<p><strong>ಪೊನ್ನಂಪೇಟೆ (ಕೊಡಗು):</strong> ಪೊನ್ನಂಪೇಟೆ, ಗೋಣಿಕೊಪ್ಪಲು ವ್ಯಾಪ್ತಿಯಲ್ಲಿ ಜಾನುವಾರುಗಳ ಮೇಲೆ ಹುಲಿ ದಾಳಿ ಕುರಿತ ನಿರಂತರ ಪ್ರಕರಣಗಳಿಂದಾಗಿ ಹುಲಿ ಸೆರೆಗೆ 20 ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದರೂ, ಫಲಪ್ರದವಾಗಿಲ್ಲ.</p>.<p>ಎರಡು ದಿನಗಳಿಂದ ಬೆಳ್ಳೂರು ಗ್ರಾಮ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ಹುಲಿ ಜಾಡು ಪತ್ತೆಯಾಗಿಲ್ಲ.</p>.<p>‘ಭಾರತೀಯ ವನ್ಯಜೀವಿ ಸಂಸ್ಥೆಯ ವನ್ಯಜೀವಿ ತಜ್ಞ ಡಾ.ಸನತ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಹಲವು ತಜ್ಞರೂ ಇದ್ದು ವೈಜ್ಞಾನಿಕವಾಗಿ ಹುಲಿ ಸೆರೆ ಹಿಡಿಯಲು ಕಾರ್ಯತಂತ್ರ ರೂಪಿಸಲಾಗಿದೆ’ ಎಂದು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಹುಲಿ ದಾಳಿಗೆ ಜಾನುವಾರುಗಳು ಬಲಿಯಾಗಿದ್ದ ಕುಮಟೂರು, ನಡಿಕೇರಿ, ತೂಚಮಕೇರಿ ಹಾಗೂ ಟಿ.ಶೆಟ್ಟಿಗೇರಿ ಭಾಗಗಳಲ್ಲಿ ಬೋನು ಇಟ್ಟಿದ್ದರು, ಯಶ ಸಿಕ್ಕಿರಲಿಲ್ಲ. ಹೀಗಾಗಿ, ಅರಣ್ಯ ಇಲಾಖೆಯ ಸಿಬ್ಬಂದಿಯು ಹುಲಿಯ ಇರುವಿಕೆಯನ್ನು ಪತ್ತೆಹಚ್ಚಿ ಅರಿವಳಿಕೆ ಮದ್ದು ನೀಡಿ ಸೆರೆ ಹಿಡಿಯಲು ನಿರ್ಧರಿಸಿದ್ದಾರೆ.</p>.<p>ಸ್ಥಳೀಯರ ಮಾಹಿತಿ ಆಧರಿಸಿ, ಕೆಲವೆಡೆ ಕಾರ್ಯಾಚರಣೆಗೆ ಮತ್ತಿಗೋಡು ಸಾಕಾನೆಗಳನ್ನೂ ಬಳಸಲಾಗುತ್ತಿದೆ. ಸೋಮವಾರ ಕುಮಟೂರು, ಬೆಳ್ಳೂರು ಗ್ರಾಮಗಳಲ್ಲಿ ಕಾರ್ಯಾಚರಣೆ ನಡೆದಿದ್ದು, 50 ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p><strong>ರಾತ್ರೋರಾತ್ರಿ ಹುಲಿ ದಾಳಿ:</strong>ಕಳೆದ ಕೆಲವು ತಿಂಗಳಿಂದ ದಕ್ಷಿಣ ಕೊಡಗು ಭಾಗದಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ಹುಲಿ ದಾಳಿ ನಡೆಸಿದೆ. ಹಾಲು ಮತ್ತು ಉಳುಮೆಗೆ ಸಾಕಿಕೊಂಡಿದ್ದ ಜಾನುವಾರುಗಳೂ ಸೇರಿ ನೂರಕ್ಕೂ ಹೆಚ್ಚು ಜಾನುವಾರುಗಳು ಬಲಿಯಾಗಿವೆ. ಆದಷ್ಟು ಬೇಗ ಹುಲಿ ಸೆರೆ ಹಿಡಿಯಬೇಕು ಎಂದು ರೈತರು ಆಗ್ರಹಿಸಿದ್ದಾರೆ.</p>.<p>ಅರಣ್ಯದಂಚಿನ ಗ್ರಾಮಗಳಲ್ಲಿ ಅಳವಡಿಸಿದ್ದ ಕ್ಯಾಮೆರಾಗಳಲ್ಲಿ ಕಳೆದು ತಿಂಗಳು ಹುಲಿ ಓಡಾಟ ದಾಖಲಾಗಿತ್ತು. ಆದರೆ, ಕಾರ್ಯಾಚರಣೆಗೆ ಫಲ ಸಿಗುತ್ತಿಲ್ಲ.</p>.