<p><strong>ಮಡಿಕೇರಿ:</strong> ‘ಉತ್ತಮ ಸಮಾಜ ನಿರ್ಮಿಸುವಲ್ಲಿ ಸಂಘ–ಸಂಸ್ಥೆಗಳ ಪಾತ್ರವೂ ಮುಖ್ಯ. ಆಚಾರ್ಯ ಪಾಠ ಶಾಲಾ ಶಿಕ್ಷಣ ದತ್ತಿ ಸಂಸ್ಥೆಯು ಉತ್ತಮ ಕಟ್ಟಡ ಕಟ್ಟಿಸಿಕೊಟ್ಟು ಬಡ ವಿದ್ಯಾರ್ಥಿಗಳಿಗೆ ನೆರವಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಹೇಳಿದರು.</p>.<p>ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಬೆಂಗಳೂರು ಆಚಾರ್ಯ ಪಾಠ ಶಾಲಾ ಶಿಕ್ಷಣ ದತ್ತಿ ಸಂಸ್ಥೆ ಸ್ಥಾಪಿಸಿರುವ ಭೋದನಾ ಕೊಠಡಿ ಹಾಗೂ ಕಂಪ್ಯೂಟರ್ ಲ್ಯಾಬ್ಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ತುಂಬಾ ಹಾನಿ ಉಂಟಾಗಿದ್ದು ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಸ್ಥಾನ ಪಡೆಯಲು ಸಂಸ್ಥೆ ನೆರವಾಗಿದೆ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಹಲವು ಸಮಸ್ಯೆಗಳು ಎದುರಾದಂತಹ ಸಂದರ್ಭದಲ್ಲಿ ವಿವಿಧ ಸಂಘ–ಸಂಸ್ಥೆಗಳು ಜಿಲ್ಲೆಗೆ ಉದಾರ ನೆರವು ನೀಡಿದನ್ನು ಸ್ಮರಿಸಿದರು.</p>.<p>ಅತಿವೃಷ್ಟಿ ಹಾನಿಯಿಂದ ಉಂಟಾಗಿರುವ ಸಮಸ್ಯೆಗಳು ಹಾಗೂ ಸಂಬಂಧಿಸಿದ ಪರಿಹಾರಗಳ ಕುರಿತು ಯೋಜನೆ ರೂಪಿಸಿದ್ದು ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದ್ದು, ಸಂಘ– ಸಂಸ್ಥೆಗಳ ಸಹಯೋಗದೊಂದಿಗೆ ಪುನರ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<p>ಆಚಾರ್ಯ ಪಾಠಶಾಲಾ ಶಿಕ್ಷಣ ದತ್ತಿ ಸಂಸ್ಥೆಯ ಅಧ್ಯಕ್ಷ ಟಿ.ವಿ.ಮಾರುತಿ ಮಾತನಾಡಿ, 2018ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಇಲ್ಲಿನ ಜನರು ಸಂಕಷ್ಟಕ್ಕೆ ತುತ್ತಾದರು. ಆದ್ದರಿಂದ, ಜಿಲ್ಲೆಗೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಪದವಿ ಪೂರ್ವ ಕಾಲೇಜಿಗೆ ₹ 52 ಲಕ್ಷ ವೆಚ್ಚದಲ್ಲಿ ನೂತನ ಎರಡು ತರಗತಿ ಕೊಠಡಿ, ಪ್ರಯೋಗಾಲಯ, ಹೈಟೆಕ್ ಶೌಚಾಲಯ ನಿರ್ಮಿಸಲಾಗಿದೆ ಎಂದು ತಿಳಿಸಿದರು.</p>.<p>ಪೊನ್ನಂಪೇಟೆಯ ರಾಮಕೃಷ್ಣ ಶಾರದಾಶ್ರಮದ ಬೋಧ ಸ್ವರೂಪನಂದಜಿ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಒಳ್ಳೆಯ ಶಿಕ್ಷಣ ಪಡೆದು ಸಮಾಜಕ್ಕೆ ತಮ್ಮದೇ ಉತ್ತಮ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.</p>.<p>ಆಚಾರ್ಯ ಪಾಠ ಶಾಲಾ ಶಿಕ್ಷಣ ದತ್ತಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ನರಸಿಂಹ ಮೂರ್ತಿ ಮಾತನಾಡಿ, ಕೊಡಗು ಸೈನ್ಯಕ್ಕೆ, ಶಿಸ್ತಿಗೆ ಹೆಸರುವಾಸಿ ವಿದ್ಯಾರ್ಥಿಗಳು ಉತ್ತಮ ಶಿಸ್ತನ್ನು ರೂಡಿಸಿಕೊಂಡು ಯಶಸ್ವಿಗೊಳಿಸಬೇಕು ಎಂದು ಸಲಹೆ ನೀಡಿದರು.</p>.<p>ಆಚಾರ್ಯ ಪಾಠಶಾಲಾ ಶಿಕ್ಷಣ ದತ್ತಿ ಸ್ಥಾಪಕರಾದ ಆಚಾರ್ಯ ಅವರ ಪುತ್ರ ಎ.ಪಿ.ಆಚಾರ್ಯ ಅವರು ಸಂಸ್ಥೆಯ ಬೆಳವಣಿಗೆ ಹಾಗೂ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.</p>.<p>ಬೆಂಗಳೂರಿನ ನೆಹರು ಕೋ–ಆಪರೇಟಿವ್ ಸೊಸೈಟಿ ವತಿಯಿಂದ ನೂತನ ಕಟ್ಟಡಕ್ಕೆ ಅಗತ್ಯವಿರುವ ಪೀಠೋಪಕರಣಗಳನ್ನು ನೀಡಿದರು. ಸಮಾರಂಭದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜಿನ ದತ್ತಿ ನಿಧಿಯಿಂದ ನಗದು ಬಹುಮಾನ ನೀಡಲಾಯಿತು.</p>.<p>ಸಂಸ್ಥೆಯ ಉಪಾಧ್ಯಕ್ಷರಾದ ವಿಷ್ಣುಭರತ್, ಎ.ಪಿ.ಆಚಾರ್ಯ, ಖಜಾಂಚಿಗಳಾದ ಕೆ.ಎಲ್.ರಮೇಶ್, ಪ್ರಧಾನ ಕಾರ್ಯದರ್ಶಿ ಕೆ.ಪಿ.ನರಸಿಂಹಮೂರ್ತಿ, ಎ.ಮುರುಳೀಧರ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಸ್ಥೆ ದೇವಮ್ಮ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎ.ದನಂಜಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ‘ಉತ್ತಮ ಸಮಾಜ ನಿರ್ಮಿಸುವಲ್ಲಿ ಸಂಘ–ಸಂಸ್ಥೆಗಳ ಪಾತ್ರವೂ ಮುಖ್ಯ. ಆಚಾರ್ಯ ಪಾಠ ಶಾಲಾ ಶಿಕ್ಷಣ ದತ್ತಿ ಸಂಸ್ಥೆಯು ಉತ್ತಮ ಕಟ್ಟಡ ಕಟ್ಟಿಸಿಕೊಟ್ಟು ಬಡ ವಿದ್ಯಾರ್ಥಿಗಳಿಗೆ ನೆರವಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಹೇಳಿದರು.</p>.<p>ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಬೆಂಗಳೂರು ಆಚಾರ್ಯ ಪಾಠ ಶಾಲಾ ಶಿಕ್ಷಣ ದತ್ತಿ ಸಂಸ್ಥೆ ಸ್ಥಾಪಿಸಿರುವ ಭೋದನಾ ಕೊಠಡಿ ಹಾಗೂ ಕಂಪ್ಯೂಟರ್ ಲ್ಯಾಬ್ಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ತುಂಬಾ ಹಾನಿ ಉಂಟಾಗಿದ್ದು ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಸ್ಥಾನ ಪಡೆಯಲು ಸಂಸ್ಥೆ ನೆರವಾಗಿದೆ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಹಲವು ಸಮಸ್ಯೆಗಳು ಎದುರಾದಂತಹ ಸಂದರ್ಭದಲ್ಲಿ ವಿವಿಧ ಸಂಘ–ಸಂಸ್ಥೆಗಳು ಜಿಲ್ಲೆಗೆ ಉದಾರ ನೆರವು ನೀಡಿದನ್ನು ಸ್ಮರಿಸಿದರು.</p>.