ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು | ಕಂದಕಕ್ಕೆ ಬಿದ್ದ KSRTC ಬಸ್: 40 ಮಂದಿಗೆ ಗಾಯ

Last Updated 21 ಫೆಬ್ರುವರಿ 2023, 5:28 IST
ಅಕ್ಷರ ಗಾತ್ರ

ಸಿದ್ದಾಪುರ (ಕೊಡಗು ಜಿಲ್ಲೆ): ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ ಟಿಸಿ ಬಸ್ ಮಂಗಳವಾರ ಇಲ್ಲಿನ ವಿರಾಜಪೇಟೆ ತಾಲ್ಲೂಕಿನ ಅಮ್ಮತಿ ಕಾವಾಡಿ ಕಂದಕಕ್ಕೆ ಉರುಳಿದೆ.

ಚಾಲಕ ಸೇರಿದಂತೆ ಬಸ್ ನಲ್ಲಿ ಇದ್ದ ಸುಮಾರು 40 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಕೇರಳ ರಾಜ್ಯದ ಎರ್ನಾಕುಲಂನಿಂದ ವಿರಾಜಪೇಟೆ ಮಾರ್ಗವಾಗಿ ಹಾಸನಕ್ಕೆ ಈ ಬಸ್ ತೆರಳುತಿತ್ತು. ನಸುಕಿನ 4 ಗಂಟೆಗೆ ವಿರಾಜಪೇಟೆ ಬಸ್ ನಿಲ್ದಾಣ ದಿಂದ ಬಸ್ ಹೊರಟಿತ್ತು.

ಬೆಳಗ್ಗಿನ ಜಾವ ಸಮಯದಲ್ಲಿ ಕಾವಾಡಿ ಗ್ರಾಮದ ಕಂದಕಕ್ಕೆ ಮಗುಚಿ ಬಿದ್ದಿದೆ. ರಸ್ತೆಯಲ್ಲಿ ದಟ್ಟವಾಗಿ ಮಂಜು ಆವರಿಸಿತ್ತು ಎಂದು ಗಾಯಾಳು ಒಬ್ಬರು ಮಾಹಿತಿ ನೀಡಿದರು.

ಗಾಯಳುಗಳನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿರಾಜಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT