ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾವೇರಿ ಪ್ರವಾಹಕ್ಕೆ ಹಲವು ರಸ್ತೆಗಳ ಸಂಚಾರ ಬಂದ್ ಆಗಿದೆ. ಕುಶಾಲನಗರದ ತಾವರೆಕೆರೆ ಬಳಿ ಮಡಿಕೇರಿ– ಕುಶಾಲನಗರ ರಸ್ತೆಯ ಮೇಲೆ ನೀರು ಬಂದಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಿದೆ.
ಇನ್ನು ಮಡಿಕೇರಿ– ವಿರಾಜಪೇಟೆಯ ನಡುವೆಯ ಭೇತ್ರಿ ಸೇತುವೆ ಮುಳುಗಡೆ ಸ್ಥಿತಿಯಲ್ಲೇ ಇದೆ. ಬಿಳಿಗೇರಿ ಸೇತುವೆ ಕೊಚ್ಚಿ ಹೋಗಿದೆ. ಬಿಳಿಗೇರಿ – ಹಾಕತ್ತೂರು ನಡುವೆ ಸಂಪರ್ಕ ಕಡಿತಗೊಂಡಿದೆ.
ಮಡಿಕೇರಿ– ಮಂಗಳೂರು ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 275ರ ಜೋಡುಪಾಲದ ಬಳಿ ಹೆದ್ದಾರಿಯ ಒಂದು ಬದಿ ಕುಸಿದಿದೆ. ಬೃಹತ್ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.