ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಶಾಲನಗರ: ಎಎಸ್ಐ ಸುರೇಶ್ ನಾಪತ್ತೆ

Last Updated 22 ಜನವರಿ 2022, 13:57 IST
ಅಕ್ಷರ ಗಾತ್ರ

ಕುಶಾಲನಗರ (ಕೊಡಗು ಜಿಲ್ಲೆ): ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯ ಎಎಸ್‌ಐ ಸುರೇಶ್ ಅವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

ಸುರೇಶ್ ಅವರು ಎರಡು ದಿನದಿಂದ ಕರ್ತವ್ಯಕ್ಕೆ ಹಾಜರಾಗಿಲ್ಲ. ಕುಶಾಲನಗರದ ಸಿದ್ದಯ್ಯ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮನೆಗೆ ಬೀಗ ಹಾಕಿ ತೆರಳಿದ್ದು, ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ. ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿರುವ ಪುತ್ರಿಯೊಂದಿಗೆ ವಿಡಿಯೊ ಕಾಲ್ ಮೂಲಕ‌ ಮಾತನಾಡಿದ್ದರು. ಶನಿವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದಾರೆ.

ಟವರ್ ಲೊಕೇಶನ್ ಪ್ರಕಾರ ಕುಶಾಲನಗರ ಸಮೀಪದ ಗುಮ್ಮನಕೊಲ್ಲಿಯಲ್ಲಿ‌ ಮೊಬೈಲ್ ಸ್ವಿಚ್ ಆಫ್ ಆಗಿರುವುದು ತಿಳಿದುಬಂದಿದೆ. ಸುರೇಶ್ ಅವರು ಹಾಸನ ಜಿಲ್ಲೆಯ ಕೊಣನೂರಿನ ನಿವಾಸಿ. ಇವರ ಪತ್ನಿ ಶೋಭಾ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT