<p>ಮಡಿಕೇರಿ: ಹಿಂದೂ ಸುರಕ್ಷಾ ಸಮಿತಿ ವತಿಯಿಂದ ನಾಪೋಕ್ಲುವಿನಲ್ಲಿ ಏಪ್ರಿಲ್ 1ರಂದು ಬೆಳಿಗ್ಗೆ 10 ಗಂಟೆಗೆ ಹಿಂದೂ ಜನಜಾಗೃತಿ ಜಾಥಾ ನಂತರ ಜನಜಾಗೃತಿ ಸಭೆ ನಡೆಯಲಿದೆ ಎಂದು ಸಮಿತಿ ಸಂಚಾಲಕ ಲವ ನಾಣಯ್ಯ ತಿಳಿಸಿದರು.</p>.<p>‘ನಾಪೋಕ್ಲುವಿನ ಹಳೇ ತಾಲ್ಲೂಕು ಜಂಕ್ಷನ್ನಿಂದ ಜಾಥಾ ಹೊರಡಲಿದ್ದು, ಮಾರುಕಟ್ಟೆ ಆವರಣದಲ್ಲಿ ಜನಜಾಗೃತಿ ಸಭೆ ನಡೆಯಲಿದೆ. ಕೊಡಗು ಜಿಲ್ಲೆಯ ಮುಖಂಡರು ಇದರಲ್ಲಿ ಭಾಗಿಯಾಗಲಿದ್ದಾರೆ’ ಎಂದು ಅವರು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ನಾಪೋಕ್ಲುವಿನಲ್ಲಿ ಹಿಂದೂ ಸಮಾಜೋತ್ಸವದ ಕಾರ್ಯಕರ್ತರೊಬ್ಬರ ಮೇಲೆ ಈಚೆಗೆ ನಡೆದ ಹಲ್ಲೆ ಖಂಡಿಸಿ ಹಾಗೂ ಜಾಮೀನಿನ ಮೇಲೆ ಹೊರ ಬಂದ ಆರೋಪಿಗಳು ಕೋಮುಪ್ರಚೋದಕ ಸಂದೇಶಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿದ್ದು, ಆರೋಪಿಗಳನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಈ ಜಾಥಾ ಮತ್ತು ಸಭೆ ನಡೆಯುತ್ತಿದೆ ಎಂದು ಸಮಿತಿ ಮುಖಂಡ ಕುಕ್ಕೇರ ಅಜಿತ್ ತಿಳಿಸಿದರು.</p>.<p>‘ನಾಪೋಕ್ಲು ಭಾಗದಲ್ಲಿ ಇದರಿಂದ ಭಯದ ವಾತಾವರಣ ಸೃಷ್ಟಿಯಾಗಿದೆ. ಕೂಡಲೇ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಾಪೋಕ್ಲು ಠಾಣೆಯಲ್ಲಿ ನಿಯೋಜಿಸಬೇಕು, ಗಸ್ತು ಕಾರ್ಯ ಹೆಚ್ಚಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಹಲ್ಲೆ ನಡೆಸಿದ ಪ್ರಕರಣವನ್ನು ಖಂಡಿಸದೇ ಆರೋಪಿಗಳನ್ನು ಮತ್ತು ಅವರ ಕೃತ್ಯಗಳನ್ನು ಹಲವು ಮಂದಿ ಸಮರ್ಥಿಸಿಕೊಂಡಿರುವುದು ನಿಜಕ್ಕೂ ಸರಿಯಲ್ಲ. ಇಂತಹ ಘಟನೆಗಳು ಮತ್ತೆ ನಡೆಯಬಾರದು ಮತ್ತು ಜನರಲ್ಲಿ ಧೈರ್ಯ ತುಂಬಬೇಕು ಎಂಬ ಕಾರಣಕ್ಕೆ ಈ ಜಾಥಾ ಮತ್ತು ಸಭೆ ನಡೆಸಲಾಗುತ್ತಿದೆ’ ಎಂದರು.</p>.<p>ಮುಖಂಡರಾದ ಬಾಲಕೃಷ್ಣ ರೈ, ಪ್ರತೀಜಾ ಅಚ್ಚಪ್ಪ, ಪ್ರತೀಪ, ಚಂದ್ರ ಉಡೋತ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-51-801126142</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಹಿಂದೂ ಸುರಕ್ಷಾ ಸಮಿತಿ ವತಿಯಿಂದ ನಾಪೋಕ್ಲುವಿನಲ್ಲಿ ಏಪ್ರಿಲ್ 1ರಂದು ಬೆಳಿಗ್ಗೆ 10 ಗಂಟೆಗೆ ಹಿಂದೂ ಜನಜಾಗೃತಿ ಜಾಥಾ ನಂತರ ಜನಜಾಗೃತಿ ಸಭೆ ನಡೆಯಲಿದೆ ಎಂದು ಸಮಿತಿ ಸಂಚಾಲಕ ಲವ ನಾಣಯ್ಯ ತಿಳಿಸಿದರು.</p>.<p>‘ನಾಪೋಕ್ಲುವಿನ ಹಳೇ ತಾಲ್ಲೂಕು ಜಂಕ್ಷನ್ನಿಂದ ಜಾಥಾ ಹೊರಡಲಿದ್ದು, ಮಾರುಕಟ್ಟೆ ಆವರಣದಲ್ಲಿ ಜನಜಾಗೃತಿ ಸಭೆ ನಡೆಯಲಿದೆ. ಕೊಡಗು ಜಿಲ್ಲೆಯ ಮುಖಂಡರು ಇದರಲ್ಲಿ ಭಾಗಿಯಾಗಲಿದ್ದಾರೆ’ ಎಂದು ಅವರು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ನಾಪೋಕ್ಲುವಿನಲ್ಲಿ ಹಿಂದೂ ಸಮಾಜೋತ್ಸವದ ಕಾರ್ಯಕರ್ತರೊಬ್ಬರ ಮೇಲೆ ಈಚೆಗೆ ನಡೆದ ಹಲ್ಲೆ ಖಂಡಿಸಿ ಹಾಗೂ ಜಾಮೀನಿನ ಮೇಲೆ ಹೊರ ಬಂದ ಆರೋಪಿಗಳು ಕೋಮುಪ್ರಚೋದಕ ಸಂದೇಶಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿದ್ದು, ಆರೋಪಿಗಳನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಈ ಜಾಥಾ ಮತ್ತು ಸಭೆ ನಡೆಯುತ್ತಿದೆ ಎಂದು ಸಮಿತಿ ಮುಖಂಡ ಕುಕ್ಕೇರ ಅಜಿತ್ ತಿಳಿಸಿದರು.</p>.<p>‘ನಾಪೋಕ್ಲು ಭಾಗದಲ್ಲಿ ಇದರಿಂದ ಭಯದ ವಾತಾವರಣ ಸೃಷ್ಟಿಯಾಗಿದೆ. ಕೂಡಲೇ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಾಪೋಕ್ಲು ಠಾಣೆಯಲ್ಲಿ ನಿಯೋಜಿಸಬೇಕು, ಗಸ್ತು ಕಾರ್ಯ ಹೆಚ್ಚಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಹಲ್ಲೆ ನಡೆಸಿದ ಪ್ರಕರಣವನ್ನು ಖಂಡಿಸದೇ ಆರೋಪಿಗಳನ್ನು ಮತ್ತು ಅವರ ಕೃತ್ಯಗಳನ್ನು ಹಲವು ಮಂದಿ ಸಮರ್ಥಿಸಿಕೊಂಡಿರುವುದು ನಿಜಕ್ಕೂ ಸರಿಯಲ್ಲ. ಇಂತಹ ಘಟನೆಗಳು ಮತ್ತೆ ನಡೆಯಬಾರದು ಮತ್ತು ಜನರಲ್ಲಿ ಧೈರ್ಯ ತುಂಬಬೇಕು ಎಂಬ ಕಾರಣಕ್ಕೆ ಈ ಜಾಥಾ ಮತ್ತು ಸಭೆ ನಡೆಸಲಾಗುತ್ತಿದೆ’ ಎಂದರು.</p>.<p>ಮುಖಂಡರಾದ ಬಾಲಕೃಷ್ಣ ರೈ, ಪ್ರತೀಜಾ ಅಚ್ಚಪ್ಪ, ಪ್ರತೀಪ, ಚಂದ್ರ ಉಡೋತ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-51-801126142</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>