ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ಜಿಲ್ಲೆಯಾದ್ಯಂತ ತಗ್ಗಿದ ಮಳೆ ಅಬ್ಬರ, ನಿಲ್ಲದ ಭೂಕುಸಿತ

Last Updated 11 ಆಗಸ್ಟ್ 2022, 8:34 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದರೂ ಭೂಕುಸಿತಗಳು ಗುರುವಾರವೂ ಮುಂದುವರಿದಿವೆ.

ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಊರುಗುತ್ತಿಯಲ್ಲಿ ವೆಂಕಟೇಶ್ ಎಂಬುವವರಿಗೆ ಸೇರಿದ ತೋಟದಲ್ಲಿ ದೊಡ್ಡ ಪ್ರಮಾಣದಲ್ಲಿ ಭೂಕುಸಿತವಾಗಿದೆ. ಭಾರಿ ಪ್ರಮಾಣದಲ್ಲಿ ನೀರು ನೆಲದಿಂದ ಉಕ್ಕಿ ಹರಿಯುತ್ತಿದ್ದು, ಆತಂಕ ಮೂಡಿಸಿದೆ. ಇದರಿಂದ ಕಾಫಿ ಗಿಡಗಳೂ ಸೇರಿದಂತೆ ಮಣ್ಣು, ಕಲ್ಲುಗಳು ಕೊಚ್ಚಿಕೊಂಡು ಹೋಗಿವೆ.

ಮಂಚಳ್ಳಿ–ಕುಟ್ಟ ರಸ್ತೆಯಲ್ಲೂ ಭೂಮಿ ಕುಸಿದಿದೆ. ಬಿರುನಾಣಿ– ಹುದಿಕೇರಿ ರಸ್ತೆಯಲ್ಲೂ ಮಣ್ಣು ಕುಸಿಯುತ್ತಿದೆ. ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದ ರಾಜು ಎಂಬುವವರಿಗೆ ಸೇರಿದ ಹಸು ಶೀತಗಾಳಿಯಿಂದ ಮೃತಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT