<p><strong>ಮಡಿಕೇರಿ:</strong> ‘ಕೋಮು ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಪ್ರಕರಣಗಳನ್ನು ರಾಜ್ಯಸರ್ಕಾರ ವಾಪಸ್ ಪಡೆದು ಮತ್ತೆ ಅವರಿಗೆ ಕೋಮು ಪ್ರಚೋದನಾಕಾರಿಯಾಗಿ ಮಾತನಾಡಲು ಅವಕಾಶ ಕಲ್ಪಿಸಿದೆ’ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ)ದ ಕೊಡಗು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ ಆರೋಪಿಸಿದರು.</p>.<p>ಇಲ್ಲಿನ ಇಂದಿರಾಗಾಂಧಿ ವೃತ್ತ (ಚೌಕಿ)ದಲ್ಲಿ ಸೋಮವಾರ ಪಕ್ಷದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>‘ಹಳೆಯ ಪ್ರಕರಣಗಳನ್ನೆಲ್ಲ ತೆಗೆದು ಹಾಕಿ ಮತ್ತೆ ಹೊಸದಾಗಿ ಕೋಮು ದ್ವೇಷ ಹುಟ್ಟಿಸುವ ರೀತಿಯಲ್ಲಿ ಮಾತನಾಡಿ ಎಂದು ಸರ್ಕಾರವೇ ಅನುವು ಮಾಡಿಕೊಟ್ಟಿದೆ. ಇದ ನಿಜಕ್ಕೂ ಸರಿಯಲ್ಲ’ ಎಂದು ಅವರು ಖಂಡಿಸಿದರು.</p>.<p>‘ಗೋಸಂರಕ್ಷಣೆಯ ಹೆಸರಿನಲ್ಲಿ ಮನೆಮನೆಗಳಿಗೆ ನುಗ್ಗುವ, ವಾಹನಗಳನ್ನು ತಡೆಯುವ ಅಧಿಕಾರವನ್ನು ಕೆಲವು ಸಂಘಟನೆಗಳ ಕಾರ್ಯಕರ್ತರಿಗೆ ಕೊಟ್ಟವರಾರು’ ಎಂದು ಪ್ರಶ್ನಿಸಿದ ಅವರು, ‘ಸರ್ಕಾರಕ್ಕೆ ಗೋವನ್ನು ಸಂರಕ್ಷಿಸುವ ಇಚ್ಛಾಶಕ್ತಿ ಇದ್ದರೆ ಕೂಡಲೇ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ’ ಎಂದು ಸವಾಲೆಸೆದರು.</p>.<p>ನಗರಸಭೆ ಸದಸ್ಯ ಮನ್ಸೂರ್ ಮಾತನಾಡಿ, ‘ಇನ್ನು ಚುನಾವಣೆಗೆ ಎರಡು ವರ್ಷಗಳಷ್ಟೇ ಬಾಕಿ ಇದೆ. ಈಗ ಈ ಹಿಂದೆ ಕೋಮು ಪ್ರಚೋದಕವಾಗಿ ಮಾತನಾಡಿದವರ ವಿರುದ್ಧದ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ತೆಗೆದು ಹಾಕಿದೆ. ಈ ಮೂಲಕ ಮುಂದಿನ ಎರಡು ವರ್ಷಗಳ ಅವರು ಹಿಂದಿನಂತೆಯೆ ಮಾತನಾಡಬೇಕು, ಮುಸ್ಲಿಮರಲ್ಲಿ ಭಯ ಸೃಷ್ಟಿಯಾಗಬೇಕು, ಮರಳಿ ಅವರು ಕಾಂಗ್ರೆಸ್ಗೆ ಮತ ಹಾಕಬೇಕು ಎಂಬ ಚಿಂತನೆಯಲ್ಲಿದೆ’ ಎಂದು ಆರೋಪಿಸಿದರು.</p>.<p>‘ಈ ಬಾರಿ ಮುಸ್ಲಿಮರು ಯಾವುದೇ ಕಾರಣಕ್ಕೂ ಹೆದರುವುದಿಲ್ಲ, ಹೆದರಿ ಕಾಂಗ್ರೆಸ್ಗೆ ಮತ ಹಾಕುವುದಿಲ್ಲ. ಈಗ ಜನರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಈ ಎರಡೂ ಪಕ್ಷಗಳ ರಾಜಕಾರಣ ಅರ್ಥವಾಗಿದೆ. ಇವು ಒಂದೇ ನಾಣ್ಯದ ಎರಡು ಮುಖಗಳು’ ಎಂದು ಹೇಳಿದರು.</p>.<p>ಕಾಂಗ್ರೆಸ್ ಮತ ಗಳಿಕೆಗಾಗಿ ಯಾವ ಮಟ್ಟಾಗಾದರೂ ಇಳಿಯಬಲ್ಲುದು ಎಂಬುದಕ್ಕೆ ಇದೇ ಸಾಕ್ಷಿ ಎಂದರು.</p>.<p>ನಗರಸಭಾ ಸದಸ್ಯರಾದ ಬಷೀರ್, ಮೇರಿ ವೇಗೇಸ್, ನೀಮಾ ಹರ್ಷದ್, ನಗರ ಅಧ್ಯಕ್ಷ ಮಹಮ್ಮದ್ ಅಲಿ, ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ ಅಡ್ಕರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-51-1387359518</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ‘ಕೋಮು ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಪ್ರಕರಣಗಳನ್ನು ರಾಜ್ಯಸರ್ಕಾರ ವಾಪಸ್ ಪಡೆದು ಮತ್ತೆ ಅವರಿಗೆ ಕೋಮು ಪ್ರಚೋದನಾಕಾರಿಯಾಗಿ ಮಾತನಾಡಲು ಅವಕಾಶ ಕಲ್ಪಿಸಿದೆ’ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ)ದ ಕೊಡಗು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ ಆರೋಪಿಸಿದರು.</p>.<p>ಇಲ್ಲಿನ ಇಂದಿರಾಗಾಂಧಿ ವೃತ್ತ (ಚೌಕಿ)ದಲ್ಲಿ ಸೋಮವಾರ ಪಕ್ಷದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>‘ಹಳೆಯ ಪ್ರಕರಣಗಳನ್ನೆಲ್ಲ ತೆಗೆದು ಹಾಕಿ ಮತ್ತೆ ಹೊಸದಾಗಿ ಕೋಮು ದ್ವೇಷ ಹುಟ್ಟಿಸುವ ರೀತಿಯಲ್ಲಿ ಮಾತನಾಡಿ ಎಂದು ಸರ್ಕಾರವೇ ಅನುವು ಮಾಡಿಕೊಟ್ಟಿದೆ. ಇದ ನಿಜಕ್ಕೂ ಸರಿಯಲ್ಲ’ ಎಂದು ಅವರು ಖಂಡಿಸಿದರು.</p>.<p>‘ಗೋಸಂರಕ್ಷಣೆಯ ಹೆಸರಿನಲ್ಲಿ ಮನೆಮನೆಗಳಿಗೆ ನುಗ್ಗುವ, ವಾಹನಗಳನ್ನು ತಡೆಯುವ ಅಧಿಕಾರವನ್ನು ಕೆಲವು ಸಂಘಟನೆಗಳ ಕಾರ್ಯಕರ್ತರಿಗೆ ಕೊಟ್ಟವರಾರು’ ಎಂದು ಪ್ರಶ್ನಿಸಿದ ಅವರು, ‘ಸರ್ಕಾರಕ್ಕೆ ಗೋವನ್ನು ಸಂರಕ್ಷಿಸುವ ಇಚ್ಛಾಶಕ್ತಿ ಇದ್ದರೆ ಕೂಡಲೇ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ’ ಎಂದು ಸವಾಲೆಸೆದರು.</p>.<p>ನಗರಸಭೆ ಸದಸ್ಯ ಮನ್ಸೂರ್ ಮಾತನಾಡಿ, ‘ಇನ್ನು ಚುನಾವಣೆಗೆ ಎರಡು ವರ್ಷಗಳಷ್ಟೇ ಬಾಕಿ ಇದೆ. ಈಗ ಈ ಹಿಂದೆ ಕೋಮು ಪ್ರಚೋದಕವಾಗಿ ಮಾತನಾಡಿದವರ ವಿರುದ್ಧದ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ತೆಗೆದು ಹಾಕಿದೆ. ಈ ಮೂಲಕ ಮುಂದಿನ ಎರಡು ವರ್ಷಗಳ ಅವರು ಹಿಂದಿನಂತೆಯೆ ಮಾತನಾಡಬೇಕು, ಮುಸ್ಲಿಮರಲ್ಲಿ ಭಯ ಸೃಷ್ಟಿಯಾಗಬೇಕು, ಮರಳಿ ಅವರು ಕಾಂಗ್ರೆಸ್ಗೆ ಮತ ಹಾಕಬೇಕು ಎಂಬ ಚಿಂತನೆಯಲ್ಲಿದೆ’ ಎಂದು ಆರೋಪಿಸಿದರು.</p>.<p>‘ಈ ಬಾರಿ ಮುಸ್ಲಿಮರು ಯಾವುದೇ ಕಾರಣಕ್ಕೂ ಹೆದರುವುದಿಲ್ಲ, ಹೆದರಿ ಕಾಂಗ್ರೆಸ್ಗೆ ಮತ ಹಾಕುವುದಿಲ್ಲ. ಈಗ ಜನರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ಈ ಎರಡೂ ಪಕ್ಷಗಳ ರಾಜಕಾರಣ ಅರ್ಥವಾಗಿದೆ. ಇವು ಒಂದೇ ನಾಣ್ಯದ ಎರಡು ಮುಖಗಳು’ ಎಂದು ಹೇಳಿದರು.</p>.<p>ಕಾಂಗ್ರೆಸ್ ಮತ ಗಳಿಕೆಗಾಗಿ ಯಾವ ಮಟ್ಟಾಗಾದರೂ ಇಳಿಯಬಲ್ಲುದು ಎಂಬುದಕ್ಕೆ ಇದೇ ಸಾಕ್ಷಿ ಎಂದರು.</p>.<p>ನಗರಸಭಾ ಸದಸ್ಯರಾದ ಬಷೀರ್, ಮೇರಿ ವೇಗೇಸ್, ನೀಮಾ ಹರ್ಷದ್, ನಗರ ಅಧ್ಯಕ್ಷ ಮಹಮ್ಮದ್ ಅಲಿ, ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ ಅಡ್ಕರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-51-1387359518</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>