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದರು.</p>.<p>ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನೀಡಿದ ಗ್ಯಾರಂಟಿಗಳನ್ನು ಬಿಜೆಪಿ ಉತ್ತರದ ರಾಜ್ಯಗಳಲ್ಲಿ ಜಾರಿಗೆ ತರುತ್ತಿದೆ. ಇಲ್ಲಿ ಜಾರಿಗೆ ಮಾಡಲು ಮುಂದಾದಾಗ ಹುಸಿ ಆರೋಪಗಳನ್ನು ಬಿಜೆಪಿ ಮಾಡಿತ್ತು. ಈಗ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡುತ್ತಿದೆ ಎಂದು ಹೇಳಿದರು.</p>.<p>ಕಾಂಗ್ರೆಸ್ ಮುಖಂಡರಾದ ತೆನ್ನಿರಾ ಮೈನಾ, ಹಂಸ, ಪ್ರಕಾಶ್ ಆಚಾರ್ಯ, ದಿನೇಶ್ ಶೆಟ್ಟಿ ಹಾಗೂ ಜಗದೀಶ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-51-1360290972</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>