ಸುರೇಶ್ ಅವರು ಎರಡು ದಿನದಿಂದ ಕರ್ತವ್ಯಕ್ಕೆ ಹಾಜರಾಗಿಲ್ಲ. ಕುಶಾಲನಗರದ ಸಿದ್ದಯ್ಯ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮನೆಗೆ ಬೀಗ ಹಾಕಿ ತೆರಳಿದ್ದು, ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ. ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿರುವ ಪುತ್ರಿಯೊಂದಿಗೆ ವಿಡಿಯೊ ಕಾಲ್ ಮೂಲಕ ಮಾತನಾಡಿದ್ದರು. ಶನಿವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದಾರೆ.