<p>ಕುಶಾಲನಗರ: ಸಹಕಾರ ಸಂಘಗಳ ಮೂಲಕ ಆರ್ಥಿಕವಾಗಿ ಸ್ವಾವಲಂಬನೆ ಹೊಂದಲು ಸಾಧ್ಯ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದರು.</p>.<p>ಇಲ್ಲಿನ ಕಲಾ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ನೂತನ ಸಂಘಕ್ಕೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರೈತರು, ವ್ಯಾಪಾರಿಗಳು ಹಾಗೂ ಉದ್ಯಮಿಗಳ ಪಾಲಿಗೆ ಸಹಕಾರ ಸಂಘಗಳು ವರದಾನವಾಗಿವೆ. ಹಿಂದೆ ಸಾಲ ಸೌಲಭ್ಯ ಪಡೆಯಲು ರಾಷ್ಟ್ರೀಕೃತ ಬ್ಯಾಂಕುಗಳನ್ನು ಅವಲಂಬಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಇತ್ತೀಚಿನ ದಶಕಗಳಲ್ಲಿ ಸಹಕಾರ ಕ್ಷೇತ್ರ ವಿಶಾಲವಾಗಿ ಬೆಳವಣಿಗೆ ಹೊಂದಿದ್ದು, ಸಣ್ಣ ಸಣ್ಣ ವರ್ತಕರು, ರೈತರು ಹಾಗೂ ಇನ್ನಿತರೆ ಸಾರ್ವಜನಿಕರು ಆರ್ಥಿಕ ಸ್ವಾವಲಂಬನೆಗೆ ಹೆಚ್ಚು ಅನುಕೂಲ ಉಂಟಾಗಿದೆ ಎಂದು ಅವರು ಹೇಳಿದರು.</p>.<p>ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷ ಕೆ.ಎನ್. ಅಶೋಕ್ ಮಾತನಾಡಿ, ಕೊಡಗು ಜಿಲ್ಲಾ ವ್ಯಾಪ್ತಿಗೆ ಸಂಬಂಧಿಸಿ ವಾಲ್ಮೀಕಿ ಪತ್ತಿನ ಸಹಕಾರ ಸಂಘವನ್ನು ಆರಂಭಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ವಾಲ್ಮೀಕಿ ನಾಯಕ ಜನಾಂಗ ಬಾಂಧವರಿದ್ದು ಸಹಕಾರ ಸಂಘದ ಸದಸ್ಯತ್ವವನ್ನು ಹೆಚ್ಚಾಗಿ ಹೊಂದುವ ಮೂಲಕ ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದರು.</p>.<p>ಸಂಘದಲ್ಲಿ ಆರಂಭಿಕವಾಗಿ 400 ಮಂದಿ ಸದಸ್ಯರು ಸೇರ್ಪಡೆಯಾಗಿದ್ದಾರೆ. ಸಂಘದ ಮೂಲಕ ಸಾಲ ಸೌಲಭ್ಯಗಳನ್ನು ಪಡೆದುಕೊಂಡು ಸಕಾಲದಲ್ಲಿ ಮರುಪಾವತಿಸುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ಅವರು ಸಲಹೆ ನೀಡಿದರು.</p>.<p>ಮೈಸೂರು ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ದೇವರಾಜು ಟಿ. ಕಾಟೂರ ಮಾತನಾಡಿದರು. ಸಂಘದ ಉಪಾಧ್ಯಕ್ಷ ಪಿ.ಟಿ.ಸುರೇಶ್, ನಿರ್ದೇಶಕರಾದ ಎಂ.ಜಿ.ಕರಿಯಪ್ಪ, ಸಿದ್ದಲಿಂಗಯ್ಯ, ವೈ.ಟಿ.ಪರಮೇಶ್, ಚಂದನ ಕುಮಾರ್, ಆರ್. ಕೃಷ್ಣ, ಶ್ರೀನಿವಾಸ್ ಕುಮಾರ್, ಎಸ್.ಎಸ್. ಮಂಜುನಾಥ್, ಲಕ್ಷ್ಮಣ ನಾಯಕ, ಪಿ.ಪಿ. ಸುರೇಶ್, ನಾರಾಯಣಸ್ವಾಮಿ, ಮುತ್ತುರಾಜು, ಚೈತ್ರ, ಸೌಂದರ್ಯ, ಶೋಭಾ, ಮಮತಾ, ಕೂಡಿಗೆ ಡಯಟ್ ಉಪನ್ಯಾಸಕಿ ಬಿ.ಎನ್.ಪುಷ್ಪ ಪಾಲ್ಗೊಂಡಿದ್ದರು.</p>.<p>ಕಲಾವಿದ ವಿಜಯಕುಮಾರ್ ತಂಡ ಪ್ರಾರ್ಥಿಸಿ, ಶಿಕ್ಷಕ ಬಿ.ಎನ್. ವಸಂತ ಕುಮಾರ್ ನಿರೂಪಿಸಿ, ಸಂಘದ ನಿರ್ದೇಶಕ ಚಂದನ ಕುಮಾರ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-51-680888239</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಶಾಲನಗರ: ಸಹಕಾರ ಸಂಘಗಳ ಮೂಲಕ ಆರ್ಥಿಕವಾಗಿ ಸ್ವಾವಲಂಬನೆ ಹೊಂದಲು ಸಾಧ್ಯ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದರು.</p>.<p>ಇಲ್ಲಿನ ಕಲಾ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ನೂತನ ಸಂಘಕ್ಕೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರೈತರು, ವ್ಯಾಪಾರಿಗಳು ಹಾಗೂ ಉದ್ಯಮಿಗಳ ಪಾಲಿಗೆ ಸಹಕಾರ ಸಂಘಗಳು ವರದಾನವಾಗಿವೆ. ಹಿಂದೆ ಸಾಲ ಸೌಲಭ್ಯ ಪಡೆಯಲು ರಾಷ್ಟ್ರೀಕೃತ ಬ್ಯಾಂಕುಗಳನ್ನು ಅವಲಂಬಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಇತ್ತೀಚಿನ ದಶಕಗಳಲ್ಲಿ ಸಹಕಾರ ಕ್ಷೇತ್ರ ವಿಶಾಲವಾಗಿ ಬೆಳವಣಿಗೆ ಹೊಂದಿದ್ದು, ಸಣ್ಣ ಸಣ್ಣ ವರ್ತಕರು, ರೈತರು ಹಾಗೂ ಇನ್ನಿತರೆ ಸಾರ್ವಜನಿಕರು ಆರ್ಥಿಕ ಸ್ವಾವಲಂಬನೆಗೆ ಹೆಚ್ಚು ಅನುಕೂಲ ಉಂಟಾಗಿದೆ ಎಂದು ಅವರು ಹೇಳಿದರು.</p>.<p>ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷ ಕೆ.ಎನ್. ಅಶೋಕ್ ಮಾತನಾಡಿ, ಕೊಡಗು ಜಿಲ್ಲಾ ವ್ಯಾಪ್ತಿಗೆ ಸಂಬಂಧಿಸಿ ವಾಲ್ಮೀಕಿ ಪತ್ತಿನ ಸಹಕಾರ ಸಂಘವನ್ನು ಆರಂಭಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ವಾಲ್ಮೀಕಿ ನಾಯಕ ಜನಾಂಗ ಬಾಂಧವರಿದ್ದು ಸಹಕಾರ ಸಂಘದ ಸದಸ್ಯತ್ವವನ್ನು ಹೆಚ್ಚಾಗಿ ಹೊಂದುವ ಮೂಲಕ ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದರು.</p>.<p>ಸಂಘದಲ್ಲಿ ಆರಂಭಿಕವಾಗಿ 400 ಮಂದಿ ಸದಸ್ಯರು ಸೇರ್ಪಡೆಯಾಗಿದ್ದಾರೆ. ಸಂಘದ ಮೂಲಕ ಸಾಲ ಸೌಲಭ್ಯಗಳನ್ನು ಪಡೆದುಕೊಂಡು ಸಕಾಲದಲ್ಲಿ ಮರುಪಾವತಿಸುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ಅವರು ಸಲಹೆ ನೀಡಿದರು.</p>.<p>ಮೈಸೂರು ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ದೇವರಾಜು ಟಿ. ಕಾಟೂರ ಮಾತನಾಡಿದರು. ಸಂಘದ ಉಪಾಧ್ಯಕ್ಷ ಪಿ.ಟಿ.ಸುರೇಶ್, ನಿರ್ದೇಶಕರಾದ ಎಂ.ಜಿ.ಕರಿಯಪ್ಪ, ಸಿದ್ದಲಿಂಗಯ್ಯ, ವೈ.ಟಿ.ಪರಮೇಶ್, ಚಂದನ ಕುಮಾರ್, ಆರ್. ಕೃಷ್ಣ, ಶ್ರೀನಿವಾಸ್ ಕುಮಾರ್, ಎಸ್.ಎಸ್. ಮಂಜುನಾಥ್, ಲಕ್ಷ್ಮಣ ನಾಯಕ, ಪಿ.ಪಿ. ಸುರೇಶ್, ನಾರಾಯಣಸ್ವಾಮಿ, ಮುತ್ತುರಾಜು, ಚೈತ್ರ, ಸೌಂದರ್ಯ, ಶೋಭಾ, ಮಮತಾ, ಕೂಡಿಗೆ ಡಯಟ್ ಉಪನ್ಯಾಸಕಿ ಬಿ.ಎನ್.ಪುಷ್ಪ ಪಾಲ್ಗೊಂಡಿದ್ದರು.</p>.<p>ಕಲಾವಿದ ವಿಜಯಕುಮಾರ್ ತಂಡ ಪ್ರಾರ್ಥಿಸಿ, ಶಿಕ್ಷಕ ಬಿ.ಎನ್. ವಸಂತ ಕುಮಾರ್ ನಿರೂಪಿಸಿ, ಸಂಘದ ನಿರ್ದೇಶಕ ಚಂದನ ಕುಮಾರ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-51-680888239</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>