<p><strong>ಕುಶಾಲನಗರ:</strong> ಕ್ರೀಡಾಪಟುಗಳು ಸ್ಪರ್ಧಾ ಮನೋಭಾವ, ಆತ್ಮವಿಶ್ವಾಸದಿಂದ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಜತೆಗೆ ಸುರಕ್ಷತೆ, ತಂಡ ಮನೋಭಾವ ಹಾಗೂ ಪರಸ್ಪರ ಗೌರವ ಕಾಪಾಡಿಕೊಳ್ಳಬೇಕು ಎಂದು ಸೈನಿಕ ಶಾಲೆಯ ನಿವೃತ್ತ ಪ್ರಾಂಶುಪಾಲ ಕಮೋಡೋರ್ ಎಂ.ಟಿ. ರಮೇಶ್ ಸಲಹೆ ನೀಡಿದರು.</p>.<p>ಸಮೀಪದ ಕೂಡಿಗೆ ಕೃಷಿ ಫಾರಂ ಆವರಣದಲ್ಲಿರುವ ಕೊಡಗು ಸೈನಿಕ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ 2025-26ನೇ ಸಾಲಿನ ವಾರ್ಷಿಕ ಕ್ರೀಡಾಕೂಟದಲ್ಲಿ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಚಾಲನೆ ನೀಡಿದರು.</p>.<p>ಶಾಲೆಯು ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿನ ನಿರಂತರ ಸಾಧನೆ ಮಾಡಿದೆ. ಜೊತೆಗೆ ವಿದ್ಯಾರ್ಥಿಗಳು ಶಾಲೆಯ ಧ್ಯೇಯ ವಾಕ್ಯವಾದ ವೀರತೆ, ಧೃಡತೆ ಹಾಗೂ ಪ್ರಾಮಾಣಿಕತೆಯನ್ನು ಸದಾ ಪಾಲಿಸುವುದರೊಂದಿಗೆ, ಕ್ರೀಡಾ ಮೈದಾನದ ಒಳಗೂ ಹಾಗೂ ಹೊರಗೂ ಶಿಸ್ತಿನಿಂದ ನಡೆದುಕೊಳ್ಳಬೇಕು ಎಂದರು.</p>.<p>ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್, ಕ್ಯಾಪ್ಟನ್ ಯೋಗೇಶ, ಆಡಳಿತಾಧಿಕಾರಿ ವಿಂಗ್ ಕಮಾಂಡರ್, ಪ್ರಕಾಶ್ ರಾವ್, ಉಪ ಪ್ರಾಂಶುಪಾಲ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಷಾಜಿ ಹಾಗೂ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಕ್ರೀಡಾಪಟುಗಳು ಸ್ಪರ್ಧಾ ಮನೋಭಾವ, ಆತ್ಮವಿಶ್ವಾಸದಿಂದ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಜತೆಗೆ ಸುರಕ್ಷತೆ, ತಂಡ ಮನೋಭಾವ ಹಾಗೂ ಪರಸ್ಪರ ಗೌರವ ಕಾಪಾಡಿಕೊಳ್ಳಬೇಕು ಎಂದು ಸೈನಿಕ ಶಾಲೆಯ ನಿವೃತ್ತ ಪ್ರಾಂಶುಪಾಲ ಕಮೋಡೋರ್ ಎಂ.ಟಿ. ರಮೇಶ್ ಸಲಹೆ ನೀಡಿದರು.</p>.<p>ಸಮೀಪದ ಕೂಡಿಗೆ ಕೃಷಿ ಫಾರಂ ಆವರಣದಲ್ಲಿರುವ ಕೊಡಗು ಸೈನಿಕ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ 2025-26ನೇ ಸಾಲಿನ ವಾರ್ಷಿಕ ಕ್ರೀಡಾಕೂಟದಲ್ಲಿ ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಚಾಲನೆ ನೀಡಿದರು.</p>.<p>ಶಾಲೆಯು ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿನ ನಿರಂತರ ಸಾಧನೆ ಮಾಡಿದೆ. ಜೊತೆಗೆ ವಿದ್ಯಾರ್ಥಿಗಳು ಶಾಲೆಯ ಧ್ಯೇಯ ವಾಕ್ಯವಾದ ವೀರತೆ, ಧೃಡತೆ ಹಾಗೂ ಪ್ರಾಮಾಣಿಕತೆಯನ್ನು ಸದಾ ಪಾಲಿಸುವುದರೊಂದಿಗೆ, ಕ್ರೀಡಾ ಮೈದಾನದ ಒಳಗೂ ಹಾಗೂ ಹೊರಗೂ ಶಿಸ್ತಿನಿಂದ ನಡೆದುಕೊಳ್ಳಬೇಕು ಎಂದರು.</p>.<p>ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್, ಕ್ಯಾಪ್ಟನ್ ಯೋಗೇಶ, ಆಡಳಿತಾಧಿಕಾರಿ ವಿಂಗ್ ಕಮಾಂಡರ್, ಪ್ರಕಾಶ್ ರಾವ್, ಉಪ ಪ್ರಾಂಶುಪಾಲ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಷಾಜಿ ಹಾಗೂ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>