<p><strong>ಕುಶಾಲನಗರ:</strong> ಉತ್ತರ ಕೊಡಗಿನ ಚಿಕ್ಕಅಳುವಾರ ಗ್ರಾಮದಲ್ಲಿ ಅಳುವಾರದಮ್ಮ ದೇವಾಲಯ ಸಮಿತಿಯಿಂದ ಏರ್ಪಡಿಸಿದ್ದ ಗ್ರಾಮ ದೇವತೆ ಅಳುವಾರದಮ್ಮ (ಚೌಡೇಶ್ವರಿ) ದೇವಿಯ ವಾರ್ಷಿಕ ಪೂಜಾ ಮಹೋತ್ಸವವು ಶುಕ್ರವಾರ ಶ್ರದ್ಧಾಭಕ್ತಿಯಿಂದ ನೆರವೇರಿತು.</p>.<p>ಬೆಳಿಗ್ಗೆ ದೇವರ ವಿಗ್ರಹಗಳಿಗೆ ಗಂಗಾಸ್ನಾನ ಹಾಗೂ ಗಂಗಾಪೂಜೆ ನೆರವೇರಿಸಲಾಯಿತು. ಅರ್ಚಕ ಜೆ.ಚಂದ್ರ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಮಹಾಮಂಗಳಾರತಿ ಬಳಿಕ ದೇವರ ವಿಗ್ರಹದೊಂದಿಗೆ ಪೂರ್ಣಕುಂಭ ಕಳಶ ಹೊತ್ತ ಭಕ್ತಾದಿಗಳು ವಾದ್ಯಗೋಷ್ಠಿಯೊಂದಿಗೆ ದೇವಸ್ಥಾನದವರೆಗೆ ಮೆರವಣಿಗೆ ನಡೆಸಿದರು.</p>.<p>ಅಳುವಾರದಮ್ಮದೇವಿ ಬನದಲ್ಲಿ ದೇವಿಯ ವಿಗ್ರಹ ಮತ್ತು ಕಳಶ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ವಿವಿಧ ಪುಷ್ಪಗಳಿಂದ ದೇವಿಯ ವಿಗ್ರಹವನ್ನು ಶೃಂಗರಿಸಲಾಗಿತ್ತು. ಗ್ರಾಮದ ಜನತೆ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಂದ ಬಂದಿದ್ದ ಭಕ್ತರು ಹಬ್ಬದಲ್ಲಿ ಪಾಲ್ಗೊಂಡು ದೇವಿ ದರ್ಶನ ಪಡೆದರು.</p>.<p>ವಾರ್ಷಿಕ ಪೂಜಾ ಮಹೋತ್ಸವದ ಅಂಗವಾಗಿ ದೇವಸ್ಥಾನ ಸೇರಿದಂತೆ ಗ್ರಾಮವನ್ನು ವಿದ್ಯುತ್ ದೀಪ ಹಾಗೂ ಹಸಿರು ತೋರುಣಗಳಿಂದ ಸಿಂಗರಿಸಲಾಗಿತ್ತು. ಮಹಾಪೂಜೆಯ ನಂತರ ಅನ್ನಸಂತರ್ಪಣೆ ನೆರವೇರಿಸಲಾಯಿತು.</p>.<p>ದೇವರ ಉತ್ಸವಗಳು ಪೂಜಾ ಕೈಂಕರ್ಯಗಳು ದೇವಾಲಯ ಸಮಿತಿ ಅಧ್ಯಕ್ಷ ಎ.ಎನ್.ರಮೇಶ್ ಹಾಗೂ ಕಾರ್ಯದರ್ಶಿ ಸುನೀಲ್ ನೇತೃತ್ವದಲ್ಲಿ ನಡೆದವು. ವಿದ್ಯುತ್ ಅಲಂಕೃತ ಮಂಟಪದಲ್ಲಿ ರಾತ್ರಿ ದೇವಿ ಉತ್ಸವ ಮೆರವಣಿಗೆ ನಡೆಯಿತು.</p>.<p>ಸಮಿತಿ ಗೌರವಾಧ್ಯಕ್ಷ ಟಿ.ಆರ್.ಚಂದ್ರ, ಗೌರವ ಸಲಹೆಗಾರ ಕಾಳಶೆಟ್ಟಿ, ಶಿವಪ್ಪಯ್ಯ, ಉಪಾಧ್ಯಕ್ಷ ಎಚ್.ಎಂ.ಸಂತೋಷ್, ಕಾರ್ಯದರ್ಶಿ ಎ.ಪಿ.ಸುನಿಲ್, ಸಹಕಾರ್ಯದರ್ಶಿ ಎ.ಜಿ.ಸುನಿಲ್, ಖಜಾಂಚಿ ಎ.ಜಿ.