ಸುಬ್ಬಯ್ಯ ಪ್ರಗತಿಪರ ಕೃಷಿಕರಾಗಿದ್ದರು. ಮೇದೂರು ಎಸ್ಟೇಟ್ ಮಾಲೀಕರೂ ಹೌದು. ಛಾಯಾಗ್ರಹಣದಲ್ಲಿ ಅತೀವ ಆಸಕ್ತಿ ಹೊಂದಿದ್ದರು. ಕ್ರಿಕೆಟ್, ಟೆನಿಸ್ ಆಟಗಾರರಾಗಿದ್ದರು. ವಾಂಡರರ್ಸ್ ಕ್ಲಬ್ನಲ್ಲಿ ಕ್ರಿಕೆಟ್ ತಂಡದ ನಾಯಕರಾಗಿದ್ದರು. ಶ್ರೀಲಂಕಾದಲ್ಲಿ ನಡೆದಿದ್ದ ಕ್ರಿಕೆಟ್ ಟೂರ್ನಿಯಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದರು. ‘ಜ್ಯಾಕ್’ ಸುಬ್ಬಯ್ಯ ಎಂದೇ ಪ್ರಸಿದ್ಧರಾಗಿದ್ದರು.