<p><strong>ಮಡಿಕೇರಿ</strong>: ಕೊಡಗಿನಲ್ಲಿ ಭೂಕುಸಿತ ತಡೆಯಲು ₹ 50 ಕೋಟಿ ಅನುದಾನಕ್ಕೆ ಕ್ರಿಯಾಯೋಜನೆ ಸಲ್ಲಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಸೂಚಿಸಿರುವೆ. ಬಳಿಕ ಸಂಭಾವ್ಯ ಭೂಕುಸಿತ ಪ್ರದೇಶಗಳಲ್ಲಿ ರಕ್ಷಣಾ ಕಾಮಗಾರಿ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p>.<p>‘ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ 10,776 ಪ್ರಕರಣ ಇತ್ತು. ಈಗ 446ಕ್ಕೆ ಇಳಿದಿದೆ. ಹಾಗೆಯೇ, ತಹಶೀಲ್ದಾರ್ರ ನ್ಯಾಯಾಲಯದಲ್ಲಿ 67,857 ಪ್ರಕರಣಗಳಿದ್ದವು. ಈಗ 19,219 ಕ್ಕೆ ಇಳಿಕೆಯಾಗಿದೆ. ನಮ್ಮ ಸರ್ಕಾರ ಬಂದ ಮೇಲೆ ಇಲಾಖೆಯ ಕೆಲಸಗಳು ವೇಗವಾಗಿ ನಡೆಯುತ್ತಿವೆ’ ಎಂದರು.</p>.<p>‘ಕೊಡಗಿನಲ್ಲಿ ಪಟ್ಟೆದಾರರ ಹೆಸರಿನಲ್ಲಿರುವ ಭೂಮಿಯನ್ನು ಅವರ ನಿಜವಾದ ವಾರಸುದಾರರಿಗೆ ವರ್ಗಾಯಿಸಲು ಅನುಕೂಲ ಆಗುವಂತೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ತರಲಾಗುವುದು. ಇದರಿಂದ ಬಹು ವರ್ಷಗಳಿಂದ ಇಲ್ಲಿನ ಜನರನ್ನು ಕಾಡುತ್ತಿರುವ ಸಮಸ್ಯೆಗೆ ಪರಿಹಾರ ದೊರಕಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕೊಡಗಿನಲ್ಲಿ ಭೂಕುಸಿತ ತಡೆಯಲು ₹ 50 ಕೋಟಿ ಅನುದಾನಕ್ಕೆ ಕ್ರಿಯಾಯೋಜನೆ ಸಲ್ಲಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಸೂಚಿಸಿರುವೆ. ಬಳಿಕ ಸಂಭಾವ್ಯ ಭೂಕುಸಿತ ಪ್ರದೇಶಗಳಲ್ಲಿ ರಕ್ಷಣಾ ಕಾಮಗಾರಿ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.</p>.<p>‘ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ 10,776 ಪ್ರಕರಣ ಇತ್ತು. ಈಗ 446ಕ್ಕೆ ಇಳಿದಿದೆ. ಹಾಗೆಯೇ, ತಹಶೀಲ್ದಾರ್ರ ನ್ಯಾಯಾಲಯದಲ್ಲಿ 67,857 ಪ್ರಕರಣಗಳಿದ್ದವು. ಈಗ 19,219 ಕ್ಕೆ ಇಳಿಕೆಯಾಗಿದೆ. ನಮ್ಮ ಸರ್ಕಾರ ಬಂದ ಮೇಲೆ ಇಲಾಖೆಯ ಕೆಲಸಗಳು ವೇಗವಾಗಿ ನಡೆಯುತ್ತಿವೆ’ ಎಂದರು.</p>.<p>‘ಕೊಡಗಿನಲ್ಲಿ ಪಟ್ಟೆದಾರರ ಹೆಸರಿನಲ್ಲಿರುವ ಭೂಮಿಯನ್ನು ಅವರ ನಿಜವಾದ ವಾರಸುದಾರರಿಗೆ ವರ್ಗಾಯಿಸಲು ಅನುಕೂಲ ಆಗುವಂತೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ತರಲಾಗುವುದು. ಇದರಿಂದ ಬಹು ವರ್ಷಗಳಿಂದ ಇಲ್ಲಿನ ಜನರನ್ನು ಕಾಡುತ್ತಿರುವ ಸಮಸ್ಯೆಗೆ ಪರಿಹಾರ ದೊರಕಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>