ಮಡಿಕೇರಿ: ನಗರ ಸೇರಿದಂತೆ ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಬುಧವಾರ ಮಳೆ ಮುಂದುವರಿದಿದೆ. ಇದರಿಂದ ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲು ಏರಿಕೆಯಾಗಿದೆ. ಪ್ರಸಕ್ತ ಮುಂಗಾರಿನಲ್ಲಿ ಇದೇ ಮೊದಲ ಬಾರಿಗೆ ಒಳ ಹರಿವು ಒಂದೂವರೆ ಸಾವಿರ ಕ್ಯುಸೆಕ್ ದಾಟಿದೆ.
ಭಾಗಮಂಡಲದ ತ್ರಿವೇಣಿ ಸಂಗಮದಲ್ಲೂ ನೀರಿನ ಮಟ್ಟ ಏರಿಕೆಯಾಗುತ್ತಿದೆ.
ಶ್ರೀಮಂಗಲದ ಸಮೀಪ ರಸ್ತೆಗೆ ಮರವೊಂದು ಉರುಳಿ ಬಿದ್ದಿದ್ದು, ಖಾಸಗಿ ಬಸ್ ಗೆ ಸಣ್ಣ ಪ್ರಮಾಣದ ಹಾನಿಯಾಗಿದೆ.
ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 19 ಸೆಂ.ಮೀನಷ್ಟು ಮಳೆಯಾಗಿದೆ