ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಾಸಕರು ಬಸ್ಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಬೆಳಗ್ಗೆ 9.30 ಗಂಟೆಗೆ ಕುಶಾಲನಗರದಿಂದ ಹೊರಟು ಹಾರಂಗಿ ವರೆಗೆ ಸಂಚರಿಸಿ, ನಂತರ ಹಿಂತಿರುಗಲಿದೆ. ಇದರಿಂದ ಗುಮ್ಮನಕೊಲ್ಲಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮೂಕಾಂಬಿಕಾ ಪಿಯು ಕಾಲೇಜು, ಪ್ರೌಢಶಾಲೆ ಹಾಗೂ ಕ್ರೈಸ್ಟ್ ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಜೊತೆಗೆ ಅಧಿಕ ಹಣ ನೀಡಿ ಆಟೊ ರಿಕ್ಷಾದಲ್ಲಿ ಹೋಗುತ್ತಿದ್ದ ಹಾರಂಗಿ, ಅತ್ತೂರು, ಸುಂದರನಗರ, ಚಿಕ್ಕತ್ತೂರು ಭಾಗದ ಗ್ರಾಮಸ್ಥರಿಗೂ ಅನುಕೂಲವಾಗಿದೆ.