‘ಜನಸ್ವರಾಜ್ ಸಮಾವೇಶ ಅಲ್ಲ; ಜನರ ಬರ್ಬಾದ್ ಯಾತ್ರೆ’ ಎಂಬ ಸಿದ್ದರಾಮಯ್ಯ ಅವರ ಟೀಕೆಗೆ ಪ್ರಕ್ರಿಯಿಸಿ, ‘ರಾಷ್ಟ್ರದಲ್ಲಿಯೇ ಕಾಂಗ್ರೆಸ್ ಪಕ್ಷ ಮಾಯವಾಗಿದೆ. ಕಾಂಗ್ರೆಸ್ ಅನ್ನು ಜನ ತಿರಸ್ಕಾರ ಮಾಡಿದ್ದಾರೆ. ಅದು ಪ್ರಾದೇಶಿಕ ಪಕ್ಷವಾಗಿದೆ. ರಾಜ್ಯ ಕಾಂಗ್ರೆಸ್ನಲ್ಲಿ ಎರಡು ಗುಂಪುಗಳಿವೆ. ಅದೂ ಯಾವಾಗ ಒಡೆದು ಹೋಗಲಿದೆಯೋ ತಿಳಿದಿಲ್ಲ’ ಎಂದು ವ್ಯಂಗ್ಯವಾಡಿದರು.