ಎಸ್.ಡಿ.ಎಂ.ಸಿ.ಅಧ್ಯಕ್ಷ ಎ.ಎಂ.ಜವರಯ್ಯ ಹಸಿರು ಅಭಿಯಾನಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿ
ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪರಿಸರದಲ್ಲಿ ಗಿಡ ನೆಟ್ಟು ಬೆಳೆಸುವ ಮೂಲಕ. ತಮ್ಮನ್ನು ಭವಿಷ್ಯದಲ್ಲಿ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದರು. ಶಾಲಾ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ ಮಾತನಾಡಿ, ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಜೀವನದ ಅಸ್ತಿತ್ವದಲ್ಲಿ ಪರಿಸರವು ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ, ಪ್ರತಿಯೊಬ್ಬ ವ್ಯಕ್ತಿಯು ನಮ್ಮ ಪರಿಸರವನ್ನು ಉಳಿಸುವುದು ಮತ್ತು ರಕ್ಷಿಸುವುದು ಮುಖ್ಯವಾಗಿದೆ ಎಂದರು.
ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಎನ್.ಸುಜಾತ,ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ ಇದ್ದರು.
ಪ್ರತಿಜ್ಞೆ ಸ್ವೀಕಾರ: ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಗಿಡನೆಟ್ಟು ಬೆಳೆಸಿ ಪರಿಸರ ಸಂರಕ್ಷಿಸಿ, ಪ್ಲಾಸ್ಟಿಕ್ ಬಳಕೆ ತ್ಯಜಿಸಿ ಮಾಲಿನ್ಯ ತಡೆಯಿರಿ, ಹಸಿರೇ ಉಸಿರು- ಜಲವೇ ಜೀವಜಾಲ ಎಂಬಿತ್ಯಾದಿ ಪರಿಸರ ಘೋಷಣೆಗಳನ್ನು ಪ್ರಚುರಪಡಿಸುವ ಮೂಲಕ ಸಮುದಾಯದಲ್ಲಿ ಪರಿಸರ ಜಾಗೃತಿ ಮೂಡಿಸಿದರು.