<p>ಕುಶಾಲನಗರ: ಪಟ್ಟಣದ ವರ್ಕ್ ಶಾಪ್ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕರ ದಿನ ಹಾಗೂ ಸಂಘದ 16ನೇ ವಾರ್ಷಿಕೋತ್ಸವ ಶುಕ್ರವಾರ ಆಚರಿಸಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಟೌನ್ ಪೊಲೀಸ್ ಠಾಣೆ ಸಿಪಿಐ ಬಿ.ಆರ್. ಪ್ರದೀಪ್ ಕಾರ್ಮಿಕ ದಿನದ ಮಹತ್ವದ ಬಗ್ಗೆ ಮಾತನಾಡಿದರು. ‘ಕಾರ್ಮಿಕರು ಕಾನೂನಿನ ಬಗ್ಗೆ ಅರಿವು ಹೊಂದುವುದು ಅತ್ಯಗತ್ಯ. ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ನಡೆಸುವ ಹೋರಾಟಗಳ ಸಂದರ್ಭ ನಿಯಮಗಳ ಉಲ್ಲಂಘನೆ ಆಗದಂತೆ ಎಚ್ಚರವಹಿಸಬೇಕು’ ಎಂದರು.</p>.<p>ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಕಾರ್ಮಿಕರಿಗಿಂತ ಮಿಗಿಲಾಗಿ ಸಮಾಜದ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು ದುಡಿಯುತ್ತಿರುವುದು ಹೆಮ್ಮೆಯ ಸಂಗತಿ ಎಂದರು.</p>.<p>ವರ್ಕ್ ಶಾಪ್ ಯೂನಿಯನ್ ಅಧ್ಯಕ್ಷ ಎಂ.ಆರ್.ಪೂವಯ್ಯ ಅಧ್ಯಕ್ಷತೆ ವಹಿಸಿದ್ದರು. ಮೊದಲಿಗೆ ಕಾರ್ಮಿಕ ದಿನಾಚರಣೆ ಅಂಗವಾಗಿ ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಳಿಕ ಗಣಪತಿ ದೇವಾಲಯದ ಬಳಿ ಸಾಮೂಹಿಕವಾಗಿ ಪಟಾಕಿ ಸಿಡಿಸಿ ನಗರದಲ್ಲಿ ಮೆರವಣಿಗೆ ನಡೆಸಿದರು.</p>.<p>ಟೌನ್ ಪೊಲೀಸ್ ಠಾಣಾಧಿಕಾರಿ ಎಚ್.ಟಿ.ಶಿವಣ್ಣ, ಸಂಚಾರ ಪೊಲೀಸ್ ಠಾಣಾಧಿಕಾರಿ ಶ್ರೀನಿವಾಸ್ ವರ್ಕ್ ಶಾಪ್ ಯೂನಿಯನ್ ಪದಾಧಿಕಾರಿಗಳಾದ ಸಿ.ಎನ್.ಮದನ್, ಶಿವಕುಮಾರ, ರಂಜಿತ್, ಸಮೀರ್, ವಿನ್ಸೆಂಟ್, ಎನ್.ಸಿ. ಗಣೇಶ್, ಸತೀಶ್, ರವಿ, ಮನು, ಗಣೇಶ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-51-445516355</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಶಾಲನಗರ: ಪಟ್ಟಣದ ವರ್ಕ್ ಶಾಪ್ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕರ ದಿನ ಹಾಗೂ ಸಂಘದ 16ನೇ ವಾರ್ಷಿಕೋತ್ಸವ ಶುಕ್ರವಾರ ಆಚರಿಸಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಟೌನ್ ಪೊಲೀಸ್ ಠಾಣೆ ಸಿಪಿಐ ಬಿ.ಆರ್. ಪ್ರದೀಪ್ ಕಾರ್ಮಿಕ ದಿನದ ಮಹತ್ವದ ಬಗ್ಗೆ ಮಾತನಾಡಿದರು. ‘ಕಾರ್ಮಿಕರು ಕಾನೂನಿನ ಬಗ್ಗೆ ಅರಿವು ಹೊಂದುವುದು ಅತ್ಯಗತ್ಯ. ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ನಡೆಸುವ ಹೋರಾಟಗಳ ಸಂದರ್ಭ ನಿಯಮಗಳ ಉಲ್ಲಂಘನೆ ಆಗದಂತೆ ಎಚ್ಚರವಹಿಸಬೇಕು’ ಎಂದರು.</p>.<p>ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಕಾರ್ಮಿಕರಿಗಿಂತ ಮಿಗಿಲಾಗಿ ಸಮಾಜದ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು ದುಡಿಯುತ್ತಿರುವುದು ಹೆಮ್ಮೆಯ ಸಂಗತಿ ಎಂದರು.</p>.<p>ವರ್ಕ್ ಶಾಪ್ ಯೂನಿಯನ್ ಅಧ್ಯಕ್ಷ ಎಂ.ಆರ್.ಪೂವಯ್ಯ ಅಧ್ಯಕ್ಷತೆ ವಹಿಸಿದ್ದರು. ಮೊದಲಿಗೆ ಕಾರ್ಮಿಕ ದಿನಾಚರಣೆ ಅಂಗವಾಗಿ ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಳಿಕ ಗಣಪತಿ ದೇವಾಲಯದ ಬಳಿ ಸಾಮೂಹಿಕವಾಗಿ ಪಟಾಕಿ ಸಿಡಿಸಿ ನಗರದಲ್ಲಿ ಮೆರವಣಿಗೆ ನಡೆಸಿದರು.</p>.<p>ಟೌನ್ ಪೊಲೀಸ್ ಠಾಣಾಧಿಕಾರಿ ಎಚ್.ಟಿ.ಶಿವಣ್ಣ, ಸಂಚಾರ ಪೊಲೀಸ್ ಠಾಣಾಧಿಕಾರಿ ಶ್ರೀನಿವಾಸ್ ವರ್ಕ್ ಶಾಪ್ ಯೂನಿಯನ್ ಪದಾಧಿಕಾರಿಗಳಾದ ಸಿ.ಎನ್.ಮದನ್, ಶಿವಕುಮಾರ, ರಂಜಿತ್, ಸಮೀರ್, ವಿನ್ಸೆಂಟ್, ಎನ್.ಸಿ. ಗಣೇಶ್, ಸತೀಶ್, ರವಿ, ಮನು, ಗಣೇಶ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-51-445516355</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>