<p><strong>ಮಡಿಕೇರಿ:</strong> ಪ್ರತಿ ಚುನಾವಣೆಯಲ್ಲೂ ಮೊದಲಿಗೆ ಮತದಾನ ಮಾಡುತ್ತಿದ್ದವರೆಂದೇ ಖ್ಯಾತಿಯಾಗಿದ್ದ, ಕಾಂಗ್ರೆಸ್ ಹಿರಿಯ ಮುಖಂಡ ಮಿಟ್ಟು ಚಂಗಪ್ಪ (83) ವಯೋಸಹಜ ಕಾರಣಗಳಿಂದ ಅಮ್ಮತ್ತಿಯಲ್ಲಿ ಗುರುವಾರ ನಿಧನರಾದರು.</p>.<p>ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ. ‘ಶುಕ್ರವಾರ ಮಧ್ಯಾಹ್ನದವರೆಗೂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಇಲ್ಲಿನ ಗಾಂಧಿ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮಡಿಕೇರಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ’ ಎಂದು ಕಾಂಗ್ರೆಸ್ನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>1962ರಿಂದ ಲೋಕಸಭೆ, ವಿಧಾನಸಭೆ ಹಾಗೂ ನಗರಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲೂ ಮೊದಲಿಗರಾಗಿ ಒಟ್ಟು 31 ಬಾರಿ ಮತದಾನ ಮಾಡಿದ್ದ ಚಂಗಪ್ಪ, ಪ್ರಜಾಪ್ರಭುತ್ವದ ಬಹಳ ದೊಡ್ಡ ಪ್ರತಿಪಾದಕರಾಗಿದ್ದರು.</p>.<p>ಸುಮಾರು 5 ದಶಕಗಳ ಕಾಲ ಕಾಂಗ್ರೆಸ್ನಲ್ಲಿದ್ದ ಅವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷ ಹಾಗೂ ಎಐಸಿಸಿ ಸದಸ್ಯರಾಗಿದ್ದರು. ಇಂದಿರಾಗಾಂಧಿ ಸೇರಿದಂತೆ ಪಕ್ಷದ ಬಹುತೇಕ ಹಿರಿಯ ಮುಖಂಡರಿಗೆ ಆತ್ಮೀಯರಾಗಿದ್ದರು. ಪ್ರವಾಸೋದ್ಯಮಿ, ಕೖಷಿಕ, ಕಾಫಿ ಉದ್ಯಮಿಯಾಗಿಯೂ ಗಮನ ಸೆಳೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಪ್ರತಿ ಚುನಾವಣೆಯಲ್ಲೂ ಮೊದಲಿಗೆ ಮತದಾನ ಮಾಡುತ್ತಿದ್ದವರೆಂದೇ ಖ್ಯಾತಿಯಾಗಿದ್ದ, ಕಾಂಗ್ರೆಸ್ ಹಿರಿಯ ಮುಖಂಡ ಮಿಟ್ಟು ಚಂಗಪ್ಪ (83) ವಯೋಸಹಜ ಕಾರಣಗಳಿಂದ ಅಮ್ಮತ್ತಿಯಲ್ಲಿ ಗುರುವಾರ ನಿಧನರಾದರು.</p>.<p>ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ. ‘ಶುಕ್ರವಾರ ಮಧ್ಯಾಹ್ನದವರೆಗೂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಇಲ್ಲಿನ ಗಾಂಧಿ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮಡಿಕೇರಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ’ ಎಂದು ಕಾಂಗ್ರೆಸ್ನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>1962ರಿಂದ ಲೋಕಸಭೆ, ವಿಧಾನಸಭೆ ಹಾಗೂ ನಗರಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲೂ ಮೊದಲಿಗರಾಗಿ ಒಟ್ಟು 31 ಬಾರಿ ಮತದಾನ ಮಾಡಿದ್ದ ಚಂಗಪ್ಪ, ಪ್ರಜಾಪ್ರಭುತ್ವದ ಬಹಳ ದೊಡ್ಡ ಪ್ರತಿಪಾದಕರಾಗಿದ್ದರು.</p>.<p>ಸುಮಾರು 5 ದಶಕಗಳ ಕಾಲ ಕಾಂಗ್ರೆಸ್ನಲ್ಲಿದ್ದ ಅವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷ ಹಾಗೂ ಎಐಸಿಸಿ ಸದಸ್ಯರಾಗಿದ್ದರು. ಇಂದಿರಾಗಾಂಧಿ ಸೇರಿದಂತೆ ಪಕ್ಷದ ಬಹುತೇಕ ಹಿರಿಯ ಮುಖಂಡರಿಗೆ ಆತ್ಮೀಯರಾಗಿದ್ದರು. ಪ್ರವಾಸೋದ್ಯಮಿ, ಕೖಷಿಕ, ಕಾಫಿ ಉದ್ಯಮಿಯಾಗಿಯೂ ಗಮನ ಸೆಳೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>