<p><strong>ಸೋಮವಾರಪೇಟೆ:</strong> ಇತಿಹಾಸ ಪ್ರಸಿದ್ಧ ಶಾಂತಳ್ಳಿಯ ಕುಮಾರಲಿಂಗೇಶ್ವರ ಸ್ವಾಮಿಯ ಜಾತ್ರೆ ಮತ್ತು 61ನೇ ಮಹಾರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ಶ್ರದ್ಧಾಭಕ್ತಿಯಿಂದ ನಡೆಯಿತು.</p>.<p>ಜಾತ್ರೆ ಪ್ರಯುಕ್ತ ದೇವಾಲಯದಲ್ಲಿ ಬೆಳಿಗ್ಗೆಯಿಂದಲೇ ವೇದಮೂರ್ತಿ ಶಿಬರೂರು ಗೋಪಾಲಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ದೇವಾಲಯದ ಅರ್ಚಕ ರಮೇಶ್ ಹೆಗಡೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.</p>.<p>ಮೆರೆ ಕೂತಿ ನಾಡು, ತೋಳುನಾಡು, ಪುಷ್ಫಗಿರಿ, ಯಡೂರು, ತಲ್ತರೆಶೆಟ್ಟಳ್ಳಿ ಗ್ರಾಮಸ್ಥರು ಸೇರಿದಂತೆ ಹೊರಜಿಲ್ಲೆಯ ನೂರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಶಾಂತಳ್ಳಿಯ ರಥಬೀದಿಯಲ್ಲಿ ಹೊರಟ ರಥವನ್ನು ಭಕ್ತಾದಿಗಳು ರಸ್ತೆ ಬದಿಯಲ್ಲಿ ನಿಂತು ಸ್ವಾಗತಿಸಿದರು.</p>.<p>ಈ ಸಂದರ್ಭ ದೇವಾಲಯ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಜಿ.ಎಸ್. ರಘುಕುಮಾರ್, ಖಜಾಂಚಿ ಡಿ.ಎಸ್. ಲಿಂಗರಾಜು, ಉಪಾಧ್ಯಕ್ಷ ಕೆ.ಟಿ.ಕೃಷ್ಣಪ್ಪ, ಧರ್ಮದರ್ಶಿ ಕೆ.ಎಸ್. ಚಂದ್ರಾವತಿ, ಸದಸ್ಯ ಎಸ್.ಎ. ಪ್ರತಾಪ್ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಇದ್ದರು.</p>.<p>ಜಾತ್ರೋತ್ಸವದ ಅಂಗವಾಗಿ ತಾಲ್ಲೂಕಿನ ಕೃಷಿ ಇಲಾಖೆ, ತೋಟಗಾರಿಕೆ ವತಿಯಿಂದ ರೈತರು ಬೆಳೆದ ಬೆಳೆಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಆರೋಗ್ಯ ಇಲಾಖೆಯಿಂದ ಪಲ್ಸ್ ಪೋಲಿಯೊ ಲಸಿಕೆ ಸೇರಿದಂತೆ ಸರ್ಕಾರದ ಯೋಜನೆಗಳ ಮಾಹಿತಿ ನೀಡಲಾಯಿತು.</p>.<p>ಕುಮಾರಲಿಂಗೇಶ್ವರ ಯುವಕ ಸಂಘದ ವತಿಯಿಂದ ಅಂತರ ಜಿಲ್ಲಾಮಟ್ಟದ ಪುರುಷರ ಮುಕ್ತ ಕಬಡ್ಡಿ ಮತ್ತು ವಾಲಿಬಾಲ್ ಹಾಗೂ ಮಹಿಳೆಯರಿಗೆ ಥ್ರೋಬಾಲ್ ಟೂರ್ನಿಯನ್ನು ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿತ್ತು.</p>.<p>ಜನವರಿ 17ರಂದು ಜಾತ್ರಾ ಸಮಾರೋಪ ಸಮಾರಂಭ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ ಸಿಂಹ, ಶಾಸಕ ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ ಅಧ್ಯಕ್ಷ ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಪಾಲ್ಗೊಳ್ಳಲಿದ್ದಾರೆ.</p>.<p class="Briefhead"><strong>ಜನಪದ ಕಲಾ ತಂಡಗಳ ಆಕರ್ಷಣೆ</strong></p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜನಪದೋತ್ಸವದ ಸುಗ್ಗಿ ಹುಗ್ಗಿಯ 15ಕ್ಕೂ ಹೆಚ್ಚಿನ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಜಾತ್ರೆಗೆ ಮೆರುಗು ನೀಡಿದವು.</p>.<p>ಬಂಟ್ವಾಳದ ಚಿಲಿಪಿಲಿ ಬಳಗದ ಗೊಂಬೆಯಾಟ, ಮಂಡ್ಯದ ನಂದಿ ಧ್ವಜ, ಮೈಸೂರಿನ ಪಟ ಕುಣಿತ, ಡೊಳ್ಳು ಕುಣಿತ, ನಂಜನಗೂಡಿನ ಹುಲಿವೇಷ, ರಾಮನಗರದ ಪೂಜಾ ಕುಣಿತ, ಪಿರಿಯಾಪಟ್ಟಣದ ಕಂಸಾಳೆ, ಕೀಲುಕುದುರೆ, ಚಿಕ್ಕಮಗಳೂರಿನ ಚಿಟ್ಟಿಮಾಳ, ಹಾವೇರಿಯ ಪುರವಂತಿಕೆ, ಕಡೂರಿನ ಗೊರವರ ಕುಣಿತದ ತಂಡಗಳು ಪಾಲ್ಗೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ:</strong> ಇತಿಹಾಸ ಪ್ರಸಿದ್ಧ ಶಾಂತಳ್ಳಿಯ ಕುಮಾರಲಿಂಗೇಶ್ವರ ಸ್ವಾಮಿಯ ಜಾತ್ರೆ ಮತ್ತು 61ನೇ ಮಹಾರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ಶ್ರದ್ಧಾಭಕ್ತಿಯಿಂದ ನಡೆಯಿತು.</p>.<p>ಜಾತ್ರೆ ಪ್ರಯುಕ್ತ ದೇವಾಲಯದಲ್ಲಿ ಬೆಳಿಗ್ಗೆಯಿಂದಲೇ ವೇದಮೂರ್ತಿ ಶಿಬರೂರು ಗೋಪಾಲಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ದೇವಾಲಯದ ಅರ್ಚಕ ರಮೇಶ್ ಹೆಗಡೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.</p>.<p>ಮೆರೆ ಕೂತಿ ನಾಡು, ತೋಳುನಾಡು, ಪುಷ್ಫಗಿರಿ, ಯಡೂರು, ತಲ್ತರೆಶೆಟ್ಟಳ್ಳಿ ಗ್ರಾಮಸ್ಥರು ಸೇರಿದಂತೆ ಹೊರಜಿಲ್ಲೆಯ ನೂರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಶಾಂತಳ್ಳಿಯ ರಥಬೀದಿಯಲ್ಲಿ ಹೊರಟ ರಥವನ್ನು ಭಕ್ತಾದಿಗಳು ರಸ್ತೆ ಬದಿಯಲ್ಲಿ ನಿಂತು ಸ್ವಾಗತಿಸಿದರು.</p>.<p>ಈ ಸಂದರ್ಭ ದೇವಾಲಯ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಜಿ.ಎಸ್. ರಘುಕುಮಾರ್, ಖಜಾಂಚಿ ಡಿ.ಎಸ್. ಲಿಂಗರಾಜು, ಉಪಾಧ್ಯಕ್ಷ ಕೆ.ಟಿ.ಕೃಷ್ಣಪ್ಪ, ಧರ್ಮದರ್ಶಿ ಕೆ.ಎಸ್. ಚಂದ್ರಾವತಿ, ಸದಸ್ಯ ಎಸ್.ಎ. ಪ್ರತಾಪ್ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಇದ್ದರು.</p>.<p>ಜಾತ್ರೋತ್ಸವದ ಅಂಗವಾಗಿ ತಾಲ್ಲೂಕಿನ ಕೃಷಿ ಇಲಾಖೆ, ತೋಟಗಾರಿಕೆ ವತಿಯಿಂದ ರೈತರು ಬೆಳೆದ ಬೆಳೆಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಆರೋಗ್ಯ ಇಲಾಖೆಯಿಂದ ಪಲ್ಸ್ ಪೋಲಿಯೊ ಲಸಿಕೆ ಸೇರಿದಂತೆ ಸರ್ಕಾರದ ಯೋಜನೆಗಳ ಮಾಹಿತಿ ನೀಡಲಾಯಿತು.</p>.<p>ಕುಮಾರಲಿಂಗೇಶ್ವರ ಯುವಕ ಸಂಘದ ವತಿಯಿಂದ ಅಂತರ ಜಿಲ್ಲಾಮಟ್ಟದ ಪುರುಷರ ಮುಕ್ತ ಕಬಡ್ಡಿ ಮತ್ತು ವಾಲಿಬಾಲ್ ಹಾಗೂ ಮಹಿಳೆಯರಿಗೆ ಥ್ರೋಬಾಲ್ ಟೂರ್ನಿಯನ್ನು ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿತ್ತು.</p>.<p>ಜನವರಿ 17ರಂದು ಜಾತ್ರಾ ಸಮಾರೋಪ ಸಮಾರಂಭ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ ಸಿಂಹ, ಶಾಸಕ ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ ಅಧ್ಯಕ್ಷ ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಪಾಲ್ಗೊಳ್ಳಲಿದ್ದಾರೆ.</p>.<p class="Briefhead"><strong>ಜನಪದ ಕಲಾ ತಂಡಗಳ ಆಕರ್ಷಣೆ</strong></p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜನಪದೋತ್ಸವದ ಸುಗ್ಗಿ ಹುಗ್ಗಿಯ 15ಕ್ಕೂ ಹೆಚ್ಚಿನ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಜಾತ್ರೆಗೆ ಮೆರುಗು ನೀಡಿದವು.</p>.<p>ಬಂಟ್ವಾಳದ ಚಿಲಿಪಿಲಿ ಬಳಗದ ಗೊಂಬೆಯಾಟ, ಮಂಡ್ಯದ ನಂದಿ ಧ್ವಜ, ಮೈಸೂರಿನ ಪಟ ಕುಣಿತ, ಡೊಳ್ಳು ಕುಣಿತ, ನಂಜನಗೂಡಿನ ಹುಲಿವೇಷ, ರಾಮನಗರದ ಪೂಜಾ ಕುಣಿತ, ಪಿರಿಯಾಪಟ್ಟಣದ ಕಂಸಾಳೆ, ಕೀಲುಕುದುರೆ, ಚಿಕ್ಕಮಗಳೂರಿನ ಚಿಟ್ಟಿಮಾಳ, ಹಾವೇರಿಯ ಪುರವಂತಿಕೆ, ಕಡೂರಿನ ಗೊರವರ ಕುಣಿತದ ತಂಡಗಳು ಪಾಲ್ಗೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>