<p><strong>ಕುಶಾಲನಗರ:</strong> ಪಟ್ಟಣದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ 2024-25ನೇ ಸಾಲಿನ ಅಂತಿಮ ವರ್ಷದ ಫಲಿತಾಂಶ ಪ್ರಕಟಗೊಂಡಿದ್ದು, ನಾಲ್ಕು ವಿಭಾಗದಲ್ಲಿಯೂ ಶೇ 100 ಫಲಿತಾಂಶ ಬಂದಿದೆ.</p>.<p>ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಘಟಿಕೋತ್ಸವ ಕಾರ್ಯಕ್ರಮ ನಡೆಯಿತು.<br> ಸಂಸ್ಥೆಯ ಪ್ರಾಚಾರ್ಯ ಡಾ.ಪರಶಿವಮೂರ್ತಿ, ವಿಭಾಗದ ಮುಖ್ಯಸ್ಥರು, ಬೋಧಕ, ಬೋಧಕೇತರ ವರ್ಗ ಹಾಗೂ ಕಾಲೇಜು ಸಿಬ್ಬಂದಿ ವರ್ಗದವರ ಪರವಾಗಿ ಎಲ್ಲಾ ಅಂತಿಮ ವರ್ಷದ ವಿಧ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.</p>.<p>ಎಲ್ಲಾ ವಿಭಾಗಗಳಿಂದ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ನಾಲ್ಕು ವರ್ಷದ ಅಧ್ಯಯನದ ಪಯಣವನ್ನು ಸಂಭ್ರಮದಿಂದ ಆಚರಿಸಿದರು. ಸಿವಿಲ್ ವಿಭಾಗದ ಮುಖ್ಯಸ್ಥ ಡಾ.ಎಸ್.ಸತೀಶ್ ಎಲ್ಲಾ ವಿಭಾಗದ ವಿದ್ಯಾರ್ಥಿಗಳಿಗೆ ಶುಭಾಶಯ ತಿಳಿಸಿದರು.</p>.<p>‘2024-25ನೇ ಸಾಲಿನ ಅಂತಿಮ ವರ್ಷ ಪಾಸಾದ ವಿದ್ಯಾರ್ಥಿಗಳಲ್ಲಿ 100 ವಿದ್ಯಾರ್ಥಿಗಳು ವಿವಿಧ ಜಾಗತಿಕ ಕಂಪನಿಗಳಿಗೆ ನೇಮಕ ಹಾಗೂ ತರಬೇತಿಗೆ ಆಯ್ಕೆಯಾಗಿರುವುದು ಹರ್ಷದಾಯಕವಾಗಿದೆ. ಹಲವರು ಹೆಚ್ಚಿನ ವ್ಯಾಸಂಗಕ್ಕೆ ಇಚ್ಚಿಸಿದ್ದು ಕೆಸಿಇಟಿ ಪರೀಕ್ಷೆಗಳನ್ನು ಬರೆದಿದ್ದಾರೆ’ ಎಂದು ಉಪನ್ಯಾಸಕ ಜಿ.ಶ್ರೀನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಪಟ್ಟಣದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ 2024-25ನೇ ಸಾಲಿನ ಅಂತಿಮ ವರ್ಷದ ಫಲಿತಾಂಶ ಪ್ರಕಟಗೊಂಡಿದ್ದು, ನಾಲ್ಕು ವಿಭಾಗದಲ್ಲಿಯೂ ಶೇ 100 ಫಲಿತಾಂಶ ಬಂದಿದೆ.</p>.<p>ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಘಟಿಕೋತ್ಸವ ಕಾರ್ಯಕ್ರಮ ನಡೆಯಿತು.<br> ಸಂಸ್ಥೆಯ ಪ್ರಾಚಾರ್ಯ ಡಾ.ಪರಶಿವಮೂರ್ತಿ, ವಿಭಾಗದ ಮುಖ್ಯಸ್ಥರು, ಬೋಧಕ, ಬೋಧಕೇತರ ವರ್ಗ ಹಾಗೂ ಕಾಲೇಜು ಸಿಬ್ಬಂದಿ ವರ್ಗದವರ ಪರವಾಗಿ ಎಲ್ಲಾ ಅಂತಿಮ ವರ್ಷದ ವಿಧ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.</p>.<p>ಎಲ್ಲಾ ವಿಭಾಗಗಳಿಂದ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ನಾಲ್ಕು ವರ್ಷದ ಅಧ್ಯಯನದ ಪಯಣವನ್ನು ಸಂಭ್ರಮದಿಂದ ಆಚರಿಸಿದರು. ಸಿವಿಲ್ ವಿಭಾಗದ ಮುಖ್ಯಸ್ಥ ಡಾ.ಎಸ್.ಸತೀಶ್ ಎಲ್ಲಾ ವಿಭಾಗದ ವಿದ್ಯಾರ್ಥಿಗಳಿಗೆ ಶುಭಾಶಯ ತಿಳಿಸಿದರು.</p>.<p>‘2024-25ನೇ ಸಾಲಿನ ಅಂತಿಮ ವರ್ಷ ಪಾಸಾದ ವಿದ್ಯಾರ್ಥಿಗಳಲ್ಲಿ 100 ವಿದ್ಯಾರ್ಥಿಗಳು ವಿವಿಧ ಜಾಗತಿಕ ಕಂಪನಿಗಳಿಗೆ ನೇಮಕ ಹಾಗೂ ತರಬೇತಿಗೆ ಆಯ್ಕೆಯಾಗಿರುವುದು ಹರ್ಷದಾಯಕವಾಗಿದೆ. ಹಲವರು ಹೆಚ್ಚಿನ ವ್ಯಾಸಂಗಕ್ಕೆ ಇಚ್ಚಿಸಿದ್ದು ಕೆಸಿಇಟಿ ಪರೀಕ್ಷೆಗಳನ್ನು ಬರೆದಿದ್ದಾರೆ’ ಎಂದು ಉಪನ್ಯಾಸಕ ಜಿ.ಶ್ರೀನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>