<p><strong>ಕುಶಾಲನಗರ</strong> : ಕೊಡಗು ಪುಟ್ಟ ಜಿಲ್ಲೆಯಾದರೂ ತೆರಿಗೆ ಪಾವತಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ ಎನ್ನುವುದು ಹೆಮ್ಮೆ ಪಡುವ ವಿಚಾರ ಎಂದು ಚೇಂಬರ್ ಆಫ್ ಕಾಮರ್ಸ್ ಕೊಡಗು ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಹೇಳಿದರು.</p>.<p>ಚೇಂಬರ್ ಅಪ್ ಕಾಮರ್ಸ್ ಭಾನುವಾರ ಇಲ್ಲಿ ಆಯೋಜಿಸಿದ್ದ ವರ್ತಕರ ಸ್ನೇಹ ಮಿಲನ ಉದ್ಘಾಟಿಸಿ ಅವರು ಮಾತನಾಡಿದರು.<br><br> ಕುಶಾಲನಗರದಲ್ಲಿ 1991 ಚೇಂಬರ್ ಅಪ್ ಕಾಮರ್ಸ್ ಪ್ರಾರಂಭವಾಯಿತು. ಆಗಿನ ಕಾಲದಲ್ಲಿ ಸರ್ಕಾರಿ ಅಧಿಕಾರಿಗಳು ವರ್ತಕರಿಗೆ ಅನವಶ್ಯಕ ಕಿರುಕುಳ ನೀಡುದ್ದರು. ಚೇಂಬರ್ ಪದಾಧಿಕಾರಿಗಳು ವರ್ತಕರ ತೊಂದರೆಯಾಗುವುದನ್ನು ತಪ್ಪಿಸಿದರು. ಕೊಡಗು ಕಾಫಿ ಜೊತೆಗೆ ಪ್ರವಾಸೋದ್ಯಮ ಅವಲಂಬಿತವಾಗಿದೆ. ಪೂರಕವಾದ ವಾತಾವರಣ ನಿರ್ಮಾಣ ಅಗತ್ಯವಾಗಿದೆ ಎಂದರು.</p>.<p>ಚೇಂಬರ್ಸ್ ನಿರ್ದೇಶಕ ಎಸ್.ಕೆ.ಸತೀಶ್ ಮಾತನಾಡಿ, ವರ್ತಕರ ದಿನವನ್ನು ಆಚರಿಸುವಂತಾಗಬೇಕು. ಕುಶಾಲನಗರ ಸಮಿತಿ ನಿರ್ಮಿಸಲು ಉದ್ದೇಶಿಸಿರುವ ವರ್ತಕರ ಭವನಕ್ಕೆ ಸದಸ್ಯರು ಹೆಚ್ಚಿನ ಬೆಂಬಲ ನೀಡಬೇಕೆಂದರು.</p>.<p>ಚೇಂಬರ್ ಅಧ್ಯಕ್ಷ ರವೀಂದ್ರ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ವರ್ತಕರ ಸಹಕಾರದಿಂದ ಸಂಘಟನೆ ಮತ್ತಷ್ಟು ಬಲಪಡಿಸಿದ್ದೇವೆ. ಭವನ ನಿರ್ಮಾಣಕ್ಕೆ ಬಹುತೇಕ ಎಲ್ಲ ತಯಾರಿಗಳು ಆಗಿವೆ ಎಂದರು.</p>.<p>ವರ್ತಕರ ಸಮಿತಿ ಸ್ಥಾಪಕ ಅಧ್ಯಕ್ಷ ಪಿ.ಪಿ. ಸತ್ಯನಾರಾಯಣ, ಮಾಜಿ ಅಧ್ಯಕ್ಷ ಬಿ.ಅಮೃತ್ ರಾಜ್, ಕಾರ್ಯದರ್ಶಿ ಕೆ.ಎಸ್.ನಾಗೇಶ್, ಕಾರ್ಯಕ್ರಮ ನಿರ್ದೇಶಕ ಕೆ.ಎನ್. ದೇವರಾಜ್, ಉಪಾಧ್ಯಕ್ಷ ಎಂ.ಡಿ.ರಂಗಸ್ವಾಮಿ, ನಿರ್ದೇಶಕರಾದ ಎನ್.ವಿ.ಬಾಬು, ಚಿತ್ರ, ರೂಪ, ಚಂದ್ರು, ಎಂ.ಕೆ.ದಿನೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong> : ಕೊಡಗು ಪುಟ್ಟ ಜಿಲ್ಲೆಯಾದರೂ ತೆರಿಗೆ ಪಾವತಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ ಎನ್ನುವುದು ಹೆಮ್ಮೆ ಪಡುವ ವಿಚಾರ ಎಂದು ಚೇಂಬರ್ ಆಫ್ ಕಾಮರ್ಸ್ ಕೊಡಗು ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಹೇಳಿದರು.</p>.<p>ಚೇಂಬರ್ ಅಪ್ ಕಾಮರ್ಸ್ ಭಾನುವಾರ ಇಲ್ಲಿ ಆಯೋಜಿಸಿದ್ದ ವರ್ತಕರ ಸ್ನೇಹ ಮಿಲನ ಉದ್ಘಾಟಿಸಿ ಅವರು ಮಾತನಾಡಿದರು.<br><br> ಕುಶಾಲನಗರದಲ್ಲಿ 1991 ಚೇಂಬರ್ ಅಪ್ ಕಾಮರ್ಸ್ ಪ್ರಾರಂಭವಾಯಿತು. ಆಗಿನ ಕಾಲದಲ್ಲಿ ಸರ್ಕಾರಿ ಅಧಿಕಾರಿಗಳು ವರ್ತಕರಿಗೆ ಅನವಶ್ಯಕ ಕಿರುಕುಳ ನೀಡುದ್ದರು. ಚೇಂಬರ್ ಪದಾಧಿಕಾರಿಗಳು ವರ್ತಕರ ತೊಂದರೆಯಾಗುವುದನ್ನು ತಪ್ಪಿಸಿದರು. ಕೊಡಗು ಕಾಫಿ ಜೊತೆಗೆ ಪ್ರವಾಸೋದ್ಯಮ ಅವಲಂಬಿತವಾಗಿದೆ. ಪೂರಕವಾದ ವಾತಾವರಣ ನಿರ್ಮಾಣ ಅಗತ್ಯವಾಗಿದೆ ಎಂದರು.</p>.<p>ಚೇಂಬರ್ಸ್ ನಿರ್ದೇಶಕ ಎಸ್.ಕೆ.ಸತೀಶ್ ಮಾತನಾಡಿ, ವರ್ತಕರ ದಿನವನ್ನು ಆಚರಿಸುವಂತಾಗಬೇಕು. ಕುಶಾಲನಗರ ಸಮಿತಿ ನಿರ್ಮಿಸಲು ಉದ್ದೇಶಿಸಿರುವ ವರ್ತಕರ ಭವನಕ್ಕೆ ಸದಸ್ಯರು ಹೆಚ್ಚಿನ ಬೆಂಬಲ ನೀಡಬೇಕೆಂದರು.</p>.<p>ಚೇಂಬರ್ ಅಧ್ಯಕ್ಷ ರವೀಂದ್ರ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ವರ್ತಕರ ಸಹಕಾರದಿಂದ ಸಂಘಟನೆ ಮತ್ತಷ್ಟು ಬಲಪಡಿಸಿದ್ದೇವೆ. ಭವನ ನಿರ್ಮಾಣಕ್ಕೆ ಬಹುತೇಕ ಎಲ್ಲ ತಯಾರಿಗಳು ಆಗಿವೆ ಎಂದರು.</p>.<p>ವರ್ತಕರ ಸಮಿತಿ ಸ್ಥಾಪಕ ಅಧ್ಯಕ್ಷ ಪಿ.ಪಿ. ಸತ್ಯನಾರಾಯಣ, ಮಾಜಿ ಅಧ್ಯಕ್ಷ ಬಿ.ಅಮೃತ್ ರಾಜ್, ಕಾರ್ಯದರ್ಶಿ ಕೆ.ಎಸ್.ನಾಗೇಶ್, ಕಾರ್ಯಕ್ರಮ ನಿರ್ದೇಶಕ ಕೆ.ಎನ್. ದೇವರಾಜ್, ಉಪಾಧ್ಯಕ್ಷ ಎಂ.ಡಿ.ರಂಗಸ್ವಾಮಿ, ನಿರ್ದೇಶಕರಾದ ಎನ್.ವಿ.ಬಾಬು, ಚಿತ್ರ, ರೂಪ, ಚಂದ್ರು, ಎಂ.ಕೆ.ದಿನೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>