<p><strong>ಮಡಿಕೇರಿ:</strong> ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ನೀಡಲಾಗುವ 2022–23ನೇ ಮತ್ತು 2023–24ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ 6 ಮಂದಿ ಹಾಗೂ ಪುಸ್ತಕ ಪ್ರಶಸ್ತಿಗೆ ನಾಲ್ವರನ್ನು ಆಯ್ಕೆ ಮಾಡಲಾಗಿದೆ.</p>.<p>ವಾರ್ಷಿಕ ಪ್ರಶಸ್ತಿಯು ತಲಾ ₹ 50 ಸಾವಿರ ಮತ್ತು ಪುಸ್ತಕ ಪ್ರಶಸ್ತಿಯು ತಲಾ ₹ 25 ಸಾವಿರ ಒಳಗೊಂಡಿದೆ.</p>.<p>‘ಕೋಡಿಮಣಿಯಂಡ ತಮ್ಮುಣಿ ಬೋಪಯ್ಯ (ಕೊಡವ ಸಂಸ್ಕೃತಿ, ಪಾಟ್-ಪಡಿಪು ಕ್ಷೇತ್ರ), ಕಾಟಿಮಡ ಜಿಮ್ಮಿ ಅಣ್ಣಯ್ಯ (ಕೊಡವ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರ), ಚೇನಂಡ ರಘು ಉತ್ತಪ್ಪ (ಕೊಡವ ಜಾನಪದ ಕ್ಷೇತ್ರ), ಕೈಬುಲಿರ ಪಾರ್ವತಿ ಬೋಪಯ್ಯ (ಸಮಾಜ ಸೇವಾ ಕ್ಷೇತ್ರ), ಚೀಯಕಪೂವಂಡ ಬಿ. ದೇವಯ್ಯ (ಕೊಡವ ಆಟ್-ಪಾಟ್, ಸಂಸ್ಕೃತಿ ಕ್ಷೇತ್ರ), ಹೀರಕುಟ್ಟಡ ಟಸ್ಸಿ ಸದನ್ (ಜನ ಸೇವಾ ಕ್ಷೇತ್ರ) ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ’ ಎಂದು ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಮಚ್ಚಮಡ ಲಾಲ ಕುಟ್ಟಪ್ಪ ಅವರ ‘ಮೂಪಾಜೆ ನಿಗಂಟ್’, ಐಚಂಡ ರಶ್ಮಿ ಮೇದಪ್ಪ ಅವರ ‘ಸಾಂಸ್ಕೃತಿರ ಪಿಞ್ಞ ಧಾರ್ಮಿಕ ಹಿನ್ನಲೆಲ್ ಕೊಡವಡ ಐನ್ಮನೆ ಅಧ್ಯಯನ ಗ್ರಂಥ ಪುಸ್ತಕ, ಕೊಟ್ಟ್ಕತ್ತಿರ ಪ್ರಕಾಶ್ ಕಾರ್ಯಪ್ಪ ಅವರ ‘ನಾಡ ಕೊಡಗ್ (ಕಾದಂಬರಿ)’ ಹಾಗೂ ಚೊಟ್ಟೆಯಂಡ ಲಲಿತ ಕಾರ್ಯಪ್ಪ-‘ಅಗ್ಗೇನ’ ಎಂಬ ಪುಸ್ತಕಕ್ಕೆ ಪ್ರಶಸ್ತಿ ನೀಡಲಾಗುವುದು’ ಎಂದು ಹೇಳಿದರು.</p>.<p>‘ಮಾರ್ಚ್ 29 ಹಾಗೂ 30ರಂದು ಅಮ್ಮತ್ತಿಯ ಕೊಡವ ಸಮಾಜದಲ್ಲಿ ‘ಕೊಡವ ಬಲ್ಯನಮ್ಮೆ’ಯನ್ನು ಆಯೋಜಿಸಿದ್ದು, 9 ಪುಸ್ತಕಗಳ ಬಿಡುಗಡೆ, ವಿಚಾರಗೋಷ್ಠಿ, ಕವಿಗೋಷ್ಠಿ ನಡೆಯಲಿದೆ. 30ರಂದು ಬೆಳಿಗ್ಗೆ 11ಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ನೀಡಲಾಗುವ 2022–23ನೇ ಮತ್ತು 2023–24ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ 6 ಮಂದಿ ಹಾಗೂ ಪುಸ್ತಕ ಪ್ರಶಸ್ತಿಗೆ ನಾಲ್ವರನ್ನು ಆಯ್ಕೆ ಮಾಡಲಾಗಿದೆ.</p>.<p>ವಾರ್ಷಿಕ ಪ್ರಶಸ್ತಿಯು ತಲಾ ₹ 50 ಸಾವಿರ ಮತ್ತು ಪುಸ್ತಕ ಪ್ರಶಸ್ತಿಯು ತಲಾ ₹ 25 ಸಾವಿರ ಒಳಗೊಂಡಿದೆ.</p>.<p>‘ಕೋಡಿಮಣಿಯಂಡ ತಮ್ಮುಣಿ ಬೋಪಯ್ಯ (ಕೊಡವ ಸಂಸ್ಕೃತಿ, ಪಾಟ್-ಪಡಿಪು ಕ್ಷೇತ್ರ), ಕಾಟಿಮಡ ಜಿಮ್ಮಿ ಅಣ್ಣಯ್ಯ (ಕೊಡವ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರ), ಚೇನಂಡ ರಘು ಉತ್ತಪ್ಪ (ಕೊಡವ ಜಾನಪದ ಕ್ಷೇತ್ರ), ಕೈಬುಲಿರ ಪಾರ್ವತಿ ಬೋಪಯ್ಯ (ಸಮಾಜ ಸೇವಾ ಕ್ಷೇತ್ರ), ಚೀಯಕಪೂವಂಡ ಬಿ. ದೇವಯ್ಯ (ಕೊಡವ ಆಟ್-ಪಾಟ್, ಸಂಸ್ಕೃತಿ ಕ್ಷೇತ್ರ), ಹೀರಕುಟ್ಟಡ ಟಸ್ಸಿ ಸದನ್ (ಜನ ಸೇವಾ ಕ್ಷೇತ್ರ) ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ’ ಎಂದು ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಮಚ್ಚಮಡ ಲಾಲ ಕುಟ್ಟಪ್ಪ ಅವರ ‘ಮೂಪಾಜೆ ನಿಗಂಟ್’, ಐಚಂಡ ರಶ್ಮಿ ಮೇದಪ್ಪ ಅವರ ‘ಸಾಂಸ್ಕೃತಿರ ಪಿಞ್ಞ ಧಾರ್ಮಿಕ ಹಿನ್ನಲೆಲ್ ಕೊಡವಡ ಐನ್ಮನೆ ಅಧ್ಯಯನ ಗ್ರಂಥ ಪುಸ್ತಕ, ಕೊಟ್ಟ್ಕತ್ತಿರ ಪ್ರಕಾಶ್ ಕಾರ್ಯಪ್ಪ ಅವರ ‘ನಾಡ ಕೊಡಗ್ (ಕಾದಂಬರಿ)’ ಹಾಗೂ ಚೊಟ್ಟೆಯಂಡ ಲಲಿತ ಕಾರ್ಯಪ್ಪ-‘ಅಗ್ಗೇನ’ ಎಂಬ ಪುಸ್ತಕಕ್ಕೆ ಪ್ರಶಸ್ತಿ ನೀಡಲಾಗುವುದು’ ಎಂದು ಹೇಳಿದರು.</p>.<p>‘ಮಾರ್ಚ್ 29 ಹಾಗೂ 30ರಂದು ಅಮ್ಮತ್ತಿಯ ಕೊಡವ ಸಮಾಜದಲ್ಲಿ ‘ಕೊಡವ ಬಲ್ಯನಮ್ಮೆ’ಯನ್ನು ಆಯೋಜಿಸಿದ್ದು, 9 ಪುಸ್ತಕಗಳ ಬಿಡುಗಡೆ, ವಿಚಾರಗೋಷ್ಠಿ, ಕವಿಗೋಷ್ಠಿ ನಡೆಯಲಿದೆ. 30ರಂದು ಬೆಳಿಗ್ಗೆ 11ಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>