ಕುಶಾಲನಗರ ಮಾದಾಪಟ್ಟಣದಲ್ಲಿ ಮಂಗಳವಾರ ತಾಲ್ಲೂಕು ಆಡಳಿತ ಭವನ ಪ್ರಜಾಸೌಧ ಕಟ್ಟಡಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಸಭೀಕರು
ಕಳೆದ 2 ದಶಕಗಳ ಹೋರಾಟದ ಪ್ರಯತ್ನದ ಫಲವಾಗಿ ಕುಶಾಲನಗರ ತಾಲ್ಲೂಕು ಕೇಂದ್ರವಾಗಿದ್ದು ಪ್ರಜಾ ಸೌಧ ನಿರ್ಮಾಣವಾಗುತ್ತಿದೆ
ವಿ.ಪಿ.ಶಶಿಧರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ
ಕುಶಾಲನಗರದಲ್ಲಿ ಉಪ ವಿಭಾಗ ಕಚೇರಿ ತೆರೆಯಬೇಕು. ತಾಲ್ಲೂಕು ಕ್ರೀಡಾಂಗಣ ನಿರ್ಮಾಣ ಆಗಬೇಕು. ಉಪ ನೋಂದಾಣಾಧಿಕಾರಿ ಕಚೇರಿ ಆರಂಭಿಸಬೇಕು
ನಾಗೇಂದ್ರ ಬಾಬು ವಕೀಲರ ಸಂಘದ ಅಧ್ಯಕ್ಷ
ಮಧ್ಯವರ್ತಿಗಳ ಹಾವಳಿ ತಪ್ಪಿಸಿ; ಮಂತರ್ಗೌಡ
ಶಾಸಕ ಡಾ.ಮಂತರ್ಗೌಡ ಮಾತನಾಡಿ ‘ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಇರದಂತೆ ನೋಡಿಕೊಳ್ಳಬೇಕು ಬದ್ಧತೆಯಿಂದ ಸಾರ್ವಜನಿಕರಿಗೆ ಸ್ಪಂದಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕುಶಾಲನಗರದಲ್ಲಿ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ₹ 46 ಕೋಟಿ ರೂ. ಬಿಡುಗಡೆಯಾಗಿದ್ದು ಕಾಮಗಾರಿಗೆ ಚಾಲನೆ ನೀಡಬೇಕಿದೆ ಎಂದು ತಿಳಿಸಿದರು. ಪ್ರಜಾಸೌಧ ಆಡಳಿತ ಭವನ ನಿರ್ಮಾಣಕ್ಕೆ ಉನ್ನತ ಶಿಕ್ಷಣ ಸಚಿವರಾದ ಸುಧಾಕರ ಅವರು ಉಚಿತವಾಗಿ ಭೂಮಿ ನೀಡಿರುವುದಕ್ಕೆ ಇದೇ ಸಂದರ್ಭದಲ್ಲಿ ಅವರು ಕೃತಜ್ಞತೆ ಸಲ್ಲಿಸಿದರು. ಸಿ ಮತ್ತು ಡಿ ಭೂಮಿ ಪರಿಹಾರ ಭೂಮಿ ದುರಸ್ತಿ ಕಾರ್ಯ ಪೋಡಿ ಮುಕ್ತ ಅಭಿಯಾನ ಪ್ರಗತಿ ಭೂಮಿ ಸಂಬಂಧ ಡಿಜಿಟಲೈಜೇಸನ್ ತಹಶೀಲ್ದಾರ್ ಮತ್ತು ವಿಎ ಹಂತದಲ್ಲಿ ಬೇಗ ಕೆಲಸಗಳು ಆಗಬೇಕು ಎಂದು ಹೇಳಿದರು.