<p><strong>ಕುಶಾಲನಗರ</strong>: ‘ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ದುಬಾರೆಯ ಕಾವೇರಿ ನದಿಗೆ ಅಡ್ಡಲಾಗಿ ತೂಗು ಸೇತುವೆ ನಿರ್ಮಾಣಕ್ಕೆ ₹8 ಕೋಟಿ ಅನುದಾನ ಮಂಜೂರಾಗಿದ್ದು, ಹೊಸ ವರ್ಷದಲ್ಲಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುತ್ತದೆ’ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.</p>.<p>ಲೋಕೋಪಯೋಗಿ ಇಲಾಖೆ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನಂಜರಾಯಪಟ್ಟಣ ಗ್ರಾಮದಲ್ಲಿ ₹5.14 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಕಾವೇರಿ ನದಿಗೆ ಅಡ್ಡಲಾಗಿ ತೂಗು ಸೇತುವೆ ನಿರ್ಮಿಸಬೇಕು ಎಂಬ ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಗ ಈಡೇರಿದೆ. ಟೆಂಡರ್ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಹೊಸ ವರ್ಷದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ’ ಎಂದರು.</p>.<p>‘ಚಿಕ್ಲಿಹೊಳೆ ಜಲಾಶಯದ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸಲು ₹5 ಕೋಟಿ ಮಂಜೂರಾಗಿದೆ. ಮುಖ್ಯಮಂತ್ರಿಗಳ ನಿಧಿಯಿಂದ ₹2 ಕೋಟಿ ವೆಚ್ಚದಲ್ಲಿ ಬಾಳುಗೋಡು ರಸ್ತೆ ಅಭಿವೃದ್ಧಿ ಅನುದಾನ ಬಿಡುಗಡೆಗೊಂಡಿದೆ. ಮಾವಿನಹಳ್ಳ ತೋಡು ಅಭಿವೃದ್ಧಿ ₹25 ಲಕ್ಷ ಸೇರಿದಂತೆ ನಂಜರಾಯಪಟ್ಟಣ ಪಂಚಾಯಿತಿಗೆ ಒಟ್ಟು ₹20 ಕೋಟಿ ಅನುದಾನ ಒದಗಿಸಲಾಗಿದೆ’ ಎಂದು ಹೇಳಿದರು.</p>.<p>‘ಹಾಸ್ಟೆಲ್ಗೆ ಕುಡಿಯುವ ನೀರು, ತಡೆಗೋಡೆಯನ್ನು ನಿರ್ಮಿಸಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.</p>.<p>ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಸುನೀತಾ ಮಂಜುನಾಥ್, ನಂಜರಾಯಪಟ್ಟಣ ವಿದ್ಯಾಸಂಸ್ಥೆ ಯತೀಶ್ ಕುಮಾರ್, ಕಾರ್ಯದರ್ಶಿ ಲೋಕನಾಥ್, ಲಿಲಿತ್ಮ ಚಿದಂಬರ್,ಪಿ.ಡಿ. ಅಶೋಕ್, ಪಂಚಾಕ್ಷರಿ, ಪ್ರೇಮನಂದ, ಕಾಳಿಂಗ, ಪಿಡಿಒ ರಾಜಶೇಖರ್, ಲೋಕೋಪಯೋಗಿ ಎಂಜಿನಿಯರ್<br />ಹರ್ಬಜ್ ಮಹಮ್ಮದ್, ಶಿಕ್ಷಕ ನಾಗರಾಜು ಮತ್ತಿತರರು ಪಾಲ್ಗೊಂಡಿದ್ದರು.</p>.<p>ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆಪ್ಪದಕಂಡಿ ಬಳಿ ₹1.65 ಕೋಟಿ ವೆಚ್ಚದಲ್ಲಿ ನಾಲೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು.</p>.<p>ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್, ಉಪಾಧ್ಯಕ್ಷೆ ನೇತ್ರಾವತಿ, ಮುಖಂಡರಾದ ಚಂದ್ರಶೇಖರ್, ಮಲ್ಲಿಕಾರ್ಜುನ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಕುಮಾರಸ್ವಾಮಿ, ಗ್ರಾಮದ ಮುಖಂಡರಾದ ದಾಮೋದರ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<p>ರಸ್ತೆ ಅಭಿವೃದ್ಧಿಗೆ ಚಾಲನೆ: ಮಾದಪಟ್ಟಣ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ₹25 ಲಕ್ಷ ವೆಚ್ಚದಲ್ಲಿ ಪರಿಶಿಷ್ಟ ಜಾತಿ ಕಾಲೊನಿ ರಸ್ತೆ ಅಭಿವೃದ್ಧಿಗೆ ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು. ಮುಖಂಡರಾದ ದಾಮೋದರ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ‘ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ದುಬಾರೆಯ ಕಾವೇರಿ ನದಿಗೆ ಅಡ್ಡಲಾಗಿ ತೂಗು ಸೇತುವೆ ನಿರ್ಮಾಣಕ್ಕೆ ₹8 ಕೋಟಿ ಅನುದಾನ ಮಂಜೂರಾಗಿದ್ದು, ಹೊಸ ವರ್ಷದಲ್ಲಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುತ್ತದೆ’ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.