ಕೃತಿ ಬಿಡುಗಡೆ ಮಾಡಿ ಮಾತನಾಡಿದ ಸಾಹಿತಿ ಬಾಚರಣಿಯಂಡ ಅಪ್ಪಣ್ಣ, ‘ಪಟ್ಟೋಲೆ ಪಳಮೆ’ ಕೃತಿಯಲ್ಲಿ ಕೊಡವರ ಪ್ರಾಚೀನ ಕಾಲದ ಪದ್ಧತಿ, ಪರಂಪರೆ, ಸಂಸ್ಕೃತಿಯನ್ನು ಸಂಗ್ರಹಿಸಲಾಗಿದೆ. ಕಾವೇರಿ ಪುರಾಣ, ವಿವಾಹ ಪದ್ಧತಿ, ಸಾವಿನ ಪದ್ಧತಿ, ಕೊಡಗಿನ ಐತಿಹಾಸಿಕ ವಿವರ, ಕೊಡವ ಗಾದೆ, ಒಗಟು, ಮೂಢನಂಬಿಕೆ ಸೇರಿದಂತೆ ಹುಟ್ಟಿನಿಂದ ಸಾವಿನವರೆಗಿನ ಎಲ್ಲಾ ವಿವರಗಳನ್ನು ನೀಡಲಾಗಿದೆ. ಇದರಿಂದ ಕೊಡಗಿನ ಸಂಸ್ಕೃತಿ, ಆಚಾರ-ವಿಚಾರಗಳು ಇನ್ನೂ ಜೀವಂತವಾಗಿ ಉಳಿಯಲು ಸಹಕಾರಿಯಾಗಿದೆ’ ಎಂದು ತಿಳಿಸಿದರು.