<p><strong>ಮಡಿಕೇರಿ:</strong> ನವದೆಹಲಿಯಲ್ಲಿ ಸ್ಫೋಟವಾದ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲೂ ಪೊಲೀಸರು ಅತೀವ ನಿಗಾ ವಹಿಸಿದ್ದಾರೆ. ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.</p><p>ಮಡಿಕೇರಿ ನಗರದಲ್ಲಿ ಮಂಗಳವಾರ ಇಡೀ ದಿನ ಹಲವೆಡೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳವು ತಪಾಸಣಾ ಕಾರ್ಯ ನಡೆಸಿತು. ಒಟ್ಟು 12 ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಹಾಗೂ 4 ಶ್ವಾನಗಳು ತಪಾಸಣಾ ಕಾರ್ಯದಲ್ಲಿ ನಿರತವಾಗಿದ್ದರು. ಅತ್ಯಾಧುನಿಕ ಯಂತ್ರದ ಸಹಾಯದಿಂದ ಸ್ಫೋಟಕ ವಸ್ತುಗಳ ಇರುವಿಕೆ ಕುರಿತು ಶೋಧಿಸಲಾಯಿತು.</p><p>ಪ್ರಮುಖ ಪ್ರವಾಸಿ ತಾಣ ರಾಜಾಸೀಟ್ ಉದ್ಯಾನದಲ್ಲಿ ಇಂಚಿಂಚನ್ನೂ ಬಿಡದೇ ಈ ತಂಡದ ಸದಸ್ಯರು ಜಾಲಾಡಿದರು. ಹೂಕುಂಡಗಳು, ಕಂಬಗಳು ಸೇರಿದಂತೆ ಎಲ್ಲೆಡೆ ತಪಾಸಣೆ ನಡೆಯಿತು. ನಂತರ, ಕೆಎಸ್ಆರ್ಟಿಸಿ ಬಸ್ನಿಲ್ದಾಣದಲ್ಲೂ ವ್ಯಾಪಕ ಶೋಧ ಕಾರ್ಯ ನಡೆಸಲಾಯಿತು.</p><p>ಅನುಮಾನಾಸ್ಪದ ಬ್ಯಾಗುಗಳು, ವ್ಯಕ್ತಿಗಳನ್ನು ತಪಾಸಣೆ ಮಾಡಲಾಯಿತು. ಈ ವೇಳೆ ಯಾವುದೇ ಸ್ಫೋಟಕ ವಸ್ತುಗಳು ಸಿಗಲಿಲ್ಲ.</p><p>ಇನ್ನು ಪೊಲೀಸರು ಸಹ ಇದೀಗ ಹಿಂದೆ ಕೊಡಗು ಜಿಲ್ಲೆಯಲ್ಲಿ ನಡೆದಿರುವಂತಹ ಸೂಕ್ಷ್ಮ ಪ್ರಕರಣಗಳನ್ನು ಪುನರ್ ಪರಿಶೀಲಿಸಲಾರಂಭಿಸಿದ್ದಾರೆ. ಅವುಗಳಲ್ಲಿ ಆರೋಪಿಗಳಾಗಿದ್ದ, ಅಪರಾಧಿಗಳಾಗಿದ್ದ ವ್ಯಕ್ತಿಗಳ ಮೇಲೆ ನಿಗಾ ಇಡಲು ನಿರ್ಧರಿಸಿದ್ದಾರೆ.</p><p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ‘ಪ್ರಮುಖ ಪ್ರವಾಸಿ ತಾಣಗಳಲ್ಲಿ ನಿರಂತರವಾಗಿ ತಪಾಸಣಾ ಕಾರ್ಯ ನಡೆಸಲಾಗುವುದು. ಈ ಹಿಂದಿನ ಸೂಕ್ಷ್ಮ ಪ್ರಕರಣಗಳ ಆರೋಪಿಗಳ ಕುರಿತೂ ನಿಗಾ ವಹಿಸಲಾಗಿದೆ’ ಎಂದು ಹೇಳಿದರು.</p>.<div><blockquote>ಕೊಡಗು ಜಿಲ್ಲೆಯಾದ್ಯಂತ ಎಲ್ಲೆಡೆ ನಿಗಾ ವಹಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಶಂಕಿತ ವಸ್ತುಗಳು ಕಂಡು ಬಂದ ಕೂಡಲೇ 112 ಕರೆ ಮಾಡಿ ಮಾಹಿತಿ ನೀಡಬೇಕುಕೆ. </blockquote><span class="attribution">ರಾಮರಾಜನ್, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ನವದೆಹಲಿಯಲ್ಲಿ ಸ್ಫೋಟವಾದ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲೂ ಪೊಲೀಸರು ಅತೀವ ನಿಗಾ ವಹಿಸಿದ್ದಾರೆ. ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.</p><p>ಮಡಿಕೇರಿ ನಗರದಲ್ಲಿ ಮಂಗಳವಾರ ಇಡೀ ದಿನ ಹಲವೆಡೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳವು ತಪಾಸಣಾ ಕಾರ್ಯ ನಡೆಸಿತು. ಒಟ್ಟು 12 ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಹಾಗೂ 4 ಶ್ವಾನಗಳು ತಪಾಸಣಾ ಕಾರ್ಯದಲ್ಲಿ ನಿರತವಾಗಿದ್ದರು. ಅತ್ಯಾಧುನಿಕ ಯಂತ್ರದ ಸಹಾಯದಿಂದ ಸ್ಫೋಟಕ ವಸ್ತುಗಳ ಇರುವಿಕೆ ಕುರಿತು ಶೋಧಿಸಲಾಯಿತು.</p><p>ಪ್ರಮುಖ ಪ್ರವಾಸಿ ತಾಣ ರಾಜಾಸೀಟ್ ಉದ್ಯಾನದಲ್ಲಿ ಇಂಚಿಂಚನ್ನೂ ಬಿಡದೇ ಈ ತಂಡದ ಸದಸ್ಯರು ಜಾಲಾಡಿದರು. ಹೂಕುಂಡಗಳು, ಕಂಬಗಳು ಸೇರಿದಂತೆ ಎಲ್ಲೆಡೆ ತಪಾಸಣೆ ನಡೆಯಿತು. ನಂತರ, ಕೆಎಸ್ಆರ್ಟಿಸಿ ಬಸ್ನಿಲ್ದಾಣದಲ್ಲೂ ವ್ಯಾಪಕ ಶೋಧ ಕಾರ್ಯ ನಡೆಸಲಾಯಿತು.</p><p>ಅನುಮಾನಾಸ್ಪದ ಬ್ಯಾಗುಗಳು, ವ್ಯಕ್ತಿಗಳನ್ನು ತಪಾಸಣೆ ಮಾಡಲಾಯಿತು. ಈ ವೇಳೆ ಯಾವುದೇ ಸ್ಫೋಟಕ ವಸ್ತುಗಳು ಸಿಗಲಿಲ್ಲ.</p><p>ಇನ್ನು ಪೊಲೀಸರು ಸಹ ಇದೀಗ ಹಿಂದೆ ಕೊಡಗು ಜಿಲ್ಲೆಯಲ್ಲಿ ನಡೆದಿರುವಂತಹ ಸೂಕ್ಷ್ಮ ಪ್ರಕರಣಗಳನ್ನು ಪುನರ್ ಪರಿಶೀಲಿಸಲಾರಂಭಿಸಿದ್ದಾರೆ. ಅವುಗಳಲ್ಲಿ ಆರೋಪಿಗಳಾಗಿದ್ದ, ಅಪರಾಧಿಗಳಾಗಿದ್ದ ವ್ಯಕ್ತಿಗಳ ಮೇಲೆ ನಿಗಾ ಇಡಲು ನಿರ್ಧರಿಸಿದ್ದಾರೆ.</p><p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ‘ಪ್ರಮುಖ ಪ್ರವಾಸಿ ತಾಣಗಳಲ್ಲಿ ನಿರಂತರವಾಗಿ ತಪಾಸಣಾ ಕಾರ್ಯ ನಡೆಸಲಾಗುವುದು. ಈ ಹಿಂದಿನ ಸೂಕ್ಷ್ಮ ಪ್ರಕರಣಗಳ ಆರೋಪಿಗಳ ಕುರಿತೂ ನಿಗಾ ವಹಿಸಲಾಗಿದೆ’ ಎಂದು ಹೇಳಿದರು.</p>.<div><blockquote>ಕೊಡಗು ಜಿಲ್ಲೆಯಾದ್ಯಂತ ಎಲ್ಲೆಡೆ ನಿಗಾ ವಹಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಶಂಕಿತ ವಸ್ತುಗಳು ಕಂಡು ಬಂದ ಕೂಡಲೇ 112 ಕರೆ ಮಾಡಿ ಮಾಹಿತಿ ನೀಡಬೇಕುಕೆ. </blockquote><span class="attribution">ರಾಮರಾಜನ್, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>