ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ಸಿದ್ದಾಪುರದ ತೋಟದಲ್ಲಿ ಪುಂಡಾನೆ ಸೆರೆ

Last Updated 5 ಜೂನ್ 2022, 15:44 IST
ಅಕ್ಷರ ಗಾತ್ರ

ಸಿದ್ದಾಪುರ (ಕೊಡಗು ಜಿಲ್ಲೆ): ಬಿ.ಬಿ.ಟಿ.ಸಿ. ಸಂಸ್ಥೆಯ ಬೀಟಿಕಾಡು ತೋಟದಲ್ಲಿ ಆನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಭಾನುವಾರ ಯಶಸ್ವಿಯಾಗಿದ್ದಾರೆ.

ಒಟ್ಟು 5 ಆನೆಗಳು ಇಲ್ಲಿದ್ದವು. ಇವುಗಳನ್ನು ಸೆರೆ ಹಿಡಿಯಬೇಕು ಎಂಬ ಒತ್ತಾಯ ಸ್ಥಳೀಯರಿಂದ ಕೇಳಿಬಂದಿತ್ತು. ಶನಿವಾರ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿತ್ತು. ಸಂಸ್ಥೆಯ ಬೀಟಿಕಾಡು ತೋಟದಲ್ಲಿ ಪುಂಡಾನೆಯನ್ನು ಪತ್ತೆಹಚ್ಚಿ ಅರಿವಳಿಕೆ ಚುಚ್ಚುಮದ್ದು ನೀಡಲಾಯಿತು. ನಂತರ, 2 ಕಿ.ಮೀ. ದೂರದ ಆಲಿತ್ತೋಪು ಕಾಫಿ ತೋಟದ ಇಳಿಜಾರು ಪ್ರದೇಶದಲ್ಲಿ ಆನೆ ಸೆರೆಯಾಯಿತು.

ನಾಪೋಕ್ಲು ಸಮೀಪದ ಮರಂದೋಡ ಗ್ರಾಮದಲ್ಲಿ ಮೇ 31ರಂದು ಕಾರ್ಯಾಚರಣೆ ವೇಳೆ ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಆನೆ ಕುಸಿದುಬಿದ್ದು ಮೃತಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT