ಚನ್ನರಾಯಪಟ್ಟಣದಿಂದ ಮಡಿಕೇರಿಗೆ ಹೊರಟಿದ್ದ ಈ ಬಸ್ನಲ್ಲಿ 44 ಮಂದಿ ಪ್ರಯಾಣಿಸುತ್ತಿದ್ದರು. ತಾಂತ್ರಿಕ ದೋಷದಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದಿದೆ. ಕೆಲವು ಪ್ರಯಾಣಿಕರಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ನ ಬಹುಭಾಗ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.