<p>ವನ್ಯಜೀವಿ ವಿಭಾಗದ ಎಸಿಎಫ್ ಶ್ರೀಪತಿ, ವಿರಾಜಪೇಟೆ ಡಿಎಫ್ಒ (ಪ್ರಭಾರ) ರೋಶನಿ, ಪೊನ್ನಂಪೇಟೆ ಆರ್ಎಫ್ಒ ತೀರ್ಥ ಅವರೂ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೊನ್ನಂಪೇಟೆ (ಕೊಡಗು):</strong> ಪೊನ್ನಂಪೇಟೆ, ಗೋಣಿಕೊಪ್ಪಲು ವ್ಯಾಪ್ತಿಯಲ್ಲಿ ಜಾನುವಾರುಗಳ ಮೇಲೆ ಹುಲಿ ದಾಳಿ ಕುರಿತ ನಿರಂತರ ಪ್ರಕರಣಗಳಿಂದಾಗಿ ಹುಲಿ ಸೆರೆಗೆ 20 ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದರೂ, ಫಲಪ್ರದವಾಗಿಲ್ಲ.</p>.<p>ಎರಡು ದಿನಗಳಿಂದ ಬೆಳ್ಳೂರು ಗ್ರಾಮ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ಹುಲಿ ಜಾಡು ಪತ್ತೆಯಾಗಿಲ್ಲ.</p>.<p>‘ಭಾರತೀಯ ವನ್ಯಜೀವಿ ಸಂಸ್ಥೆಯ ವನ್ಯಜೀವಿ ತಜ್ಞ ಡಾ.ಸನತ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಹಲವು ತಜ್ಞರೂ ಇದ್ದು ವೈಜ್ಞಾನಿಕವಾಗಿ ಹುಲಿ ಸೆರೆ ಹಿಡಿಯಲು ಕಾರ್ಯತಂತ್ರ ರೂಪಿಸಲಾಗಿದೆ’ ಎಂದು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಹುಲಿ ದಾಳಿಗೆ ಜಾನುವಾರುಗಳು ಬಲಿಯಾಗಿದ್ದ ಕುಮಟೂರು, ನಡಿಕೇರಿ, ತೂಚಮಕೇರಿ ಹಾಗೂ ಟಿ.ಶೆಟ್ಟಿಗೇರಿ ಭಾಗಗಳಲ್ಲಿ ಬೋನು ಇಟ್ಟಿದ್ದರು, ಯಶ ಸಿಕ್ಕಿರಲಿಲ್ಲ. ಹೀಗಾಗಿ, ಅರಣ್ಯ ಇಲಾಖೆಯ ಸಿಬ್ಬಂದಿಯು ಹುಲಿಯ ಇರುವಿಕೆಯನ್ನು ಪತ್ತೆಹಚ್ಚಿ ಅರಿವಳಿಕೆ ಮದ್ದು ನೀಡಿ ಸೆರೆ ಹಿಡಿಯಲು ನಿರ್ಧರಿಸಿದ್ದಾರೆ.</p>.<p>ಸ್ಥಳೀಯರ ಮಾಹಿತಿ ಆಧರಿಸಿ, ಕೆಲವೆಡೆ ಕಾರ್ಯಾಚರಣೆಗೆ ಮತ್ತಿಗೋಡು ಸಾಕಾನೆಗಳನ್ನೂ ಬಳಸಲಾಗುತ್ತಿದೆ. ಸೋಮವಾರ ಕುಮಟೂರು, ಬೆಳ್ಳೂರು ಗ್ರಾಮಗಳಲ್ಲಿ ಕಾರ್ಯಾಚರಣೆ ನಡೆದಿದ್ದು, 50 ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p><strong>ರಾತ್ರೋರಾತ್ರಿ ಹುಲಿ ದಾಳಿ:</strong>ಕಳೆದ ಕೆಲವು ತಿಂಗಳಿಂದ ದಕ್ಷಿಣ ಕೊಡಗು ಭಾಗದಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ಹುಲಿ ದಾಳಿ ನಡೆಸಿದೆ. ಹಾಲು ಮತ್ತು ಉಳುಮೆಗೆ ಸಾಕಿಕೊಂಡಿದ್ದ ಜಾನುವಾರುಗಳೂ ಸೇರಿ ನೂರಕ್ಕೂ ಹೆಚ್ಚು ಜಾನುವಾರುಗಳು ಬಲಿಯಾಗಿವೆ. ಆದಷ್ಟು ಬೇಗ ಹುಲಿ ಸೆರೆ ಹಿಡಿಯಬೇಕು ಎಂದು ರೈತರು ಆಗ್ರಹಿಸಿದ್ದಾರೆ.</p>.<p>ಅರಣ್ಯದಂಚಿನ ಗ್ರಾಮಗಳಲ್ಲಿ ಅಳವಡಿಸಿದ್ದ ಕ್ಯಾಮೆರಾಗಳಲ್ಲಿ ಕಳೆದು ತಿಂಗಳು ಹುಲಿ ಓಡಾಟ ದಾಖಲಾಗಿತ್ತು. ಆದರೆ, ಕಾರ್ಯಾಚರಣೆಗೆ ಫಲ ಸಿಗುತ್ತಿಲ್ಲ.</p>.<p>ವನ್ಯಜೀವಿ ವಿಭಾಗದ ಎಸಿಎಫ್ ಶ್ರೀಪತಿ, ವಿರಾಜಪೇಟೆ ಡಿಎಫ್ಒ (ಪ್ರಭಾರ) ರೋಶನಿ, ಪೊನ್ನಂಪೇಟೆ ಆರ್ಎಫ್ಒ ತೀರ್ಥ ಅವರೂ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>