ಸಾರಿಗೆ ನೌಕರರ ಪ್ರತಿಭಟನೆಯ ಮಾಹಿತಿ ತಿಳಿಯದೇ ಮೈಸೂರು, ಮಂಗಳೂರು, ಹಾಸನ ಹಾಗೂ ಬೆಂಗಳೂರಿಗೆ ತೆರಳಲು ಬಸ್ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರು ಪರದಾಟ ನಡೆಸಿದರು. ಇನ್ನೇನು ಬಸ್ ಸೇವೆ ಆರಂಭ ಆಗಬಹುದು ಎಂಬ ನಿರೀಕ್ಷೆಯಲ್ಲಿ ಕೆಲವರಿದ್ದರು. ಆದರೆ, ಸಂಜೆಯ ತನಕವೂ ಬಸ್ ಸಂಚಾರ ಆರಂಭಗೊಳ್ಳಲಿಲ್ಲ. ಮಂಗಳೂರು ಹಾಗೂ ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಲು ಬಂದಿದ್ದವರು ಸಂಕಷ್ಟಕ್ಕೆ ಸಿಲುಕಿದ್ದು ಕಂಡುಬಂತು.