<p>ಅತಿವೃಷ್ಟಿ ಹಾನಿಯಿಂದ ಉಂಟಾಗಿರುವ ಸಮಸ್ಯೆಗಳು ಹಾಗೂ ಸಂಬಂಧಿಸಿದ ಪರಿಹಾರಗಳ ಕುರಿತು ಯೋಜನೆ ರೂಪಿಸಿದ್ದು ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದ್ದು, ಸಂಘ– ಸಂಸ್ಥೆಗಳ ಸಹಯೋಗದೊಂದಿಗೆ ಪುನರ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<p>ಆಚಾರ್ಯ ಪಾಠಶಾಲಾ ಶಿಕ್ಷಣ ದತ್ತಿ ಸಂಸ್ಥೆಯ ಅಧ್ಯಕ್ಷ ಟಿ.ವಿ.ಮಾರುತಿ ಮಾತನಾಡಿ, 2018ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಇಲ್ಲಿನ ಜನರು ಸಂಕಷ್ಟಕ್ಕೆ ತುತ್ತಾದರು. ಆದ್ದರಿಂದ, ಜಿಲ್ಲೆಗೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಪದವಿ ಪೂರ್ವ ಕಾಲೇಜಿಗೆ ₹ 52 ಲಕ್ಷ ವೆಚ್ಚದಲ್ಲಿ ನೂತನ ಎರಡು ತರಗತಿ ಕೊಠಡಿ, ಪ್ರಯೋಗಾಲಯ, ಹೈಟೆಕ್ ಶೌಚಾಲಯ ನಿರ್ಮಿಸಲಾಗಿದೆ ಎಂದು ತಿಳಿಸಿದರು.</p>.<p>ಪೊನ್ನಂಪೇಟೆಯ ರಾಮಕೃಷ್ಣ ಶಾರದಾಶ್ರಮದ ಬೋಧ ಸ್ವರೂಪನಂದಜಿ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಒಳ್ಳೆಯ ಶಿಕ್ಷಣ ಪಡೆದು ಸಮಾಜಕ್ಕೆ ತಮ್ಮದೇ ಉತ್ತಮ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.</p>.<p>ಆಚಾರ್ಯ ಪಾಠ ಶಾಲಾ ಶಿಕ್ಷಣ ದತ್ತಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ನರಸಿಂಹ ಮೂರ್ತಿ ಮಾತನಾಡಿ, ಕೊಡಗು ಸೈನ್ಯಕ್ಕೆ, ಶಿಸ್ತಿಗೆ ಹೆಸರುವಾಸಿ ವಿದ್ಯಾರ್ಥಿಗಳು ಉತ್ತಮ ಶಿಸ್ತನ್ನು ರೂಡಿಸಿಕೊಂಡು ಯಶಸ್ವಿಗೊಳಿಸಬೇಕು ಎಂದು ಸಲಹೆ ನೀಡಿದರು.</p>.<p>ಆಚಾರ್ಯ ಪಾಠಶಾಲಾ ಶಿಕ್ಷಣ ದತ್ತಿ ಸ್ಥಾಪಕರಾದ ಆಚಾರ್ಯ ಅವರ ಪುತ್ರ ಎ.ಪಿ.ಆಚಾರ್ಯ ಅವರು ಸಂಸ್ಥೆಯ ಬೆಳವಣಿಗೆ ಹಾಗೂ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.</p>.<p>ಬೆಂಗಳೂರಿನ ನೆಹರು ಕೋ–ಆಪರೇಟಿವ್ ಸೊಸೈಟಿ ವತಿಯಿಂದ ನೂತನ ಕಟ್ಟಡಕ್ಕೆ ಅಗತ್ಯವಿರುವ ಪೀಠೋಪಕರಣಗಳನ್ನು ನೀಡಿದರು. ಸಮಾರಂಭದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜಿನ ದತ್ತಿ ನಿಧಿಯಿಂದ ನಗದು ಬಹುಮಾನ ನೀಡಲಾಯಿತು.</p>.<p>ಸಂಸ್ಥೆಯ ಉಪಾಧ್ಯಕ್ಷರಾದ ವಿಷ್ಣುಭರತ್, ಎ.ಪಿ.ಆಚಾರ್ಯ, ಖಜಾಂಚಿಗಳಾದ ಕೆ.ಎಲ್.ರಮೇಶ್, ಪ್ರಧಾನ ಕಾರ್ಯದರ್ಶಿ ಕೆ.ಪಿ.ನರಸಿಂಹಮೂರ್ತಿ, ಎ.ಮುರುಳೀಧರ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಸ್ಥೆ ದೇವಮ್ಮ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎ.ದನಂಜಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>