ನ. 11ರಂದು ನಡೆಯುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕೊಡವ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷ ಕೀತಿಯಂಡ ಕರ್ಸನ್ ಕಾರ್ಯಪ್ಪ ಅವರು ವಹಿಸಲಿದ್ದು, ಸಮಾಜ ಸೇವಕ ತೇಲಪಂಡ ಶಿವಕುಮಾರ್, ಅಖಿಲ ಕೊಡವ ಸಮಾಜಗಳ ಅಧ್ಯಕ್ಷ ಪರದಂಡ ಕೆ.ಸುಬ್ರಮಣಿ, ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಮನುಕುಮಾರ್, ಪುರಸಭೆಯ ಸದಸ್ಯೆ ಅಂಜಪರವಂಡ ಯಶೋಧ ಮಂದಣ್ಣ ಮತ್ತು ಉದ್ಯಮಿ ನಾಗೇಶ್ ಪವನ್ ಅವರು ಭಾಗವಹಿಸಲಿದ್ದಾರೆ.