ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಧಾರಾಕಾರ ಮಳೆ ಮುಂದುವರಿದಿದೆ. ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಮದೆನಾಡು ಸಮೀಪ ಮಂಗಳವಾರ ಗುಡ್ಡದಲ್ಲಿ ದೊಡ್ಡ ಪ್ರಮಾಣದ ಬಿರುಕು ಕಾಣಿಸಿಕೊಂಡಿದ್ದು, ಆತಂಕ ಮೂಡಿಸಿದೆ. ಇಲ್ಲಿ ರಸ್ತೆ ಬದಿಯಲ್ಲಿ ಉದ್ದಕ್ಕೂ ವಿದ್ಯುತ್ ಕಂಬಗಳಿದ್ದು, ಒಂದು ವೇಳೆ ಮಣ್ಣು ಕುಸಿದು ವಿದ್ಯುತ್ ಕಂಬಗಳು ರಸ್ತೆಗೆ ಉರುಳಿದರೆ ಭಾರಿ ಅನಾಹುತವೇ ಸಂಭವಿಸಲಿದೆ.