<p><strong>ಕುಶಾಲನಗರ</strong>: ಪ್ರಕೃತಿ ವಿಕೋಪದಿಂದ ಸಂಭವಿಸುವ ಅನಾಹುತಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಸಮೀಪದ ಕೂಡ್ಲೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಸ್ವಯಂ ಸೇವಕರ ಸಭೆ ನಡೆಯಿತು.</p>.<p>ಪ್ರಕೃತಿ ವಿಕೋಪದಂಥ ತುರ್ತು ಸಂದರ್ಭಗಳಲ್ಲಿ ಸಂಘ –ಸಂಸ್ಥೆಗಳು ಹಾಗೂ ವಿವಿಧ ಸಂಘಟನೆಗಳ ಸ್ವಯಂ ಸೇವಕರು ಸೇರಿದಂತೆ ಸಾರ್ವಜನಿಕರು ಇಲಾಖೆಯೊಂದಿಗೆ ನೋಂದಾಯಿಸಿಕೊಂಡು, ನಮ್ಮೊಂದಿಗೆ ಕೈಜೋಡಿಸುವ ಮೂಲಕ ಅನಾಹುತ ತಡೆಯಲು ಸಹಕರಿಸಬೇಕು ಎಂದು ಡಿವೈಎಸ್ಪಿ ಚಂದ್ರಶೇಖರ್ ಮನವಿ ಮಾಡಿದರು.</p>.<p>‘ಮೇ, ಜೂನ್ನಲ್ಲಿ ಸಾಕಷ್ಟು ಮಳೆಯಾಗಿದ್ದು, ಮುಂದಿನ ದಿನಗಳಲ್ಲಿಯೂ ಈ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಯಾವುದೇ ಅನಾಹುತ ಸಂಭವಿಸಿದ್ದಲ್ಲಿ ತೆಗೆದುಕೊಳ್ಳಬೇಕಾದ ಕ್ರಮ, ಅಪಾಯಕಾರಿ ಪ್ರದೇಶಗಳಲ್ಲಿ ಮುಂಜಾಗ್ರತೆ ವಹಿಸುವ ಸಂಬಂಧ ಎಸ್ಪಿ ಸೂಚನೆಯಂತೆ ಸಭೆ ನಡೆಸಲಾಗುತ್ತಿದೆ’ ಎಂದರು.</p>.<p>‘ತಮ್ಮ ವ್ಯಾಪ್ತಿಯಲ್ಲಿ ಭೂಕುಸಿತ ಸಂಭವನೀಯ ಪ್ರದೇಶಗಳ ಬಗ್ಗೆ ಮುಂಚಿತವಾಗಿ ಮಾಹಿತಿ ತಿಳಿಸಬೇಕು’ ಎಂದು ತಿಳಿಸಿದರು.</p>.<p>‘ದುಬಾರೆ ರ್ಯಾಫ್ಟಿಂಗ್ ಗೈಡ್ಸ್, ಈಜು ತಜ್ಞರು, ಜೆಸಿಬಿ ಮಾಲೀಕರು, ಜೀಪ್ ಮಾಲೀಕರು ಹಾಗೂ ಟ್ರಾಕ್ಟರ್ ಮಾಲೀಕರು ಇಲಾಖೆಯಲ್ಲಿ ಹೆಸರನ್ನು ನೊಂದಾಯಿಸಿಕೊಂಡು ಅನಾಹುತ ಸಂದರ್ಭದಲ್ಲಿ ಅಗತ್ಯ ಸಹಕಾರ ನೀಡಬೇಕು’ ಎಂದು ಹೇಳಿದರು.</p>.<p>ಸರ್ಕಲ್ ಇನ್ಸ್ಪೆಕ್ಟರ್ ದಿನೇಶ್, ಗ್ರಾಮಾಂತರ ಠಾಣಾಧಿಕಾರಿ ರಾಮಚಂದ್ರ, ವಿವಿಧ ಸಂಘಟನೆಗಳ ಮುಖಂಡರಾದ ಮಹಮ್ಮದ್, ರಫೀಕ್, ಶಾಫಿ, ಖಾಲಂದರ್, ಕೆ.ಎಸ್.ಶಿವಕುಮಾರ್, ದುಬಾರೆ ಚಂಗಪ್ಪ, ಜೆಸಿಬಿ, ಜೀಪ್ ಮಾಲೀಕರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಪ್ರಕೃತಿ ವಿಕೋಪದಿಂದ ಸಂಭವಿಸುವ ಅನಾಹುತಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಸಮೀಪದ ಕೂಡ್ಲೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಸ್ವಯಂ ಸೇವಕರ ಸಭೆ ನಡೆಯಿತು.</p>.<p>ಪ್ರಕೃತಿ ವಿಕೋಪದಂಥ ತುರ್ತು ಸಂದರ್ಭಗಳಲ್ಲಿ ಸಂಘ –ಸಂಸ್ಥೆಗಳು ಹಾಗೂ ವಿವಿಧ ಸಂಘಟನೆಗಳ ಸ್ವಯಂ ಸೇವಕರು ಸೇರಿದಂತೆ ಸಾರ್ವಜನಿಕರು ಇಲಾಖೆಯೊಂದಿಗೆ ನೋಂದಾಯಿಸಿಕೊಂಡು, ನಮ್ಮೊಂದಿಗೆ ಕೈಜೋಡಿಸುವ ಮೂಲಕ ಅನಾಹುತ ತಡೆಯಲು ಸಹಕರಿಸಬೇಕು ಎಂದು ಡಿವೈಎಸ್ಪಿ ಚಂದ್ರಶೇಖರ್ ಮನವಿ ಮಾಡಿದರು.</p>.<p>‘ಮೇ, ಜೂನ್ನಲ್ಲಿ ಸಾಕಷ್ಟು ಮಳೆಯಾಗಿದ್ದು, ಮುಂದಿನ ದಿನಗಳಲ್ಲಿಯೂ ಈ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಯಾವುದೇ ಅನಾಹುತ ಸಂಭವಿಸಿದ್ದಲ್ಲಿ ತೆಗೆದುಕೊಳ್ಳಬೇಕಾದ ಕ್ರಮ, ಅಪಾಯಕಾರಿ ಪ್ರದೇಶಗಳಲ್ಲಿ ಮುಂಜಾಗ್ರತೆ ವಹಿಸುವ ಸಂಬಂಧ ಎಸ್ಪಿ ಸೂಚನೆಯಂತೆ ಸಭೆ ನಡೆಸಲಾಗುತ್ತಿದೆ’ ಎಂದರು.</p>.<p>‘ತಮ್ಮ ವ್ಯಾಪ್ತಿಯಲ್ಲಿ ಭೂಕುಸಿತ ಸಂಭವನೀಯ ಪ್ರದೇಶಗಳ ಬಗ್ಗೆ ಮುಂಚಿತವಾಗಿ ಮಾಹಿತಿ ತಿಳಿಸಬೇಕು’ ಎಂದು ತಿಳಿಸಿದರು.</p>.<p>‘ದುಬಾರೆ ರ್ಯಾಫ್ಟಿಂಗ್ ಗೈಡ್ಸ್, ಈಜು ತಜ್ಞರು, ಜೆಸಿಬಿ ಮಾಲೀಕರು, ಜೀಪ್ ಮಾಲೀಕರು ಹಾಗೂ ಟ್ರಾಕ್ಟರ್ ಮಾಲೀಕರು ಇಲಾಖೆಯಲ್ಲಿ ಹೆಸರನ್ನು ನೊಂದಾಯಿಸಿಕೊಂಡು ಅನಾಹುತ ಸಂದರ್ಭದಲ್ಲಿ ಅಗತ್ಯ ಸಹಕಾರ ನೀಡಬೇಕು’ ಎಂದು ಹೇಳಿದರು.</p>.<p>ಸರ್ಕಲ್ ಇನ್ಸ್ಪೆಕ್ಟರ್ ದಿನೇಶ್, ಗ್ರಾಮಾಂತರ ಠಾಣಾಧಿಕಾರಿ ರಾಮಚಂದ್ರ, ವಿವಿಧ ಸಂಘಟನೆಗಳ ಮುಖಂಡರಾದ ಮಹಮ್ಮದ್, ರಫೀಕ್, ಶಾಫಿ, ಖಾಲಂದರ್, ಕೆ.ಎಸ್.ಶಿವಕುಮಾರ್, ದುಬಾರೆ ಚಂಗಪ್ಪ, ಜೆಸಿಬಿ, ಜೀಪ್ ಮಾಲೀಕರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>