<p><strong>ಕುಶಾಲನಗರ:</strong> ಆಶ್ಲೇಷ ಮಳೆಯ ರುದ್ರನರ್ತನಕ್ಕೆ ಕುಶಾಲನಗರ ಪಟ್ಟಣ ಸಂಪೂರ್ಣ ನಲುಗಿ ಹೋಗಿದೆ. ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿಯ ಹೆಚ್ಚುವರಿ ನೀರು ತಗ್ಗುಪ್ರದೇಶಗಳಿಗೆ ನುಗ್ಗಿದ್ದು, ಪಟ್ಟಣ ಭಾಗಶಃ ಮುಳುಗಡೆಗೊಂಡಿದೆ.</p>.<p>ನದಿ ಅಂಚಿನಲ್ಲಿರುವ ಸಾಯಿಬಾಬಾ ಲೇಔಟ್, ಕುವೆಂಪು ಬಡಾವಣೆ, ರಸಲ್ ಲೇಔಟ್, ಸೀಗಾರಮ್ಮ ಬಡಾವಣೆ, ಇಂದಿರಾ ಬಡಾವಣೆ, ದಂಡಿನ ಪೇಟೆ, ವಿವೇಕಾನಂದ ಬಡಾವಣೆ, ಯೋಗಾ ನಂದ ಬಡಾವಣೆ, ಆದಿ ಶಂಕರಾಚಾರ್ಯ ಬಡಾವಣೆಗಳ ನೂರಾರು ಮನೆಗಳು ಮುಳುಗಡೆಯಾಗಿವೆ.</p>.<p>ಗಂಧದಕೋಟೆಯಲ್ಲಿ ಜನವಸತಿ ಪ್ರದೇಶಗಳು, ಹೊಲ–ಗದ್ದೆಗಳು ಜಲಾವೃತಗೊಂಡಿವೆ. ಗೊಂದಿ ಬಸವನ ಹಳ್ಳಿ ರೊಂಡೆ ಕೆರೆ ತುಂಬಿದ್ದು, ಹೆಚ್ಚುವರಿ ನೀರು ಗಂಧದಕೋಟೆಗೆ ನುಗ್ಗುತ್ತಿದೆ. ಇದರಿಂದ ತಾವರೆಕೆರೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳು ನೀರಿನಿಂದ ಆವೃತವಾಗಿವೆ. ಕೆಲ ಮನೆಗಳಿಗೆ ನೀರಿನೊಂದಿಗೆ ಹಾವುಗಳು ಬರುತ್ತಿದ್ದು, ಜನರು ಆತಂಕಗೊಂಡಿದ್ದಾರೆ.</p>.<p>ಸಾಯಿ ಬಡಾವಣೆಯಲ್ಲಿ 15ಕ್ಕೂ ಮನೆಗಳು, ಕುವೆಂಪು ಬಡಾವಣೆ 30, ಇಂದಿರಾ ಬಡಾವಣೆಯಲ್ಲಿ 25 ಮನೆಗಳು ಮುಳುಗಿವೆ. ಸಾಯಿಬಾಬಾ ಮತ್ತು ಕುವೆಂಪು ಬಡಾವಣೆಗಳ ನಿವಾಸಿಗಳನ್ನು ನಾಗರಿಕ ರಕ್ಷಣಾ ಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.</p>.<p>ಗಂಧದಕೋಟೆ ಬಳಿ ರಾಷ್ಟ್ರೀಯ ಹೆದ್ದಾರಿಯ ಬಿ.ಎಂ. ರಸ್ತೆ ಮೇಲೆ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಕುಶಾಲನಗರದ ಮಾರ್ಗವಾಗಿ ಮಡಿಕೇರಿ ಹಾಗೂ ಮಂಗಳೂರು ಕಡೆಗೆ ಹೋಗುವ ವಾಹನಗಳನ್ನು ಬೈಚನಹಳ್ಳಿ ನಿರ್ಬಂಧಿಸಲಾಗುತ್ತಿದೆ. ಇಲ್ಲಿ ರಸ್ತೆ ಮೇಲೆ 4ರಿಂದ 5 ಅಡಿಗಳಷ್ಟು ನೀರು ಹರಿಯುತ್ತಿದೆ. ರಸ್ತೆ ಮಧ್ಯದಲ್ಲಿ ಸಿಲುಕಿದ್ದ ಬಸ್ನ ಪ್ರಯಾಣಿಕರನ್ನು ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ.</p>.<p>ಕುಶಾಲನಗರದಿಂದ ಸಿದ್ದಾಪುರ, ವಿರಾಜಪೇಟೆಗೆ ಹೋಗುವ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ವಿರಾಜಪೇಟೆ, ಗೋಣಿಕೊಪ್ಪಲು, ಮಾಕುಟ್ಟ ಮತ್ತಿತರ ಕಡೆಗಳಿಗೆ ಹೋಗಲು ಸಾಧ್ಯವಾಗದೆ ಪ್ರಯಾಣಿಕರು ಪರದಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಆಶ್ಲೇಷ ಮಳೆಯ ರುದ್ರನರ್ತನಕ್ಕೆ ಕುಶಾಲನಗರ ಪಟ್ಟಣ ಸಂಪೂರ್ಣ ನಲುಗಿ ಹೋಗಿದೆ. ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿಯ ಹೆಚ್ಚುವರಿ ನೀರು ತಗ್ಗುಪ್ರದೇಶಗಳಿಗೆ ನುಗ್ಗಿದ್ದು, ಪಟ್ಟಣ ಭಾಗಶಃ ಮುಳುಗಡೆಗೊಂಡಿದೆ.</p>.<p>ನದಿ ಅಂಚಿನಲ್ಲಿರುವ ಸಾಯಿಬಾಬಾ ಲೇಔಟ್, ಕುವೆಂಪು ಬಡಾವಣೆ, ರಸಲ್ ಲೇಔಟ್, ಸೀಗಾರಮ್ಮ ಬಡಾವಣೆ, ಇಂದಿರಾ ಬಡಾವಣೆ, ದಂಡಿನ ಪೇಟೆ, ವಿವೇಕಾನಂದ ಬಡಾವಣೆ, ಯೋಗಾ ನಂದ ಬಡಾವಣೆ, ಆದಿ ಶಂಕರಾಚಾರ್ಯ ಬಡಾವಣೆಗಳ ನೂರಾರು ಮನೆಗಳು ಮುಳುಗಡೆಯಾಗಿವೆ.</p>.<p>ಗಂಧದಕೋಟೆಯಲ್ಲಿ ಜನವಸತಿ ಪ್ರದೇಶಗಳು, ಹೊಲ–ಗದ್ದೆಗಳು ಜಲಾವೃತಗೊಂಡಿವೆ. ಗೊಂದಿ ಬಸವನ ಹಳ್ಳಿ ರೊಂಡೆ ಕೆರೆ ತುಂಬಿದ್ದು, ಹೆಚ್ಚುವರಿ ನೀರು ಗಂಧದಕೋಟೆಗೆ ನುಗ್ಗುತ್ತಿದೆ. ಇದರಿಂದ ತಾವರೆಕೆರೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳು ನೀರಿನಿಂದ ಆವೃತವಾಗಿವೆ. ಕೆಲ ಮನೆಗಳಿಗೆ ನೀರಿನೊಂದಿಗೆ ಹಾವುಗಳು ಬರುತ್ತಿದ್ದು, ಜನರು ಆತಂಕಗೊಂಡಿದ್ದಾರೆ.</p>.<p>ಸಾಯಿ ಬಡಾವಣೆಯಲ್ಲಿ 15ಕ್ಕೂ ಮನೆಗಳು, ಕುವೆಂಪು ಬಡಾವಣೆ 30, ಇಂದಿರಾ ಬಡಾವಣೆಯಲ್ಲಿ 25 ಮನೆಗಳು ಮುಳುಗಿವೆ. ಸಾಯಿಬಾಬಾ ಮತ್ತು ಕುವೆಂಪು ಬಡಾವಣೆಗಳ ನಿವಾಸಿಗಳನ್ನು ನಾಗರಿಕ ರಕ್ಷಣಾ ಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.</p>.<p>ಗಂಧದಕೋಟೆ ಬಳಿ ರಾಷ್ಟ್ರೀಯ ಹೆದ್ದಾರಿಯ ಬಿ.ಎಂ. ರಸ್ತೆ ಮೇಲೆ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಕುಶಾಲನಗರದ ಮಾರ್ಗವಾಗಿ ಮಡಿಕೇರಿ ಹಾಗೂ ಮಂಗಳೂರು ಕಡೆಗೆ ಹೋಗುವ ವಾಹನಗಳನ್ನು ಬೈಚನಹಳ್ಳಿ ನಿರ್ಬಂಧಿಸಲಾಗುತ್ತಿದೆ. ಇಲ್ಲಿ ರಸ್ತೆ ಮೇಲೆ 4ರಿಂದ 5 ಅಡಿಗಳಷ್ಟು ನೀರು ಹರಿಯುತ್ತಿದೆ. ರಸ್ತೆ ಮಧ್ಯದಲ್ಲಿ ಸಿಲುಕಿದ್ದ ಬಸ್ನ ಪ್ರಯಾಣಿಕರನ್ನು ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ.</p>.<p>ಕುಶಾಲನಗರದಿಂದ ಸಿದ್ದಾಪುರ, ವಿರಾಜಪೇಟೆಗೆ ಹೋಗುವ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ವಿರಾಜಪೇಟೆ, ಗೋಣಿಕೊಪ್ಪಲು, ಮಾಕುಟ್ಟ ಮತ್ತಿತರ ಕಡೆಗಳಿಗೆ ಹೋಗಲು ಸಾಧ್ಯವಾಗದೆ ಪ್ರಯಾಣಿಕರು ಪರದಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>