ಜಗದೀಶ್, ನಿರ್ದೇಶಕರಾದ ಗುರುಲಿಂಗಪ್ಪ, ಮಾಣಿಚ್ಚ, ತ್ರಿಲೋಕ, ಶಿವರಾಜು, ಹರೀಶ್, ಹಾರುವಯ್ಯ, ಸ್ವಾಮಿ, ರಾಜೇಶ್, ನಾಗೇಶ್, ದೇವಾಲಯದ ಉಸ್ತುವಾರಿ ಶಿವಾನಂದ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಉತ್ತರ ಕೊಡಗಿನ ಚಿಕ್ಕಅಳುವಾರ ಗ್ರಾಮದಲ್ಲಿ ಅಳುವಾರದಮ್ಮ ದೇವಾಲಯ ಸಮಿತಿಯಿಂದ ಏರ್ಪಡಿಸಿದ್ದ ಗ್ರಾಮ ದೇವತೆ ಅಳುವಾರದಮ್ಮ (ಚೌಡೇಶ್ವರಿ) ದೇವಿಯ ವಾರ್ಷಿಕ ಪೂಜಾ ಮಹೋತ್ಸವವು ಶುಕ್ರವಾರ ಶ್ರದ್ಧಾಭಕ್ತಿಯಿಂದ ನೆರವೇರಿತು.</p>.<p>ಬೆಳಿಗ್ಗೆ ದೇವರ ವಿಗ್ರಹಗಳಿಗೆ ಗಂಗಾಸ್ನಾನ ಹಾಗೂ ಗಂಗಾಪೂಜೆ ನೆರವೇರಿಸಲಾಯಿತು. ಅರ್ಚಕ ಜೆ.ಚಂದ್ರ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಮಹಾಮಂಗಳಾರತಿ ಬಳಿಕ ದೇವರ ವಿಗ್ರಹದೊಂದಿಗೆ ಪೂರ್ಣಕುಂಭ ಕಳಶ ಹೊತ್ತ ಭಕ್ತಾದಿಗಳು ವಾದ್ಯಗೋಷ್ಠಿಯೊಂದಿಗೆ ದೇವಸ್ಥಾನದವರೆಗೆ ಮೆರವಣಿಗೆ ನಡೆಸಿದರು.</p>.<p>ಅಳುವಾರದಮ್ಮದೇವಿ ಬನದಲ್ಲಿ ದೇವಿಯ ವಿಗ್ರಹ ಮತ್ತು ಕಳಶ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ವಿವಿಧ ಪುಷ್ಪಗಳಿಂದ ದೇವಿಯ ವಿಗ್ರಹವನ್ನು ಶೃಂಗರಿಸಲಾಗಿತ್ತು. ಗ್ರಾಮದ ಜನತೆ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಂದ ಬಂದಿದ್ದ ಭಕ್ತರು ಹಬ್ಬದಲ್ಲಿ ಪಾಲ್ಗೊಂಡು ದೇವಿ ದರ್ಶನ ಪಡೆದರು.</p>.<p>ವಾರ್ಷಿಕ ಪೂಜಾ ಮಹೋತ್ಸವದ ಅಂಗವಾಗಿ ದೇವಸ್ಥಾನ ಸೇರಿದಂತೆ ಗ್ರಾಮವನ್ನು ವಿದ್ಯುತ್ ದೀಪ ಹಾಗೂ ಹಸಿರು ತೋರುಣಗಳಿಂದ ಸಿಂಗರಿಸಲಾಗಿತ್ತು. ಮಹಾಪೂಜೆಯ ನಂತರ ಅನ್ನಸಂತರ್ಪಣೆ ನೆರವೇರಿಸಲಾಯಿತು.</p>.<p>ದೇವರ ಉತ್ಸವಗಳು ಪೂಜಾ ಕೈಂಕರ್ಯಗಳು ದೇವಾಲಯ ಸಮಿತಿ ಅಧ್ಯಕ್ಷ ಎ.ಎನ್.ರಮೇಶ್ ಹಾಗೂ ಕಾರ್ಯದರ್ಶಿ ಸುನೀಲ್ ನೇತೃತ್ವದಲ್ಲಿ ನಡೆದವು. ವಿದ್ಯುತ್ ಅಲಂಕೃತ ಮಂಟಪದಲ್ಲಿ ರಾತ್ರಿ ದೇವಿ ಉತ್ಸವ ಮೆರವಣಿಗೆ ನಡೆಯಿತು.</p>.<p>ಸಮಿತಿ ಗೌರವಾಧ್ಯಕ್ಷ ಟಿ.ಆರ್.ಚಂದ್ರ, ಗೌರವ ಸಲಹೆಗಾರ ಕಾಳಶೆಟ್ಟಿ, ಶಿವಪ್ಪಯ್ಯ, ಉಪಾಧ್ಯಕ್ಷ ಎಚ್.ಎಂ.ಸಂತೋಷ್, ಕಾರ್ಯದರ್ಶಿ ಎ.ಪಿ.ಸುನಿಲ್, ಸಹಕಾರ್ಯದರ್ಶಿ ಎ.ಜಿ.ಸುನಿಲ್, ಖಜಾಂಚಿ ಎ.ಜಿ.ಜಗದೀಶ್, ನಿರ್ದೇಶಕರಾದ ಗುರುಲಿಂಗಪ್ಪ, ಮಾಣಿಚ್ಚ, ತ್ರಿಲೋಕ, ಶಿವರಾಜು, ಹರೀಶ್, ಹಾರುವಯ್ಯ, ಸ್ವಾಮಿ, ರಾಜೇಶ್, ನಾಗೇಶ್, ದೇವಾಲಯದ ಉಸ್ತುವಾರಿ ಶಿವಾನಂದ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>