ಮಡಿಕೇರಿ: ಕೊಡಗಿನ ಗಡಿ ಪೆರುಂಬಾಡಿಯಲ್ಲಿ ಸೋಮವಾರ ಮುಂಜಾನೆ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿಯ ಅಂಬಾರಿ ಬಸ್, ರಸ್ತೆಯ ಬದಿಯ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಮೃತಪಟ್ಟಿದ್ದಾರೆ. ಬೆಂಗಳೂರಿನ ಸ್ವಾಮಿ ಮೃತಪಟ್ಟ ಚಾಲಕ.
ವಿರಾಜಪೇಟೆ ಪೊಲೀಸರು ಹಾಗೂ ಕೇರಳ ಕಾರ್ಯ ಪಡೆಯ ಸಿಬ್ಬಂದಿ ಮೂರು ಗಂಟೆ ಕಾರ್ಯಾಚರಣೆ ನಡೆಸಿ ಸ್ಟೇರಿಂಗ್ ಅಡಿಗೆ ಸಿಲುಕಿದ್ದ ಚಾಲಕನ ಮೃತದೇಹ ಹೊರಕ್ಕೆ ತೆಗೆಯಲಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.