<p>ಕೊಣನೂರು: ಹೋಬಳಿಯ ಕಡವಿನಹೊಸಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡರೆ ಅದು ಹಿರಿಯ ರಾಜಕಾರಣಿ ದಿ. ಕೆ.ಬಿ.ಮಲ್ಲಪ್ಪ ಅವರಿಗೆ ಗೌರವ ಸಲ್ಲಿಸಿದಂತೆ ಎಂದು ಶಾಸಕ ಎ.ಮಂಜು ಹೇಳಿದರು.</p>.<p>ಕಡವಿನಹೊಸಳ್ಳಿಯಲ್ಲಿ ಭಾನುವಾರ ₹ 65 ಲಕ್ಷ ವೆಚ್ಚದ ಆರೋಗ್ಯ ಉಪಕೇಂದ್ರ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.</p>.<p>‘ಈ ಹಿಂದೆ ನಾನು ಸಚಿವನಾಗಿದ್ದ ಅವಧಿಯಲ್ಲಿ ಕಡವಿನಹೊಸಳ್ಳಿಗೆ ಉಪಕೇಂದ್ರ ಮಂಜೂರು ಮಾಡಿದ್ದೆ. ಗಡಿ ಗ್ರಾಮವಾದ ಇಲ್ಲಿನ ಜನರು ಗ್ರಾಮ ಪಂಚಾಯಿತಿ ಕೆಲಸಗಳಿಗಾಗಿ ದೂರದ ಊರಿಗೆ ಸುತ್ತುವ ತಾಪತ್ರಯ ತಪ್ಪಿಸಲಾಗಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಕಲ್ಪಿಸುಸಲು ಕಡವಿನಹೊಸಹಳ್ಳಿ ಮತ್ತು ಚನ್ನಿಗರಾಯನ ಅಬ್ಬೂರು ಗ್ರಾಮದಲ್ಲಿ ₹ 65 ಲಕ್ಷ ವೆಚ್ಚದ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದ್ದೇನೆ’ ಎಂದರು.</p>.<p>ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, 6 ತಿಂಗಳೊಳಗಾಗಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದ್ದು, ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>ಕೊಡಗು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್, ಹಾರಂಗಿ ಮಹಾ ಮಂಡಳಿ ಅಧ್ಯಕ್ಷ ಎಸ್.ಸಿ. ಚೌಡೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜು, ಶೇಖರ, ಮುಖಂಡರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-36-252364539</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಣನೂರು: ಹೋಬಳಿಯ ಕಡವಿನಹೊಸಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡರೆ ಅದು ಹಿರಿಯ ರಾಜಕಾರಣಿ ದಿ. ಕೆ.ಬಿ.ಮಲ್ಲಪ್ಪ ಅವರಿಗೆ ಗೌರವ ಸಲ್ಲಿಸಿದಂತೆ ಎಂದು ಶಾಸಕ ಎ.ಮಂಜು ಹೇಳಿದರು.</p>.<p>ಕಡವಿನಹೊಸಳ್ಳಿಯಲ್ಲಿ ಭಾನುವಾರ ₹ 65 ಲಕ್ಷ ವೆಚ್ಚದ ಆರೋಗ್ಯ ಉಪಕೇಂದ್ರ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.</p>.<p>‘ಈ ಹಿಂದೆ ನಾನು ಸಚಿವನಾಗಿದ್ದ ಅವಧಿಯಲ್ಲಿ ಕಡವಿನಹೊಸಳ್ಳಿಗೆ ಉಪಕೇಂದ್ರ ಮಂಜೂರು ಮಾಡಿದ್ದೆ. ಗಡಿ ಗ್ರಾಮವಾದ ಇಲ್ಲಿನ ಜನರು ಗ್ರಾಮ ಪಂಚಾಯಿತಿ ಕೆಲಸಗಳಿಗಾಗಿ ದೂರದ ಊರಿಗೆ ಸುತ್ತುವ ತಾಪತ್ರಯ ತಪ್ಪಿಸಲಾಗಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಕಲ್ಪಿಸುಸಲು ಕಡವಿನಹೊಸಹಳ್ಳಿ ಮತ್ತು ಚನ್ನಿಗರಾಯನ ಅಬ್ಬೂರು ಗ್ರಾಮದಲ್ಲಿ ₹ 65 ಲಕ್ಷ ವೆಚ್ಚದ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದ್ದೇನೆ’ ಎಂದರು.</p>.<p>ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, 6 ತಿಂಗಳೊಳಗಾಗಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದ್ದು, ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>ಕೊಡಗು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್, ಹಾರಂಗಿ ಮಹಾ ಮಂಡಳಿ ಅಧ್ಯಕ್ಷ ಎಸ್.ಸಿ. ಚೌಡೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜು, ಶೇಖರ, ಮುಖಂಡರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-36-252364539</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>