<p><strong>ಮಡಿಕೇರಿ:</strong> ಕೆಎಸ್ಆರ್ಟಿಸಿ ಬಸ್ ನೌಕರರ ಮುಷ್ಕರದ ಬಿಸಿ ಕೊಡಗು ಜಿಲ್ಲೆಗೂ ತಟ್ಟಿತು. ಆದರೆ, ನೂರಾರು ಖಾಸಗಿ ಬಸ್ಗಳು ಸಂಚರಿಸುವ ಮೂಲಕ ಪ್ರಯಾಣಿಕರ ಬವಣೆಯನ್ನು ತಪ್ಪಿಸಿದವು. ಆದಾಗ್ಯೂ, ಹೊರ ಜಿಲ್ಲೆಗೆ ಹೋಗುವ ಪ್ರಯಾಣಿಕರು ಸಕಾಲಕ್ಕೆ ಬಸ್ ಸಿಗದೇ ಪರದಾಡಿದರು.</p>.<p>ವಿದ್ಯಾರ್ಥಿಗಳು, ಕಚೇರಿಗಳಲ್ಲಿ ಕೆಲಸ ಮಾಡುವ ನೌಕರರು, ಶಿಕ್ಷಕರು ಸೇರಿದಂತೆ ಅನೇಕ ವಲಯದ ಜನರು ಮುಷ್ಕರದಿಂದ ಪರಿತಪಿಸಿದರು. ಸಕಾಲಕ್ಕೆ ಬಸ್ ಸಿಗದೇ ಹೈರಣಾದರು.</p>.<p>ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಗಳಿದ್ದರೂ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಇರಲಿಲ್ಲ. ಮುಷ್ಕರ ಎಂಬ ಕಾರಣಕ್ಕೆ ಬಹುತೇಕ ಮಂದಿ ತಮ್ಮ ಪ್ರಯಾಣವನ್ನು ಮುಂದೂಡಿದ್ದರು. ಅನಿವಾರ್ಯ ಕಾರಣಗಳಿಗಾಗಿ ಸಂಚರಿಸುವವರು ಮಾತ್ರವೇ ನಿಲ್ದಾಣಕ್ಕೆ ಬಂದಿದ್ದರು.</p>.<p>ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್ ಅವರು ಬೆಳಿಗ್ಗೆಯೇ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಪರಿಸ್ಥಿತಿ ಪರಾಮರ್ಶಿಸಿದರು. ಖಾಸಗಿ ಬಸ್ಗಳನ್ನು ನಿಯೋಜಿಸಿದರು.</p>.<p>ಖಾಸಗಿ ಬಸ್ಗಳು ಕೆಎಸ್ಆರ್ಟಿಸಿ ಬಸ್ನಿಲ್ದಾಣದೊಳಗೆ ಹಾಗೂ ಬಸ್ನಿಲ್ದಾಣದ ಮುಂಭಾಗ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೊರಟವು.</p>.<p>ಹೊರಜಿಲ್ಲೆಯ ಆಸ್ಪತ್ರೆಗಳಿಗೆ ಹೋಗಬೇಕಾದ ರೋಗಿಗಳು ಬಸ್ಗಳಿಲ್ಲದೇ ಪರದಾಡಿದರು. ವಿವಿಧ ಆರೋಗ್ಯ ಸಮಸ್ಯೆಗಳಿಗಾಗಿ ಮೈಸೂರು, ಮಂಗಳೂರಿಗೆ ಹೋಗಬೇಕಾದವರು ಬಸ್ಗಾಗಿ ಕಾಯುತ್ತಿದ್ದ ದೃಶ್ಯಗಳು ಕಂಡು ಬಂದವು.</p>.<p>ಮತ್ತೊಂದು ಕಡೆ, ಇಲ್ಲಿನ ಜಿಲ್ಲಾಸ್ಪತ್ರೆಗೂ ಹೊರ ಜಿಲ್ಲೆಗಳಿಂದ ಸಾಕಷ್ಟು ಮಂದಿ ರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಹುಣಸೂರು, ಪಿರಿಯಾಪಟ್ಟಣಗಳಿಂದಲೂ ಹೆಚ್ಚಿನ ಬಸ್ ಸಂಚಾರ ಇರದೇ ಅಲ್ಲಿನ ರೋಗಿಗಳು ಪರದಾಡಿದರು.</p>.