ಕೊಡಗು ಜಿಲ್ಲಾಮಟ್ಟದ ಯುವ ಜನೋತ್ಸವವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಗುರುವಾರ ಉದ್ಘಾಟಿಸಿದರು
ಕೊಡಗು ಜಿಲ್ಲಾಮಟ್ಟದ ಯುವ ಜನೋತ್ಸವದಲ್ಲಿ ಕಲಾವಿದರು ಜನಪದ ಗೀತೆಗಳನ್ನು ಹಾಡಿದರು
ಅತ್ಯಂತ ಸಂಪದ್ಭರಿತವಾದ ಜಾನಪದ ಕಲಾ ಸಂಸ್ಕೃತಿಯತ್ತ ಯುವ ಪೀಳಿಗೆಯ ಆಸಕ್ತಿ ಕ್ಷೀಣಿಸುತ್ತಿರುವುದು ಕಂಡು ಬರುತ್ತಿದೆ. ವೈವಿಧ್ಯಮಯವಾದ ಜಾನಪದ ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಸಕ್ತರಾಗಬೇಕು.
ವಿ.ಟಿ.ವಿಸ್ಮಯಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ.
ಯುವ ಸಮೂಹ ಮಾದಕ ಪದಾರ್ಥಗಳ ಸೇವನೆಗೆ ಮಾರುಹೋಗದೆ ಬದುಕಿನಲ್ಲಿ ಉತ್ತಮ ಹೆಸರನ್ನುಗಳಿಸಿ ಕೀರ್ತಿ ಗಳಿಸಬೇಕು
ಕೆಟಿಕೆ ಉಲ್ಲಾಸ್ ಮೈ ಭಾರತ್ ಕೊಡಗು ಯುವ ಅಧಿಕಾರಿ
ಯುವ ಜನೋತ್ಸವದಲ್ಲಿ ಯುವ ಸಮೂಹ ಪಾಲ್ಗೊಳ್ಳುವುದರ ಮೂಲಕ ಪ್ರತಿಭೆಯನ್ನು ಹೊರಸೂಸಿ ರಾಷ್ಟ್ರಮಟ್ಟದಲ್ಲಿ ಕೀರ್ತಿ ತರುವಂತಾಗಲಿ
ಪಿ.ಕಲಾವತಿ ಮಡಿಕೇರಿ ನಗರಸಭಾ ಅಧ್ಯಕ್ಷೆ.
ಭಾಗವಹಿಸುವ ತಂಡಗಳ ಸದಸ್ಯರಿಗೆ 15 ರಿಂದ 29 ವರ್ಷದೊಳಗಿನ ವಯೋಮಿತಿ ನಿಗದಿಗೊಳಿಸುವ ಮೂಲಕ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗಿದೆ.