<p><strong>ಕುಶಾಲನಗರ</strong> : ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಂಕ್ರಾಂತಿಯನ್ನು ಬುಧವಾರ ಸಡಗರದಿಂದ ಆಚರಿಸಲಾಯಿತು.</p>.<p>ಶಾಲಾ ಮೈದಾನದಲ್ಲಿ ಎಳ್ಳು, ಬೆಲ್ಲ, ಭತ್ತ, ಕಬ್ಬು, ಗೆಣಸು, ಅವರೆಕಾಳು ಸೇರಿದಂತೆ ವಿವಿಧ ಬಗೆಯ ಕೃಷಿ ಉತ್ಪನ್ನ, ತಿನಿಸುಗಳನ್ನು ಪ್ರದರ್ಶಿಸಲಾಯಿತು. ಶಾಲಾ ಮಕ್ಕಳು ಗೋಪೂಜೆ, ಧಾನ್ಯಗಳನ್ನು ಪೂಜಿಸಿದರು.</p>.<p>ಮುಖ್ಯ ಶಿಕ್ಷಕ ಎಚ್. ಎಂ.ವೆಂಕಟೇಶ್ ಮಾತನಾಡಿ, ಹಿಂದೂ ಧರ್ಮೀಯರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಮಕರ ಸಂಕ್ರಾಂತಿಯೂ ಒಂದು. ಹೊಸ ವರ್ಷದ ಮೊದಲ ಹಬ್ಬ ಸೂರ್ಯ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ ಎಂದರು.<br /> ನಿವೃತ್ತ ಎಂಜಿನಿಯರ್ ಜಿ.ಎಲ್. ರಾಮಪ್ಪ ಮಾತನಾಡಿ, ಸಂಕ್ರಾಂತಿ ಪ್ರಕೃತಿಗೆ ಕೃತಜ್ಞತೆ ಸಲ್ಲಿಸುವ ಹಬ್ಬವಾಗಿದೆ. ಎಳ್ಳು ಬೆಲ್ಲದಂತೆ ಜೀವನದಲ್ಲಿ ಸಿಹಿ ಕಹಿ ಎರಡನ್ನು ಸಮಾನವಾಗಿ ಸ್ವೀಕರಿಸುವ ಸಂದೇಶವನ್ನು ಸಂಕ್ರಾಂತಿ ನಮಗೆ ನೀಡುತ್ತದೆ ಎಂದು ಹೇಳಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷವಪ್ರದೀಪ್ ಅಧ್ಯಕ್ಷತೆ ವಹಿಸಿದ್ದರು.</p>.<p>ಸಂಯುಕ್ತ ಪದವಿಪೂರ್ವ ಕಾಲೇಜು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಸವರಾಜ್ ಶೆಟ್ಟಿ, ಕನ್ನಡ ಅಧ್ಯಾಪಕ ಮೆ.ನಾ. ವೆಂಕಟ ನಾಯಕ್, ಊರಿನ ಹಿರಿಯರು ನಿಂಗಪ್ಪ , ನಿವೃತ್ತ ಶಿಕ್ಷಕ ಪುಟ್ಟರಾಜು, ರಮೇಶ್, ಶಿಕ್ಷಕಿ ಕವಿತಾ, ಶಿಕ್ಷಣ ಸಂಯೋಜಕಿ ರಾಜಕುಮಾರಿ, ಸಿಆರ್ಪಿ ಆದರ್ಶ, ಪ್ರಾಥಮಿಕ ಶಾಲೆಯ ಶಿಕ್ಷಕಿ ಸಿ.ಎಂ.ಬಬಿತ, ದೈಹಿಕ ಶಿಕ್ಷಣ ಶಿಕ್ಷಕಿ ವಂಜಮ್ಮ, ಶಿಕ್ಷಕರಾದ ಶಿವಾನಂದ, ಕೆ.ಎಸ್.ರಮ್ಯಾ, ರಕ್ಷಿತಾ, ಸಿಬ್ಬಂದಿ ವಿನೀತ, ಮಂಜಮ್ಮ, ಪೋಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong> : ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಂಕ್ರಾಂತಿಯನ್ನು ಬುಧವಾರ ಸಡಗರದಿಂದ ಆಚರಿಸಲಾಯಿತು.</p>.<p>ಶಾಲಾ ಮೈದಾನದಲ್ಲಿ ಎಳ್ಳು, ಬೆಲ್ಲ, ಭತ್ತ, ಕಬ್ಬು, ಗೆಣಸು, ಅವರೆಕಾಳು ಸೇರಿದಂತೆ ವಿವಿಧ ಬಗೆಯ ಕೃಷಿ ಉತ್ಪನ್ನ, ತಿನಿಸುಗಳನ್ನು ಪ್ರದರ್ಶಿಸಲಾಯಿತು. ಶಾಲಾ ಮಕ್ಕಳು ಗೋಪೂಜೆ, ಧಾನ್ಯಗಳನ್ನು ಪೂಜಿಸಿದರು.</p>.<p>ಮುಖ್ಯ ಶಿಕ್ಷಕ ಎಚ್. ಎಂ.ವೆಂಕಟೇಶ್ ಮಾತನಾಡಿ, ಹಿಂದೂ ಧರ್ಮೀಯರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಮಕರ ಸಂಕ್ರಾಂತಿಯೂ ಒಂದು. ಹೊಸ ವರ್ಷದ ಮೊದಲ ಹಬ್ಬ ಸೂರ್ಯ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ ಎಂದರು.<br /> ನಿವೃತ್ತ ಎಂಜಿನಿಯರ್ ಜಿ.ಎಲ್. ರಾಮಪ್ಪ ಮಾತನಾಡಿ, ಸಂಕ್ರಾಂತಿ ಪ್ರಕೃತಿಗೆ ಕೃತಜ್ಞತೆ ಸಲ್ಲಿಸುವ ಹಬ್ಬವಾಗಿದೆ. ಎಳ್ಳು ಬೆಲ್ಲದಂತೆ ಜೀವನದಲ್ಲಿ ಸಿಹಿ ಕಹಿ ಎರಡನ್ನು ಸಮಾನವಾಗಿ ಸ್ವೀಕರಿಸುವ ಸಂದೇಶವನ್ನು ಸಂಕ್ರಾಂತಿ ನಮಗೆ ನೀಡುತ್ತದೆ ಎಂದು ಹೇಳಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷವಪ್ರದೀಪ್ ಅಧ್ಯಕ್ಷತೆ ವಹಿಸಿದ್ದರು.</p>.<p>ಸಂಯುಕ್ತ ಪದವಿಪೂರ್ವ ಕಾಲೇಜು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಸವರಾಜ್ ಶೆಟ್ಟಿ, ಕನ್ನಡ ಅಧ್ಯಾಪಕ ಮೆ.ನಾ. ವೆಂಕಟ ನಾಯಕ್, ಊರಿನ ಹಿರಿಯರು ನಿಂಗಪ್ಪ , ನಿವೃತ್ತ ಶಿಕ್ಷಕ ಪುಟ್ಟರಾಜು, ರಮೇಶ್, ಶಿಕ್ಷಕಿ ಕವಿತಾ, ಶಿಕ್ಷಣ ಸಂಯೋಜಕಿ ರಾಜಕುಮಾರಿ, ಸಿಆರ್ಪಿ ಆದರ್ಶ, ಪ್ರಾಥಮಿಕ ಶಾಲೆಯ ಶಿಕ್ಷಕಿ ಸಿ.ಎಂ.ಬಬಿತ, ದೈಹಿಕ ಶಿಕ್ಷಣ ಶಿಕ್ಷಕಿ ವಂಜಮ್ಮ, ಶಿಕ್ಷಕರಾದ ಶಿವಾನಂದ, ಕೆ.ಎಸ್.ರಮ್ಯಾ, ರಕ್ಷಿತಾ, ಸಿಬ್ಬಂದಿ ವಿನೀತ, ಮಂಜಮ್ಮ, ಪೋಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>