</p>.<p>ಲೋಕೋಪಯೋಗಿ ಇಲಾಖೆ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನಂಜರಾಯಪಟ್ಟಣ ಗ್ರಾಮದಲ್ಲಿ ₹5.14 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಕಾವೇರಿ ನದಿಗೆ ಅಡ್ಡಲಾಗಿ ತೂಗು ಸೇತುವೆ ನಿರ್ಮಿಸಬೇಕು ಎಂಬ ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಗ ಈಡೇರಿದೆ. ಟೆಂಡರ್ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಹೊಸ ವರ್ಷದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ’ ಎಂದರು.</p>.<p>‘ಚಿಕ್ಲಿಹೊಳೆ ಜಲಾಶಯದ ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸಲು ₹5 ಕೋಟಿ ಮಂಜೂರಾಗಿದೆ. ಮುಖ್ಯಮಂತ್ರಿಗಳ ನಿಧಿಯಿಂದ ₹2 ಕೋಟಿ ವೆಚ್ಚದಲ್ಲಿ ಬಾಳುಗೋಡು ರಸ್ತೆ ಅಭಿವೃದ್ಧಿ ಅನುದಾನ ಬಿಡುಗಡೆಗೊಂಡಿದೆ. ಮಾವಿನಹಳ್ಳ ತೋಡು ಅಭಿವೃದ್ಧಿ ₹25 ಲಕ್ಷ ಸೇರಿದಂತೆ ನಂಜರಾಯಪಟ್ಟಣ ಪಂಚಾಯಿತಿಗೆ ಒಟ್ಟು ₹20 ಕೋಟಿ ಅನುದಾನ ಒದಗಿಸಲಾಗಿದೆ’ ಎಂದು ಹೇಳಿದರು.</p>.<p>‘ಹಾಸ್ಟೆಲ್ಗೆ ಕುಡಿಯುವ ನೀರು, ತಡೆಗೋಡೆಯನ್ನು ನಿರ್ಮಿಸಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.</p>.<p>ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಸುನೀತಾ ಮಂಜುನಾಥ್, ನಂಜರಾಯಪಟ್ಟಣ ವಿದ್ಯಾಸಂಸ್ಥೆ ಯತೀಶ್ ಕುಮಾರ್, ಕಾರ್ಯದರ್ಶಿ ಲೋಕನಾಥ್, ಲಿಲಿತ್ಮ ಚಿದಂಬರ್,ಪಿ.ಡಿ. ಅಶೋಕ್, ಪಂಚಾಕ್ಷರಿ, ಪ್ರೇಮನಂದ, ಕಾಳಿಂಗ, ಪಿಡಿಒ ರಾಜಶೇಖರ್, ಲೋಕೋಪಯೋಗಿ ಎಂಜಿನಿಯರ್<br />ಹರ್ಬಜ್ ಮಹಮ್ಮದ್, ಶಿಕ್ಷಕ ನಾಗರಾಜು ಮತ್ತಿತರರು ಪಾಲ್ಗೊಂಡಿದ್ದರು.</p>.<p>ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆಪ್ಪದಕಂಡಿ ಬಳಿ ₹1.65 ಕೋಟಿ ವೆಚ್ಚದಲ್ಲಿ ನಾಲೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು.</p>.<p>ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್, ಉಪಾಧ್ಯಕ್ಷೆ ನೇತ್ರಾವತಿ, ಮುಖಂಡರಾದ ಚಂದ್ರಶೇಖರ್, ಮಲ್ಲಿಕಾರ್ಜುನ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಕುಮಾರಸ್ವಾಮಿ, ಗ್ರಾಮದ ಮುಖಂಡರಾದ ದಾಮೋದರ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<p>ರಸ್ತೆ ಅಭಿವೃದ್ಧಿಗೆ ಚಾಲನೆ: ಮಾದಪಟ್ಟಣ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ₹25 ಲಕ್ಷ ವೆಚ್ಚದಲ್ಲಿ ಪರಿಶಿಷ್ಟ ಜಾತಿ ಕಾಲೊನಿ ರಸ್ತೆ ಅಭಿವೃದ್ಧಿಗೆ ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು. ಮುಖಂಡರಾದ ದಾಮೋದರ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>