ಪ್ರವಾಸೋದ್ಯಮದ ಪರ, ವಿರೋಧ ಎನ್ನುವ ಸಂಘರ್ಷಮಯ ವಾತಾವರಣ ಸೃಷ್ಟಿಯಾಗಬಾರದು. ಬದಲಿಗೆ ಉಭಯ ಕಡೆಯವರು ಜಂಟಿಯಾಗಿ ಸಭೆ ನಡೆಸಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಬೇಕಾಗಿದೆ. ಕೊಡಗಿನ ಸಂಸ್ಕೃತಿ ಮತ್ತು ಪರಿಸರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಕುರಿತು ಎರಡೂ ಕಡೆಯವರು ಸಮಾಲೋಚನೆ ನಡೆಸಬೇಕೆಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.