<p><strong>ಕುಶಾಲನಗರ:</strong> ಸಮೀಪದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ರಾಷ್ಟ್ರೀಯ ಅಂತರಿಕ್ಷ ದಿನಾಚರಣೆ ಆಚರಿಸುವ ಮೂಲಕ ಚಂದ್ರಯಾನ ಯಶಸ್ವಿ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.</p>.<p>ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ‘ಚಂದ್ರಯಾನ-3ರ ಯಶಸ್ಸಿನ ಸ್ಮರಣಾರ್ಥ ಆಗಸ್ಟ್ 23ರಂದು ಬಾಹ್ಯಾಕಾಶ ದಿನ ಆಚರಿಸಲಾಗುತ್ತಿದೆ. ಇಂತಹ ದಿನಗಳು ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶದ ಕುರಿತು ವೈಜ್ಞಾನಿಕ ಸಂಶೋಧನೆಗಳನ್ನು ಮತ್ತು ಸಾಹಸಗಳನ್ನು ಕೈಗೊಳ್ಳಲು ಪ್ರೇರೇಪಣೆ ಸಿಗುತ್ತದೆ’ ಎಂದರು.</p>.<p>ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ ಮಾತನಾಡಿ, ‘ಬಾಹ್ಯಾಕಾಶ ಸಾಧನೆಗಳ ಪೈಕಿ ಚಂದ್ರಯಾನ-3 ಯೋಜನೆಗೆ ವಿಶೇಷ ಸ್ಥಾನವಿದೆ. ಕಳೆದ ವರ್ಷ ಆ.23ರಂದು ಚಂದ್ರಯಾನ-3 ಮಿಷನ್ನ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಕ್ಷಣದಲ್ಲಿ ಇತಿಹಾಸವೇ ಸೃಷ್ಟಿಯಾಯಿತು ಎಂದರು.</p>.<p>ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ. ದಯಾನಂದ ಪ್ರಕಾಶ್, ಬಿ.ಡಿ. ರಮ್ಯಾ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಸಮೀಪದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ರಾಷ್ಟ್ರೀಯ ಅಂತರಿಕ್ಷ ದಿನಾಚರಣೆ ಆಚರಿಸುವ ಮೂಲಕ ಚಂದ್ರಯಾನ ಯಶಸ್ವಿ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.</p>.<p>ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ‘ಚಂದ್ರಯಾನ-3ರ ಯಶಸ್ಸಿನ ಸ್ಮರಣಾರ್ಥ ಆಗಸ್ಟ್ 23ರಂದು ಬಾಹ್ಯಾಕಾಶ ದಿನ ಆಚರಿಸಲಾಗುತ್ತಿದೆ. ಇಂತಹ ದಿನಗಳು ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶದ ಕುರಿತು ವೈಜ್ಞಾನಿಕ ಸಂಶೋಧನೆಗಳನ್ನು ಮತ್ತು ಸಾಹಸಗಳನ್ನು ಕೈಗೊಳ್ಳಲು ಪ್ರೇರೇಪಣೆ ಸಿಗುತ್ತದೆ’ ಎಂದರು.</p>.<p>ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ ಮಾತನಾಡಿ, ‘ಬಾಹ್ಯಾಕಾಶ ಸಾಧನೆಗಳ ಪೈಕಿ ಚಂದ್ರಯಾನ-3 ಯೋಜನೆಗೆ ವಿಶೇಷ ಸ್ಥಾನವಿದೆ. ಕಳೆದ ವರ್ಷ ಆ.23ರಂದು ಚಂದ್ರಯಾನ-3 ಮಿಷನ್ನ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಕ್ಷಣದಲ್ಲಿ ಇತಿಹಾಸವೇ ಸೃಷ್ಟಿಯಾಯಿತು ಎಂದರು.</p>.<p>ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ. ದಯಾನಂದ ಪ್ರಕಾಶ್, ಬಿ.ಡಿ. ರಮ್ಯಾ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>