<p><strong>ಕುಶಾಲನಗರ:</strong> ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಅವಮಾನಿಸಿದ ಘಟನೆ ಖಂಡಿಸಿ ವಿಶ್ವಜ್ಞಾನಿ ಅಂಬೇಡ್ಕರ್ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ಐಬಿಯಿಂದ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ನ್ಯಾಯಾಧೀಶರನ್ನು ಅಪಮಾನಿಸಿದ ವ್ಯಕ್ತಿಯನ್ನು ದೇಶದಿಂದ ಗಡಿಪಾರು ಮಾಡುವಂತೆ ರಾಷ್ಟ್ರಪತಿ ಹಾಗೂ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.<br><br> ತಾಲ್ಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಕಿರಣ್ ಗೌರಯ್ಯ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. <br><br> ದಲಿತ ಮುಖಂಡ ಮೋಹನ್ ಮೌರ್ಯ ಮಾತನಾಡಿ, ದೇಶದಲ್ಲಿ ನ್ಯಾಯಾಧೀಶರಿಗೆ ಅವಮಾನ ಕೃತ್ಯವೆಸಗಿದಾತನನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು. ಟ್ರಸ್ಟ್ ಅಧ್ಯಕ್ಷ ಲೋಕೇಶ್ ಮಾತನಾಡಿ, ಮುಖ್ಯನಾಯಾಧೀಶರಿಗೆ ಅಪಮಾನ ಎಸಗಿರುವುದರ ವಿರುದ್ಧ ಪ್ರತಿಯೊಬ್ಬ ಭಾರತೀಯನೂ ಖಂಡಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. <br><br> ಟ್ರಸ್ಟ್ ಕಾರ್ಯದರ್ಶಿ ಸತೀಶ್ ಕುಮಾರ್, ಖಜಾಂಜಿ ಜ್ಞಾನವಾಣಿ ಸತೀಶ್, ನಿರ್ದೇಶಕರಾದ ಜೈವರ್ಧನ್, ಪ್ರಮುಖರಾದ ಎಚ್.ಡಿ.ಚಂದ್ರು,ಬಿ.ಡಿ.ಅಣ್ಣಯ್ಯ, ಸುರೇಶ್, ವೀರಭದ್ರ, ಶಿವಪ್ಪ, ಮಹೇಶ್, ರವಿ, ಎಸ್.ಆರ್.ಮಂಜುನಾಥ್ , ಕೃಷ್ಣ, ಗೋವಿಂದರಾಜ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಅವಮಾನಿಸಿದ ಘಟನೆ ಖಂಡಿಸಿ ವಿಶ್ವಜ್ಞಾನಿ ಅಂಬೇಡ್ಕರ್ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ಐಬಿಯಿಂದ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ನ್ಯಾಯಾಧೀಶರನ್ನು ಅಪಮಾನಿಸಿದ ವ್ಯಕ್ತಿಯನ್ನು ದೇಶದಿಂದ ಗಡಿಪಾರು ಮಾಡುವಂತೆ ರಾಷ್ಟ್ರಪತಿ ಹಾಗೂ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.<br><br> ತಾಲ್ಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಕಿರಣ್ ಗೌರಯ್ಯ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. <br><br> ದಲಿತ ಮುಖಂಡ ಮೋಹನ್ ಮೌರ್ಯ ಮಾತನಾಡಿ, ದೇಶದಲ್ಲಿ ನ್ಯಾಯಾಧೀಶರಿಗೆ ಅವಮಾನ ಕೃತ್ಯವೆಸಗಿದಾತನನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು. ಟ್ರಸ್ಟ್ ಅಧ್ಯಕ್ಷ ಲೋಕೇಶ್ ಮಾತನಾಡಿ, ಮುಖ್ಯನಾಯಾಧೀಶರಿಗೆ ಅಪಮಾನ ಎಸಗಿರುವುದರ ವಿರುದ್ಧ ಪ್ರತಿಯೊಬ್ಬ ಭಾರತೀಯನೂ ಖಂಡಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. <br><br> ಟ್ರಸ್ಟ್ ಕಾರ್ಯದರ್ಶಿ ಸತೀಶ್ ಕುಮಾರ್, ಖಜಾಂಜಿ ಜ್ಞಾನವಾಣಿ ಸತೀಶ್, ನಿರ್ದೇಶಕರಾದ ಜೈವರ್ಧನ್, ಪ್ರಮುಖರಾದ ಎಚ್.ಡಿ.ಚಂದ್ರು,ಬಿ.ಡಿ.ಅಣ್ಣಯ್ಯ, ಸುರೇಶ್, ವೀರಭದ್ರ, ಶಿವಪ್ಪ, ಮಹೇಶ್, ರವಿ, ಎಸ್.ಆರ್.ಮಂಜುನಾಥ್ , ಕೃಷ್ಣ, ಗೋವಿಂದರಾಜ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>