‘ತಾಂತ್ರಿಕ ಸಮಿತಿ ನೀಡುವ ಎನ್ಒಸಿ ಒಂದನ್ನೇ ಆಧರಿಸಿ ಕೃಷಿ ಭೂಮಿಯನ್ನು ಅನ್ಯ ಉದ್ದೇಶಕ್ಕೆ ಪರಿವರ್ತಿಸಲು ಆಗುವುದಿಲ್ಲ’ ಎಂದು ಅಭಿಪ್ರಾಯಪಟ್ಟ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ತಾಂತ್ರಿಕ ಸಮಿತಿ ಅಧ್ಯಕ್ಷರೂ ಆಗಿರುವ ಕೊಡಗು ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಆದೇಶಿಸಿದೆ.