<p>ನಾಪೋಕ್ಲು: ಮಹಿಳೆಯರು ಸಬಲರಾದಾಗ ಮಾತ್ರ ಸಮಾಜದ ಏಳಿಗೆ ಸಾಧ್ಯ ಎಂದು ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಸ್ಥಾಪಕ ಅಧ್ಯಕ್ಷೆ ಮುತ್ತಮ್ಮ ಕೋಟಿ ಹೇಳಿದರು.</p>.<p>ಕೊಡಗು ಜಿಲ್ಲಾ, ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ವತಿಯಿಂದ ಮಡಿಕೇರಿಯ ಲಯನ್ಸ್ ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಮಹಿಳಾ ಸಂಭ್ರಮ- 2026 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಹಿಳೆಯರಿಗೆ ಸರ್ಕಾರದ ಹತ್ತು ಹಲವು ಯೋಜನೆಗಳಿದ್ದು ಅದನ್ನು ಮಹಿಳೆಯರು ಸದುಪಯೋಗ ಪಡೆದುಕೊಂಡು ಆ ಮೂಲಕ ಬದುಕನ್ನು ಭದ್ರವಾಗಿ ರೂಪಿಸಿಕೊಳ್ಳಬೇಕು. ಮಹಿಳಾ ಘಟಕದ ಇಂತಹ ಕಾರ್ಯಕ್ರಮವು ಮಹಿಳೆಯರ ಸಂಘಟನೆಯ ಜೊತೆಗೆ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘಟನೆಗೆ ಪೂರಕವಾಗಿದೆ’ ಎಂದರು.</p>.<p>ಮುಖ್ಯ ಅತಿಥಿ ಲತಾ ಮಡಿಕೆಬೀಡು ಮಾತನಾಡಿ, ‘ಮಹಿಳೆಯರು ಸಂಘಟಿತಗೊಳ್ಳುವ ಮೂಲಕ ಸಮಾಜದ ಆಗು ಹೋಗುಗಳನ್ನು ತಿಳಿಯಬಹುದು. ಈ ರೀತಿಯ ಸ್ಪಂದನೆ ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘವು ಬೆಳವಣಿಗೆಗೆ ಇನ್ನಷ್ಟು ಪೂರಕವಾಗಲಿದೆ’ ಎಂದರು.</p>.<p>ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ಉಪ ಖಜಾಂಚಿ ಭವಾನಿ ಶಿವರಾಜ್ ಮಡಿಕೆಬೀಡು ಮಾತನಾಡಿ, ಇಂತಹ ಕಾರ್ಯಕ್ರಮದ ಮೂಲಕ ಮಹಿಳೆಯರ ನಡುವೆ ಬಾಂಧವ್ಯ ವೃದ್ಧಿಯಾಗಿ ತಮ್ಮ ಸಾಮರ್ಥ್ಯದ ಬೆಳವಣಿಗೆಗೆ ಪೂರಕವಾಗಲಿದೆ ಎಂದರು.</p>.<p>ಕಾವ್ಯ ಮಾತನಾಡಿ ಮಹಿಳೆಯರು ಧೈರ್ಯದಿಂದ ಮುನ್ನುಗ್ಗಿದಾಗ ಮಾತ್ರ ಎಲ್ಲಾ ಕ್ಷೇತ್ರದಲ್ಲೂ ಮುಂದುವರಿಯಲು ಸಾಧ್ಯ ಎಂದರು. ಸೈಕಾಲಜಿ ವಿದ್ಯಾರ್ಥಿನಿ ವರ್ಷ ಯೋಗ, ಧ್ಯಾನ ನಮ್ಮ ಜೀವನಕ್ಕೆ ಎಷ್ಟು ಪ್ರಯೋಜನ ಹಾಗೂ ಸದುಪಯೋಗದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಕಾಂತಿಮಣಿ ರಾಜು ಮಾತನಾಡಿ, ‘ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘವು ಅತ್ಯಂತ ಬಲಿಷ್ಠವಾಗಿ ಸಂಘಟಿತವಾಗುತ್ತಲಿದೆ. ಈ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಕುಲಾಲ ಕುಂಬಾರ ಮಹಿಳಾ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಮಹಿಳಾ ಘಟಕವು ಮಹಿಳೆಯರಿಗೆ ಸರ್ಕಾರದಿಂದ ಲಭ್ಯವಿರುವ ಸವಲತ್ತುಗಳನ್ನು ತಿಳಿಸುವಂತಹ ಕಾರ್ಯಕ್ರಮವನ್ನು ಆಯೋಜಿಸಲಿದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಕುಲಾಲ ಕುಂಬಾರ ಮಹಿಳಾ ಸಾಧಕರನ್ನು ಸನ್ಮಾನಿಸಲಾಯಿತು</p>.<p>ಕೊಡಗು ಜಿಲ್ಲಾ, ಕುಲಾಲ ಕುಂಬಾರ ಸಂಘದ ಉಪಾಧ್ಯಕ್ಷೆ ಶ್ವೇತಾ ಅಶ್ವಥ್ ಮಡಿಕೆ ಬೀಡು, ಉಪ ಕಾರ್ಯದರ್ಶಿ ದಮಯಂತಿ ಚೇರಂಬಾಣೆ, ಪದಾಧಿಕಾರಿ ಸಂಧ್ಯಾ ಚಂದ್ರಶೇಖರ್ ಮೂರ್ನಾಡು ಉಪಸ್ಥಿತರಿದ್ದರು.</p>.<p>ಸಭಾ ಕಾರ್ಯಕ್ರಮದ ನಂತರ ಜಿಲ್ಲೆಯ ಕುಲಾಲ ಕುಂಬಾರ ಮಹಿಳಾ ಬಾಂಧವರಿಂದ ನೃತ್ಯ, ಕವಿತೆ ವಾಚನ, ವಿವಿಧ ರೀತಿಯ ಆಟೋಟಗಳು ನಡೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-51-1380467228</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಪೋಕ್ಲು: ಮಹಿಳೆಯರು ಸಬಲರಾದಾಗ ಮಾತ್ರ ಸಮಾಜದ ಏಳಿಗೆ ಸಾಧ್ಯ ಎಂದು ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಸ್ಥಾಪಕ ಅಧ್ಯಕ್ಷೆ ಮುತ್ತಮ್ಮ ಕೋಟಿ ಹೇಳಿದರು.</p>.<p>ಕೊಡಗು ಜಿಲ್ಲಾ, ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ವತಿಯಿಂದ ಮಡಿಕೇರಿಯ ಲಯನ್ಸ್ ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಮಹಿಳಾ ಸಂಭ್ರಮ- 2026 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಮಹಿಳೆಯರಿಗೆ ಸರ್ಕಾರದ ಹತ್ತು ಹಲವು ಯೋಜನೆಗಳಿದ್ದು ಅದನ್ನು ಮಹಿಳೆಯರು ಸದುಪಯೋಗ ಪಡೆದುಕೊಂಡು ಆ ಮೂಲಕ ಬದುಕನ್ನು ಭದ್ರವಾಗಿ ರೂಪಿಸಿಕೊಳ್ಳಬೇಕು. ಮಹಿಳಾ ಘಟಕದ ಇಂತಹ ಕಾರ್ಯಕ್ರಮವು ಮಹಿಳೆಯರ ಸಂಘಟನೆಯ ಜೊತೆಗೆ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘಟನೆಗೆ ಪೂರಕವಾಗಿದೆ’ ಎಂದರು.</p>.<p>ಮುಖ್ಯ ಅತಿಥಿ ಲತಾ ಮಡಿಕೆಬೀಡು ಮಾತನಾಡಿ, ‘ಮಹಿಳೆಯರು ಸಂಘಟಿತಗೊಳ್ಳುವ ಮೂಲಕ ಸಮಾಜದ ಆಗು ಹೋಗುಗಳನ್ನು ತಿಳಿಯಬಹುದು. ಈ ರೀತಿಯ ಸ್ಪಂದನೆ ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘವು ಬೆಳವಣಿಗೆಗೆ ಇನ್ನಷ್ಟು ಪೂರಕವಾಗಲಿದೆ’ ಎಂದರು.</p>.<p>ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ಉಪ ಖಜಾಂಚಿ ಭವಾನಿ ಶಿವರಾಜ್ ಮಡಿಕೆಬೀಡು ಮಾತನಾಡಿ, ಇಂತಹ ಕಾರ್ಯಕ್ರಮದ ಮೂಲಕ ಮಹಿಳೆಯರ ನಡುವೆ ಬಾಂಧವ್ಯ ವೃದ್ಧಿಯಾಗಿ ತಮ್ಮ ಸಾಮರ್ಥ್ಯದ ಬೆಳವಣಿಗೆಗೆ ಪೂರಕವಾಗಲಿದೆ ಎಂದರು.</p>.<p>ಕಾವ್ಯ ಮಾತನಾಡಿ ಮಹಿಳೆಯರು ಧೈರ್ಯದಿಂದ ಮುನ್ನುಗ್ಗಿದಾಗ ಮಾತ್ರ ಎಲ್ಲಾ ಕ್ಷೇತ್ರದಲ್ಲೂ ಮುಂದುವರಿಯಲು ಸಾಧ್ಯ ಎಂದರು. ಸೈಕಾಲಜಿ ವಿದ್ಯಾರ್ಥಿನಿ ವರ್ಷ ಯೋಗ, ಧ್ಯಾನ ನಮ್ಮ ಜೀವನಕ್ಕೆ ಎಷ್ಟು ಪ್ರಯೋಜನ ಹಾಗೂ ಸದುಪಯೋಗದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಕಾಂತಿಮಣಿ ರಾಜು ಮಾತನಾಡಿ, ‘ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘವು ಅತ್ಯಂತ ಬಲಿಷ್ಠವಾಗಿ ಸಂಘಟಿತವಾಗುತ್ತಲಿದೆ. ಈ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಕುಲಾಲ ಕುಂಬಾರ ಮಹಿಳಾ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಮಹಿಳಾ ಘಟಕವು ಮಹಿಳೆಯರಿಗೆ ಸರ್ಕಾರದಿಂದ ಲಭ್ಯವಿರುವ ಸವಲತ್ತುಗಳನ್ನು ತಿಳಿಸುವಂತಹ ಕಾರ್ಯಕ್ರಮವನ್ನು ಆಯೋಜಿಸಲಿದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಕುಲಾಲ ಕುಂಬಾರ ಮಹಿಳಾ ಸಾಧಕರನ್ನು ಸನ್ಮಾನಿಸಲಾಯಿತು</p>.<p>ಕೊಡಗು ಜಿಲ್ಲಾ, ಕುಲಾಲ ಕುಂಬಾರ ಸಂಘದ ಉಪಾಧ್ಯಕ್ಷೆ ಶ್ವೇತಾ ಅಶ್ವಥ್ ಮಡಿಕೆ ಬೀಡು, ಉಪ ಕಾರ್ಯದರ್ಶಿ ದಮಯಂತಿ ಚೇರಂಬಾಣೆ, ಪದಾಧಿಕಾರಿ ಸಂಧ್ಯಾ ಚಂದ್ರಶೇಖರ್ ಮೂರ್ನಾಡು ಉಪಸ್ಥಿತರಿದ್ದರು.</p>.<p>ಸಭಾ ಕಾರ್ಯಕ್ರಮದ ನಂತರ ಜಿಲ್ಲೆಯ ಕುಲಾಲ ಕುಂಬಾರ ಮಹಿಳಾ ಬಾಂಧವರಿಂದ ನೃತ್ಯ, ಕವಿತೆ ವಾಚನ, ವಿವಿಧ ರೀತಿಯ ಆಟೋಟಗಳು ನಡೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-51-1380467228</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>