<p>ಸಂಜೆಯ ವೇಳೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ಗಣನೀಯ ಏರಿಕೆ ಕಂಡು ಬಂತು. ಮುಂಜಾಗ್ರತಾ ಕ್ರಮವಾಗಿ ಕೆಎಸ್ಆರ್ಟಿಸಿ ಬಸ್ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೆಎಸ್ಆರ್ಟಿಸಿ ಬಸ್ ನೌಕರರ ಮುಷ್ಕರದ ಬಿಸಿ ಕೊಡಗು ಜಿಲ್ಲೆಗೂ ತಟ್ಟಿತು. ಆದರೆ, ನೂರಾರು ಖಾಸಗಿ ಬಸ್ಗಳು ಸಂಚರಿಸುವ ಮೂಲಕ ಪ್ರಯಾಣಿಕರ ಬವಣೆಯನ್ನು ತಪ್ಪಿಸಿದವು. ಆದಾಗ್ಯೂ, ಹೊರ ಜಿಲ್ಲೆಗೆ ಹೋಗುವ ಪ್ರಯಾಣಿಕರು ಸಕಾಲಕ್ಕೆ ಬಸ್ ಸಿಗದೇ ಪರದಾಡಿದರು.</p>.<p>ವಿದ್ಯಾರ್ಥಿಗಳು, ಕಚೇರಿಗಳಲ್ಲಿ ಕೆಲಸ ಮಾಡುವ ನೌಕರರು, ಶಿಕ್ಷಕರು ಸೇರಿದಂತೆ ಅನೇಕ ವಲಯದ ಜನರು ಮುಷ್ಕರದಿಂದ ಪರಿತಪಿಸಿದರು. ಸಕಾಲಕ್ಕೆ ಬಸ್ ಸಿಗದೇ ಹೈರಣಾದರು.</p>.<p>ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಗಳಿದ್ದರೂ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಇರಲಿಲ್ಲ. ಮುಷ್ಕರ ಎಂಬ ಕಾರಣಕ್ಕೆ ಬಹುತೇಕ ಮಂದಿ ತಮ್ಮ ಪ್ರಯಾಣವನ್ನು ಮುಂದೂಡಿದ್ದರು. ಅನಿವಾರ್ಯ ಕಾರಣಗಳಿಗಾಗಿ ಸಂಚರಿಸುವವರು ಮಾತ್ರವೇ ನಿಲ್ದಾಣಕ್ಕೆ ಬಂದಿದ್ದರು.</p>.<p>ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್ ಅವರು ಬೆಳಿಗ್ಗೆಯೇ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಪರಿಸ್ಥಿತಿ ಪರಾಮರ್ಶಿಸಿದರು. ಖಾಸಗಿ ಬಸ್ಗಳನ್ನು ನಿಯೋಜಿಸಿದರು.</p>.<p>ಖಾಸಗಿ ಬಸ್ಗಳು ಕೆಎಸ್ಆರ್ಟಿಸಿ ಬಸ್ನಿಲ್ದಾಣದೊಳಗೆ ಹಾಗೂ ಬಸ್ನಿಲ್ದಾಣದ ಮುಂಭಾಗ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೊರಟವು.</p>.<p>ಹೊರಜಿಲ್ಲೆಯ ಆಸ್ಪತ್ರೆಗಳಿಗೆ ಹೋಗಬೇಕಾದ ರೋಗಿಗಳು ಬಸ್ಗಳಿಲ್ಲದೇ ಪರದಾಡಿದರು. ವಿವಿಧ ಆರೋಗ್ಯ ಸಮಸ್ಯೆಗಳಿಗಾಗಿ ಮೈಸೂರು, ಮಂಗಳೂರಿಗೆ ಹೋಗಬೇಕಾದವರು ಬಸ್ಗಾಗಿ ಕಾಯುತ್ತಿದ್ದ ದೃಶ್ಯಗಳು ಕಂಡು ಬಂದವು.</p>.<p>ಮತ್ತೊಂದು ಕಡೆ, ಇಲ್ಲಿನ ಜಿಲ್ಲಾಸ್ಪತ್ರೆಗೂ ಹೊರ ಜಿಲ್ಲೆಗಳಿಂದ ಸಾಕಷ್ಟು ಮಂದಿ ರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಹುಣಸೂರು, ಪಿರಿಯಾಪಟ್ಟಣಗಳಿಂದಲೂ ಹೆಚ್ಚಿನ ಬಸ್ ಸಂಚಾರ ಇರದೇ ಅಲ್ಲಿನ ರೋಗಿಗಳು ಪರದಾಡಿದರು.</p>.<p>ಸಂಜೆಯ ವೇಳೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ಗಣನೀಯ ಏರಿಕೆ ಕಂಡು ಬಂತು. ಮುಂಜಾಗ್ರತಾ ಕ್ರಮವಾಗಿ ಕೆಎಸ್ಆರ್ಟಿಸಿ ಬಸ್ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>