<p><strong>ಗೋಣಿಕೊಪ್ಪಲು: </strong>ಪ್ರಾಣಿ, ಪಕ್ಷಿ ಹಾಗೂ ಗಿಡಮರಗಳಿಂದ ಮಣ್ಣು ಫಲವತ್ತತೆ ಹೊಂದುತ್ತದೆ. ಗಿಡಮರಗಳನ್ನು ಬೆಳೆಸುವ ಮೂಲಕ ಪ್ರಾಣಿ ಪಕ್ಷಿಗಳ ಸಂಕುಲ ಉಳಿಸಬೇಕು ಎಂದು ಇಲ್ಲಿನ ಅನುದಾನಿತ ಪ್ರೌಢಶಾಲೆ ಶಿಕ್ಷಕ ಕೃಷ್ಣ ಚೈತನ್ಯ ಹೇಳಿದರು.</p>.<p>ಸ್ಥಳೀಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಇಲಾಖೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಮಂಗಳೂರು ಕೆಮಿಕಲ್ಸ್ ಅಂಡ್ ಫರ್ಟಿಲೈಸರ್ಸ್ ಸಹಯೋಗದಲ್ಲಿ ಗುರುವಾರ ನಡೆದ ವಿಶ್ವಮಣ್ಣು ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಮಣ್ಣಿನ ಸಂರಕ್ಷಣೆಯಿಂದ ಗುಣಮಟ್ಟದ ಆಹಾರ ಉತ್ಪಾದನೆ ಸಾಧ್ಯ. ಜತೆಗೆ ಉತ್ತಮ ಇಳುವರಿಯನ್ನೂ ಕಾಣಬಹುದು. ಮಣ್ಣಿನ ಸಂರಕ್ಷಣೆ ಈ ಹೊತ್ತಿನ ತುರ್ತು ಅಗತ್ಯಗಳಲ್ಲಿ ಒಂದಾಗಿದೆ ಎಂದು ನುಡಿದರು.</p>.<p>ಮಂಗಳೂರು ಕೆಮಿಕಲ್ಸ್ ಅಂಡ್ ಫರ್ಟಿಲೈಸರ್ ಲಿಮಿಟೆಡ್ ನ ಡೆಪ್ಯುಟಿ ಮ್ಯಾನೇಜರ್ ಮೃತ್ಯಂಜಯ್ಯ ಮಾತನಾಡಿ, ಬೆಳೆ ಬೆಳೆಯುವ ಮೊದಲು ಮಣ್ಣು ಪರೀಕ್ಷೆ ನಡೆಸವುದು ಕಡ್ಡಾಯವಾಗಬೇಕು. ಬಳಿಕ ಯಾವ ಪ್ರಮಾಣದಲ್ಲಿ ಗೊಬ್ಬರ ಬಳಸಬೇಕು ಎಂಬುದನ್ನು ತಿಳಿದು ಗೊಬ್ಬರ ಬಳಕೆಗೆ ಮುಂದಾಗಬೇಕು ಎಂದು ತಿಳಿಸಿದರು.</p>.<p>ಕೃಷಿ ಅಧಿಕಾರಿ ಲೆವಿನ್ ಮಾದಪ್ಪ ಪ್ರಾತ್ಯಕ್ಷಿಕೆ ಮೂಲಕ ಮಣ್ಣಿನ ಫಲವತ್ತತೆ ಹಾಗೂ ಭತ್ತದ ಕೃಷಿಯಲ್ಲಿನ ಇಳುವರಿ ಬಗ್ಗೆ ಮಾಹಿತಿ ನೀಡಿದರು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಸಾಜು ಜಾರ್ಜ್ ಹಾಜರಿದ್ದರು. ಕೇಂದ್ರದ ವಿಷಯ ತಜ್ಷರಾದ ಡಾ.ಪ್ರಭಾಕರ್,ಡಾ.ಸೋಮಶೇಖರ್ ಕಾರ್ಯಕ್ರಮ ಆಯೋಜಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು: </strong>ಪ್ರಾಣಿ, ಪಕ್ಷಿ ಹಾಗೂ ಗಿಡಮರಗಳಿಂದ ಮಣ್ಣು ಫಲವತ್ತತೆ ಹೊಂದುತ್ತದೆ. ಗಿಡಮರಗಳನ್ನು ಬೆಳೆಸುವ ಮೂಲಕ ಪ್ರಾಣಿ ಪಕ್ಷಿಗಳ ಸಂಕುಲ ಉಳಿಸಬೇಕು ಎಂದು ಇಲ್ಲಿನ ಅನುದಾನಿತ ಪ್ರೌಢಶಾಲೆ ಶಿಕ್ಷಕ ಕೃಷ್ಣ ಚೈತನ್ಯ ಹೇಳಿದರು.</p>.<p>ಸ್ಥಳೀಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಇಲಾಖೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಮಂಗಳೂರು ಕೆಮಿಕಲ್ಸ್ ಅಂಡ್ ಫರ್ಟಿಲೈಸರ್ಸ್ ಸಹಯೋಗದಲ್ಲಿ ಗುರುವಾರ ನಡೆದ ವಿಶ್ವಮಣ್ಣು ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಮಣ್ಣಿನ ಸಂರಕ್ಷಣೆಯಿಂದ ಗುಣಮಟ್ಟದ ಆಹಾರ ಉತ್ಪಾದನೆ ಸಾಧ್ಯ. ಜತೆಗೆ ಉತ್ತಮ ಇಳುವರಿಯನ್ನೂ ಕಾಣಬಹುದು. ಮಣ್ಣಿನ ಸಂರಕ್ಷಣೆ ಈ ಹೊತ್ತಿನ ತುರ್ತು ಅಗತ್ಯಗಳಲ್ಲಿ ಒಂದಾಗಿದೆ ಎಂದು ನುಡಿದರು.</p>.<p>ಮಂಗಳೂರು ಕೆಮಿಕಲ್ಸ್ ಅಂಡ್ ಫರ್ಟಿಲೈಸರ್ ಲಿಮಿಟೆಡ್ ನ ಡೆಪ್ಯುಟಿ ಮ್ಯಾನೇಜರ್ ಮೃತ್ಯಂಜಯ್ಯ ಮಾತನಾಡಿ, ಬೆಳೆ ಬೆಳೆಯುವ ಮೊದಲು ಮಣ್ಣು ಪರೀಕ್ಷೆ ನಡೆಸವುದು ಕಡ್ಡಾಯವಾಗಬೇಕು. ಬಳಿಕ ಯಾವ ಪ್ರಮಾಣದಲ್ಲಿ ಗೊಬ್ಬರ ಬಳಸಬೇಕು ಎಂಬುದನ್ನು ತಿಳಿದು ಗೊಬ್ಬರ ಬಳಕೆಗೆ ಮುಂದಾಗಬೇಕು ಎಂದು ತಿಳಿಸಿದರು.</p>.<p>ಕೃಷಿ ಅಧಿಕಾರಿ ಲೆವಿನ್ ಮಾದಪ್ಪ ಪ್ರಾತ್ಯಕ್ಷಿಕೆ ಮೂಲಕ ಮಣ್ಣಿನ ಫಲವತ್ತತೆ ಹಾಗೂ ಭತ್ತದ ಕೃಷಿಯಲ್ಲಿನ ಇಳುವರಿ ಬಗ್ಗೆ ಮಾಹಿತಿ ನೀಡಿದರು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಸಾಜು ಜಾರ್ಜ್ ಹಾಜರಿದ್ದರು. ಕೇಂದ್ರದ ವಿಷಯ ತಜ್ಷರಾದ ಡಾ.ಪ್ರಭಾಕರ್,ಡಾ.ಸೋಮಶೇಖರ್ ಕಾರ್ಯಕ್ರಮ ಆಯೋಜಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>